Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಲ್ಲಿ ಶಾಲೆಗೆ ನುಗ್ಗಿ ಅವಾಂತರ ಸೃಷ್ಟಿಸಿದ ಕುಡುಕ ಮಹಾಶಯ; ಆಘಾತಕಾರಿ ದೃಶ್ಯ ವೈರಲ್‌

ಕುಡಿದ ಮತ್ತಿನಲ್ಲಿ ಕುಡುಕರು ಮಾಡುವಂತಹ ಅವಾಂತರ, ಎಡವಟ್ಟುಗಳಿಗೆ ಸಂಬಂಧಿಸಿದ ಒಂದಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಎಣ್ಣೆ ಬಾಟಲಿ ಸಮೇತ ಶಾಲೆಗೆ ನುಗ್ಗಿದ ಕುಡುಕನೊಬ್ಬ ವಿದ್ಯಾರ್ಥಿಗಳನ್ನು ತರಗತಿಯಿಂದ ಓಡಿಸಿ ಶಿಕ್ಷಕರ ಜೊತೆ ಅನುಚಿತವಾಗಿ ವರ್ತಿಸಿ, ಗದ್ದಲ ಸೃಷ್ಟಿಸಿದ್ದಾನೆ. ಈ ಆಘಾತಕಾರಿ ದೃಶ್ಯವನ್ನು ಕಂಡು ನೋಡುಗರು ಗರಂ ಆಗಿದ್ದಾರೆ.

ಕುಡಿದ ಮತ್ತಲ್ಲಿ ಶಾಲೆಗೆ ನುಗ್ಗಿ ಅವಾಂತರ ಸೃಷ್ಟಿಸಿದ ಕುಡುಕ ಮಹಾಶಯ; ಆಘಾತಕಾರಿ ದೃಶ್ಯ ವೈರಲ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 17, 2025 | 4:32 PM

ಉತ್ತರ ಪ್ರದೇಶ, ಮಾ. 17: ಕಂಠಪೂರ್ತಿ ಮದ್ಯ (alcohol) ಸೇವಿಸಿದ ಬಳಿಕ ಆ ಎಣ್ಣೆ ಏಟಲ್ಲಿ ತಾವು ಏನು ಮಾಡ್ತಿದ್ದೇವೆ ಎಂಬ ಅರಿವೇ ಕುಡುಕರಿಗೆ (drunkards) ಇರುವುದಿಲ್ಲ. ಹೌದು ಹೆಚ್ಚಿನ ಕುಡುಕರು ಕುಡಿದು ತೂರಾಡುತ್ತಾ ಇತರರೊಂದಿಗೆ ಜಗಳವಾಡುತ್ತಾ, ಬೇರೆಯವರ ವಸ್ತುಗಳನ್ನು ಹಾನಿ ಮಾಡುತ್ತಾ ದುರ್ವರ್ತನೆ ತೋರುತ್ತಿರುತ್ತಾರೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಕುಡುಕನೊಬ್ಬ ಶಾಲೆಗೆ (school) ನುಗ್ಗಿ ತರಗತಿಯಿಂದ ಮಕ್ಕಳನ್ನು ಓಡಿಸಿ, ಶಿಕ್ಷಕರೊಂದಿಗೆ (teachers) ಅನುಚಿತವಾಗಿ ವರ್ತಿಸಿ ವಿದ್ಯಾದೇಗುಲದಲ್ಲಿ ಗದ್ದಲವನ್ನೇ ಸೃಷ್ಟಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಕುಡುಕನ ದುರ್ವರ್ತನೆಯನ್ನು ಕಂಡು ನೋಡುಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಈ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮೀರತ್‌ನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕುಡುಕನೊಬ್ಬ ಗದ್ದಲ ಸೃಷ್ಟಿಸಿದ್ದಾನೆ. ಕಂಠ ಪೂರ್ತಿ ಮದ್ಯ ಸೇವಿಸಿ ಶಾಲೆಗೆ ನುಗ್ಗಿದ ಆತ ಶರ್ಟ್‌ ಬಿಚ್ಚಿ, ತರಗತಿಗೆ ನುಗ್ಗಿ ಅಲ್ಲಿದ್ದ ವಿದ್ಯಾರ್ಥಿಗಳನ್ನು ಓಡಿಸಿ ಶಿಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.

ಇದನ್ನೂ ಓದಿ
Image
ವಯಸ್ಸು 108 ಆದ್ರೂ ಕುಂದದ ಜೀವನೋತ್ಸಾಹ
Image
ಸೂಪ್‌ಗೆ ಮೂತ್ರ ವಿಸರ್ಜನೆ ಮಾಡಿ ಹುಚ್ಚಾಟ ಮೆರೆದ ಯುವಕರು
Image
ತಮ್ಮ ಮಗುವಿನ ಸಲುವಾಗಿ ಸಹ ಪ್ರಯಾಣಿಕರಿಗೆ ಕ್ಯೂಟ್‌ ಪತ್ರದೊಂದಿಗೆ ಗಿಫ್ಟ್‌
Image
ಪ್ಲಾಸ್ಟಿಕ್‌ ಬಾಟಲಿಯಿಂದ ತಯಾರಾದ ಸನ್‌ಲೈಟ್‌ ಪವರ್ಡ್‌ ಬಲ್ಬ್‌ ಇದು

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಮಾಹಿತಿಯ ಪ್ರಕಾರ, ಕುಡಿದ ಮತ್ತಿನಲ್ಲಿದ್ದ ಆ ದುಷ್ಕರ್ಮಿ ಶಿಕ್ಷಕರ ಮುಂದೆ ತನ್ನ ಶರ್ಟ್ ಬಿಚ್ಚಿ, ಮೇಜಿನ ಮೇಲೆ ಕುಳಿತು ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಶಿಕ್ಷಕರು ದೂರನ್ನು ನೀಡಿದ್ದು, ಅವರು ನೀಡಿದ ದೂರಿನ ಆಧಾರದ ಮೇರೆಗೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಕುರಿತ ವಿಡಿಯೋವನ್ನು Hate Detector ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸೊಂಟದಲ್ಲೊಂದು ಮದ್ಯದ ಬಾಟಲಿ ಹಾಗೂ ಕೈಯಲ್ಲಿ ಶರ್ಟ್‌ ಹಿಡಿದು ಶಾಲೆಗೆ ನುಗ್ಗಿದ್ದ ಕುಡುಕನೊಬ್ಬ ಗದ್ದಲ ಸೃಷ್ಟಿಸಿರುವ ದೃಶ್ಯವನ್ನು ಕಾಣಬಹುದು. ಸೀದಾ ತರಗತಿಯೊಳಗೆ ಬಂದ ಆತ ಅಲ್ಲಿದ್ದ ಮಕ್ಕಳನ್ನು ಓಡಿಸಿದ್ದಾನೆ. ಅಷ್ಟೇ ಅಲ್ಲದೆ ಶಿಕ್ಷಕರಿಗೂ ಧಮ್ಕಿ ಹಾಕಿದ್ದಾನೆ.

ಇದನ್ನೂ ಓದಿ: ನೀವು ಚಿಕನ್ ಟಿಕ್ಕಾ ಮಸಾಲಾ ಕೇಳಿ ಇರ್ತೀರಾ, ಇದು ಚಿಕನ್ ಟಿಕ್ಕಾ ಮಸಾಲಾ ಕೇಕ್ : ಅಮೇರಿಕಾದ ಖ್ಯಾತ ಬಾಣಸಿಗ ಹೊಸ ಪ್ರಯೋಗ

ಮಾರ್ಚ್‌ 16 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಇದೆಲ್ಲವೂ ಸಾಧ್ಯʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಂತಹವರನ್ನು ಒದ್ದು ಒಳಗೆ ಹಾಕಬೇಕುʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼದೇಶದಲ್ಲಿ ಗೂಂಡಾಗಳ ಸಂಖ್ಯೆ ಹೆಚ್ಚಾಗುತ್ತಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Mon, 17 March 25

ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ