AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುವಿನೊಂದಿಗೆ ಮಿಲನವಾಗಲು ಹೋಗಿ ವೃದ್ಧನಿಗೆ ಗುದ್ದಿದ ಹೋರಿ, ರೈತನ ಪ್ರಾಣವೇ ಹೋಯ್ತು

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳನ್ನು ನಿಜಕ್ಕೂ ನಮ್ಮನ್ನು ಬೆಚ್ಚಿ ಬೀಳಿಸುವಂತಿರುತ್ತವೆ. ಅಂತಹದ್ದೊಂದು ಆಘಾತಕಾರಿ ವಿಡಿಯೋ ಇದೀಗ ವೈರಲ್‌ ಆಗಿದ್ದು, ಬೀಡಾಡಿ ಹೋರಿ ಗುದ್ದಿದ್ದೇಟಿಗೆ ರೈತರೊಬ್ಬರ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬಂದಿದ್ದ ಸಂದರ್ಭದಲ್ಲಿ ಹೋರಿ ಬಂದು ಗುದ್ದಿದ್ದು, ಈ ಆಘಾತಕಾರಿ ದೃಶ್ಯವನ್ನು ಕಂಡು ನೋಡುಗರು ಬೆಚ್ಚಿ ಬಿದ್ದಿದ್ದಾರೆ.

ಹಸುವಿನೊಂದಿಗೆ ಮಿಲನವಾಗಲು ಹೋಗಿ ವೃದ್ಧನಿಗೆ ಗುದ್ದಿದ ಹೋರಿ, ರೈತನ ಪ್ರಾಣವೇ ಹೋಯ್ತು
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 07, 2025 | 4:18 PM

Share

ಉತ್ತರ ಪ್ರದೇಶ, ಮಾ.07: ಸಾಮಾನ್ಯವಾಗಿ ಪಟ್ಟಣ, ನಗರ ಪ್ರದೇಶಗಳಲ್ಲಿ ಬೀಡಾಡಿ ದನ, ಬೀದಿ ನಾಯಿಗಳ ಹಾವಳಿ ತುಸು ಹೆಚ್ಚೇ ಇರುತ್ತದೆ. ಇವುಗಳ ಕಾಟಕ್ಕೆ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಪರದಾಡುತ್ತಾರೆ. ಹೌದು ಇವುಗಳು ರಸ್ತೆಯ ಮಧ್ಯೆ ಮಲಗುವ ಮೂಲಕ ಸಂಚಾರಕ್ಕೂ ಅಡ್ಡಿ ಉಂಟು ಮಾಡುವುದು ಮಾತ್ರವಲ್ಲದೆ ಅಂಗಡಿ ಮುಂಗಟ್ಟುಗಳ ಬಳಿ ವ್ಯಾಪಾರಸ್ಥರಿಗೂ ಕೆಲವೊಮ್ಮೆ ಕಿರಿಕಿರಿ ಉಂಟು ಮಾಡುತ್ತದೆ. ಆದ್ರೆ ಇಲ್ಲೊಂದು ಕಡೆ ಬೀಡಾಡಿ ದನದ ಕಾಟಕ್ಕೆ ರೈತರೊಬ್ಬರ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ವೃದ್ಧ ರೈತ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಮಾರುಕಟ್ಟೆಗೆ ಬಂದಿದ್ದ ಸಂದರ್ಭದಲ್ಲಿ ಮದವೇರಿದ ಹೋರಿ ಬಂದು ಗುದ್ದಿದ್ದು, ಈ ಆಘಾತಕಾರಿ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹೋರಿ ಗುದ್ದಿದ ಪರಿಣಾಮ ರೈತ ಅಬ್ದುಲ್‌ ವಾಹಿದ್‌ ಸಾವನ್ನಪ್ಪಿದ್ದಾರೆ. ಮಾರ್ಚ್‌ 6 ರಂದು ಬೆಳಗ್ಗೆ 11.45 ರ ಸುಮಾರಿಗೆ ಅವರು ರಾಜಾಪುರದ ಮಾರುಕಟ್ಟೆಗೆ ತರಕಾರಿ ಕೊಳ್ಳಲು ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಸುವಿನೊಂದು ಮಿಲನವಾಗಲು ಹೋಗಿ ಬೀಡಾಡಿ ಹೋರಿಯೊಂದು ರೈತ ಅಬ್ದುಲ್‌ ವಾಹಿದ್‌ಗೆ ಗುದ್ದಿದೆ. ಹೋರಿಯ ಹೊಡೆತಕ್ಕೆ ಸಿಕ್ಕಿದ ವಾಹಿದ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ
Image
ವಿಡಿಯೋ ಕಾಲ್‌ ಮೂಲಕ ಪಾಕ್ ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾದ ಭಾರತೀಯ ಯುವತಿ
Image
ಕ್ಯಾಬೇಜ್ ಗೋಬಿಗೆ 50 ರೂ., ಹೂಕೋಸು ಗೋಬಿಗೆ 70 ರೂ
Image
ಮರಿಮೊಮ್ಮಗಳ ಜೊತೆ ಮಕ್ಕಳಂತೆ ಆಟವಾಡಿದ ಮುತ್ತಾತ
Image
UPPSC ಪರೀಕ್ಷೆಯಲ್ಲಿ 6 ನೇ ರ‍್ಯಾಂಕ್‌ ಗಳಿಸಿ ಡಿಎಸ್ಪಿ ಆದ ಸುಂದರಿ ಇವ್ರೇ ನ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸಚಿನ್‌ ಗುಪ್ತಾ (SachinGuptaUP) ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮಾರುಕಟ್ಟೆಯ ಒಂದು ಕಡೆಯಲ್ಲಿ ಜನ ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವ ಹಾಗೂ ಇನ್ನೊಂದು ಕಡೆ ಬೀಡಾಡಿ ದನಗಳ ಗುಂಪೊಂದು ಎಸೆದ ತರಕಾರಿಗಳನ್ನು ತಿನ್ನುತ್ತಿರುವ ದೃಶ್ಯವನ್ನು ಕಾಣಬಹುದು. ಆ ಸಂದರ್ಭದಲ್ಲಿ ಅಲ್ಲಿದ್ದ ಬೀಡಾಡಿ ಹೋರಿ ಹಸುವಿನೊಂದಿಗೆ ಮಿಲನವಾಗಲು ಹೋಗಿ ವೃದ್ಧರೊಬ್ಬರಿಗೆ ಗುದ್ದಿದೆ.

ಇದನ್ನೂ ಓದಿ: ಚಿಕಿತ್ಸೆಯ ನೆಪದಲ್ಲಿ 1 ಲಕ್ಷ ರೂ. ಪಾವತಿಸುವಂತೆ ಒತ್ತಾಯಿಸಿದ್ದಾರೆ; ಬ್ರೀಥಿಂಗ್ ಪೈಪ್‌ ಸಮೇತ ಐಸಿಯುನಿಂದ ತಪ್ಪಿಸಿಕೊಂಡು ಹೋದ ರೋಗಿ

ಮಾರ್ಚ್‌ 06 ರಂದು ಶೇರ್‌ ಮಾಡಲಾದ ಈ ವಿಡಿಯೋ 2.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ದೃಶ್ಯ ತುಂಬಾ ದುಃಖಕರವಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬೀಡಾಡಿ ದನಗಳ ಹಾವಳಿಯನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆʼ ಎಂದು ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಮ್ಮ ದೇಶದಲ್ಲಿ ಮನುಷ್ಯನ ಜೀವಕ್ಕೆ ಬೆಲೆಯೇ ಇಲ್ಲʼ ಎಂದು ಕಿಡಿ ಕಾರಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ