AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪುಣ್ಯ ಜಲ ಎಂದು ತಪ್ಪಾಗಿ ಭಾವಿಸಿ ಎಸಿ ನೀರನ್ನು ಕುಡಿದ ಭಕ್ತರು; ವಿಡಿಯೋ ವೈರಲ್‌

ಇಲ್ಲೊಂದು ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಮಥುರಾ ವೃಂದಾವನದ ಬಂಕೆ ಬಿಹಾರಿ ದೇವಾಲಯದಲ್ಲಿ ಅಲ್ಲಿನ ಗೋಡೆಯ ಆನೆಯ ಮೂರ್ತಿಯಿಂದ ಸೋರಿಕೆಯಾಗುತ್ತಿದ್ದ ಎಸಿ ನೀರನ್ನು ಇದೇ ಚರಣ್‌ ಅಮೃತ ಅಂದರೆ ಶ್ರೀ ಕೃಷ್ಣನ ಪಾದದ ಪವಿತ್ರ ನೀರು ಎಂದು ತಪ್ಪಾಗಿ ಭಾವಿಸಿ ಭಕ್ತರೆಲ್ಲರೂ ಸರತಿ ಸಾಲಿನಲ್ಲಿ ಬಂದು ಅದೇ ನೀರನ್ನು ಕುಡಿದಿದ್ದಾರೆ ಮತ್ತು ಆ ನೀರನ್ನು ತಲೆಗೆ ಸ್ಪರ್ಶಿಸಿದ್ದಾರೆ. ಈ ದೃಶ್ಯವನ್ನು ಕಂಡು ʼಜನರಿಗೆ ಶಿಕ್ಷಣದ ಅವಶ್ಯಕತೆ ತುಂಬಾನೇ ಇದೆʼ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on:Nov 04, 2024 | 12:15 PM

Share

ಪ್ರತಿಯೊಬ್ಬರೂ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವರ ದರ್ಶನವನ್ನು ಮುಗಿಸಿ ಅಲ್ಲಿನ ಪವಿತ್ರ ತೀರ್ಥವನ್ನು ಸೇವನೆ ಮಾಡುತ್ತಾರೆ. ದೇವಾಲಯಗಳಲ್ಲಿ ಪವಿತ್ರ ಜಲವನ್ನು ಕುಡಿದರೆ ಅಥವಾ ಆ ನೀರನ್ನು ತಲೆಗೆ ಚಿಮುಕಿಸಿದರೆ ಪುಣ್ಯ ಲಭಿಸುತ್ತದೆ ಎಂದು ಹೆಚ್ಚಿನವರು ನಂಬುತ್ತಾರೆ. ಅದೇ ನಂಬಿಕೆಯಲ್ಲಿ ಇಲ್ಲೊಂದಷ್ಟು ಭಕ್ತರು ಮಥುರಾ ವೃಂದಾವನದ ಬಂಕೆ ಬಿಹಾರಿ ದೇವಾಲಯದಲ್ಲಿ ಆನೆಯ ಮೂರ್ತಿಯಿಂದ ಸೋರಿಕೆಯಾಗುತ್ತಿದ್ದ ಎಸಿ ನೀರನ್ನೇ ಚರಣ್‌ ಅಮೃತ ಅಂದರೆ ಶ್ರೀ ಕೃಷ್ಣನ ಪಾದದ ಪವಿತ್ರ ನೀರು ಎಂದು ತಪ್ಪಾಗಿ ಭಾವಿಸಿ ಸರತಿ ಸಾಲಿನಲ್ಲಿ ಬಂದು ಅದೇ ನೀರನ್ನು ಕುಡಿದಿದ್ದಾರೆ. ಈ ದೃಶ್ಯವನ್ನು ಕಂಡು ʼಜನರಿಗೆ ಶಿಕ್ಷಣದ ಅವಶ್ಯಕತೆ ತುಂಬಾನೇ ಇದೆʼ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಮಥುರಾದ ವೃಂದಾವನದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯದಲ್ಲಿ ನಡೆದಿದ್ದು, ಈ ದೇವಾಲಯದ ಗೋಡೆಯಲ್ಲಿರುವ ಆನೆಯ ಮೂರ್ತಿಯ ಶಿಲ್ಪದಿಂದ ನಿಗೂಢವಾಗಿ ಸೋರಿಕೆಯಾಗುತ್ತಿದ್ದ ನೀರನ್ನು ಚರಣ್‌ ಅಮೃತ ಅಂದರೆ ಶ್ರೀ ಕೃಷ್ಣನ ಪಾದದ ಪವಿತ್ರ ನೀರು ಎಂದು ತಪ್ಪಾಗಿ ಭಾವಿಸಿ ಭಕ್ತರು ಅದನ್ನು ಕುಡಿದಿದ್ದಾರೆ. ಇನ್ನೂ ಹಲವು ಭಕ್ತರು ಆ ನೀರನ್ನು ತಲೆಗೆ ಚಿಮುಕಿಸಿದ್ದಾರೆ. ವಾಸ್ತವಾಗಿ ಅದು ಎಸಿಯಿಂದ ಸೋರಿಕೆಯಾದ ನೀರಾಗಿದ್ದು, ಭಕ್ತರು ತಪ್ಪಾಗಿ ಭಾವಿಸಿ ಆ ನೀರನ್ನೇ ಪವಿತ್ರ ಜಲವೆಂದು ಕುಡಿದಿದ್ದಾರೆ.

ಈ ಕುರಿತ ವಿಡಿಯೋವನ್ನು BroominsKaBaap ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಗಂಭೀರ ಶಿಕ್ಷಣದ ಅವಶ್ಯಕತೆಯಿದೆ; ದೇವರ ಪಾದದ ಚರಣಾಮೃತ ಎಂದು ಭಾವಿಸಿ ಎಸಿ ನೀರನ್ನು ಕುಡಿದ ಜನರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಭಕ್ತರು ದೇವಾಲಯದ ಗೋಡೆಯಲ್ಲಿರುವ ಆನೆಯ ಮೂರ್ತಿ ಶಿಲ್ಪದಿಂದ ಸೋರಿಕೆಯಾಗುತ್ತಿದ್ದ ನೀರನ್ನು ಕುಡಿಯುತ್ತಿರುವ ಮತ್ತು ತಲೆಗೆ ಸ್ಪರ್ಶಿಸುತ್ತಿರುವ ದೃಶ್ಯವನ್ನು ಕಾಣಬಹುದು. ವಾಸ್ತವವಾಗಿ ಇದು ಎಸಿಯಿಂದ ಸೋರಿಕೆಯಾದ ನೀರಾಗಿದ್ದು, ಭಕ್ತರು ಇದನ್ನು ದೇವರ ಪಾದದ ಚರಣಾಮೃತ ಎಂದು ಭಾವಿಸಿ ಸರತಿ ಸಾಲಿನಲ್ಲಿ ಬಂದು ಅದರಲ್ಲಿ ಕೆಲವರು ಆ ನೀರನ್ನು ಕುಡಿದರೆ ಇನ್ನೂ ಕೆಲವರು ಆ ನೀರನ್ನು ತಲೆಗೆ ಸ್ಪರ್ಶಿಸಿದ್ದಾರೆ.

ಇದನ್ನೂ ಓದಿ: ಅಂಕಲ್‌ ಎಂದು ಕರೆದ ಬಟ್ಟೆ ಅಂಗಡಿಯವನಿಗೆ ಥಳಿಸಿದ ಗ್ರಾಹಕ

ನವೆಂಬರ್‌ 3 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ʼಕನಿಷ್ಠ ಪಕ್ಷ ದೇವಾಲಯದ ಟ್ರಸ್ಟ್‌ ಇದು ಎಸಿ ನೀರು ಎಂದು ಅಲ್ಲೊಂದು ಎಚ್ಚರಿಕೆಯ ನೋಟಿಸ್‌ ಹಾಕಬಹುದಿತ್ತುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅಬ್ಬಬ್ಬಾ ಜನರು ಇಷ್ಟೊಂದು ಮೂರ್ಖರೇʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:15 pm, Mon, 4 November 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ