AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇನ್‌ಸ್ಟಾಗ್ರಾಮ್‌ ಲವ್; ಪ್ರೇಯಸಿಯನ್ನು ಭೇಟಿಯಾಗಲು ಬಂದವನಿಗೆ ಮದುವೆ ಮಾಡಿಸಿದ ಕುಟುಂಬಸ್ಥರು

ನಿನ್ನೆಯಷ್ಟೇ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಆಕೆ ಪ್ರೀತಿಸಿದ ಯುವಕಕ ಜೊತೆ ಮಾಡಿಸಿದ ಸುದ್ದಿಯೊಂದು ಸಖತ್‌ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಇನ್ನೊಂದು ಪ್ರಕರಣವೊಂದು ಬೆಳಕಿಗೆ ಬಂದಿದ್ದು, ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಪ್ರೇಮಿಗಳಿಗೆ ಯುವತಿಯ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ. ಆ ಯುವಕ ಪ್ರೇಯಸಿಯನ್ನು ಭೇಟಿ ಮಾಡುವ ಸಲುವಾಗಿ ಆಕೆಯ ಗ್ರಾಮಕ್ಕೆ ಬಂದಿದ್ದಾನೆ. ಆ ಸಂದರ್ಭದಲ್ಲಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಈ ಇಬ್ಬರಿಗೆ ಒತ್ತಾಯ ಪೂರ್ವಕವಾಗಿ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಇನ್‌ಸ್ಟಾಗ್ರಾಮ್‌ ಲವ್; ಪ್ರೇಯಸಿಯನ್ನು ಭೇಟಿಯಾಗಲು ಬಂದವನಿಗೆ ಮದುವೆ ಮಾಡಿಸಿದ ಕುಟುಂಬಸ್ಥರು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 28, 2025 | 12:29 PM

Share

ಉತ್ತರ ಪ್ರದೇಶ: ಮಕ್ಕಳ ಪ್ರೇಮ ಪುರಾಣ (Love story) ಮನೆಯವರಿಗೆ ಗೊತ್ತಾದ್ರೆ ಅವರಿಗೆ ಹೊಡೆದು ಬಡಿದು ಮಾಡ್ತಾರೆ. ಜೊತೆಗೆ ಪ್ರೀತಿಗೆ ವಿರೋಧ ವ್ಯಕ್ತಪಡಿಸುವ ಮೂಲಕ ಪ್ರೇಮಿಗಳಿಬ್ಬರನ್ನು ದೂರ ಮಾಡಲು ನೋಡ್ತಾರೆ. ಆದ್ರೆ ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಮಸ್ಥರ (villagers) ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಪ್ರೇಮಿಗಳಿಬ್ಬರಿಗೆ (lovers) ಕುಟುಂಬಸ್ಥರೇ ಮದುವೆ (marriage) ಮಾಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ (Instagram) ಮೂಲಕ ಈ ಇಬ್ಬರಿಗೂ ಪರಿಚಯವಾಗಿದ್ದು, ಆ ಯುವಕ ಪ್ರೇಯಸಿಯನ್ನು ಭೇಟಿ ಮಾಡುವ ಸಲುವಾಗಿ ಆಕೆಯ ಗ್ರಾಮಕ್ಕೆ ಬಂದಿದ್ದಾನೆ. ಹೀಗೆ ಇವರಿಬ್ಬರು ಏಕಾಂತದಲ್ಲಿ ಸಮಯ ಕಳೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದು, ಈ ವಿಷಯ ಯುವತಿಯ ಕುಟುಂಬಸ್ಥರ ಕಿವಿಗೆ ಬೀಳುತ್ತಿದ್ದಂತೆ, ಪ್ರೇಮಿಗಳಿಬ್ಬರನ್ನು ಹಿಡಿದು ದೇವಸ್ಥಾನದಲ್ಲಿ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಜಲೌನ್‌ನಲ್ಲಿ ಈ ಘಟನೆ ನಡೆದಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಪ್ರೇಮಿಗಳಿಬ್ಬರಿಗೆ ಯುವತಿಯ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ ಮೂಲಕ ಈ ಇಬ್ಬರಿಗೂ ಪರಿಚಯವಾಗಿದ್ದು, ಯುವಕ ಪ್ರೇಯಸಿಯನ್ನು ನೋಡುವ ಸಲುವಾಗಿ ಆಕೆಯ ಗ್ರಾಮಕ್ಕೆ ಬಂದಿದ್ದಾನೆ. ಮತ್ತು ಈ ಇಬ್ಬರು ಏಕಾಂತದಲ್ಲಿ ಕುಳಿತು ಸಮಯ ಕಳೆಯುತ್ತಿದ್ದಾಗ, ಗ್ರಾಮಸ್ಥರ ಕಣ್ಣಿಗೆ ಬಿದ್ದಿದ್ದು, ತಕ್ಷಣ ಈ ವಿಷಯವನ್ನು ಅವರು ಯುವತಿಯ ಕುಟುಂಬಸ್ಥರಿಗೆ ತಿಳಿಸುತ್ತಾರೆ. ನಂತರ ಕುಟುಂಬಸ್ಥರು ಈ ಇಬ್ಬರನ್ನು ಹಿಡಿದು ದೇವಾಲಯವೊಂದರಲ್ಲಿ ಮದುವೆ ಮಾಡಿಸಿದ್ದಾರೆ. ಆದರೆ ಈ ಮದುವೆಗೆ ಯುವಕನ ತಂದೆ ವಿರೋಧ ವ್ಯಕ್ತಪಡಿಸಿ, ಮನೆಗೆ ಬರದಂತೆ ಎಚ್ಚರಿಕೆ ನೀಡಿದ್ದಾರೆ. ಇದೀಗ ಈ ವಿಶಿಷ್ಟ ಮದುವೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ
Image
ಹಿರಿ ಜೀವಗಳಿಗೆ  ಮರುಮದುವೆ ಮಾಡಿಸಿದ ಮೊಮ್ಮಕ್ಕಳು
Image
ರಾತ್ರಿಯ ರೊಮ್ಯಾ‌ನ್ಸ್ ವಿಡಿಯೋ ಶೇರ್‌ ಮಾಡಿದ ನವಜೋಡಿ
Image
ಕೋಪದಲ್ಲಿ ಗಂಡನ ನಾಲಿಗೆ ಕಚ್ಚಿ ತುಂಡರಿಸಿದ ಹೆಂಡತಿ
Image
ಯಾವ ಲಾಭದಾಯಕ ಉದ್ದಿಮೆಗೂ ಕಮ್ಮಿಯಿಲ್ಲ ಈ ಚೇಳು ಸಾಕಾಣಿಕೆ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, “ಪ್ರೇಮಿಗಳಿಗೆ ಒತ್ತಾಯಪೂರ್ವಕವಾಗಿ ಮದುವೆ ಮಾಡಿಸಿದ ಗೆಳತಿಯ ಕುಟುಂಬಸ್ಥರು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕ ತನ್ನ ಪ್ರೇಯಸಿಯ ಕುತ್ತಿಗೆಗೆ ಹೂವಿನ ಹಾರವನ್ನು ಹಾಕುವಂತಹ ದೃಶ್ಯವನ್ನು ಕಾಣಬಹುದು. ಸಿಕ್ಕಿಬಿದ್ದ ಈ ಪ್ರೇಮಿಗಳನ್ನು ಹತ್ತಿರದ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಯುವತಿಯ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ಅಮಿತ್​​ ಶಾ ಹೃದಯ ಗೆದ್ದ ಪುಟ್ಟಕ್ಕ, 7 ವರ್ಷದ ಬಾಲಕಿಯ ಪ್ರತಿಭೆಗೆ ಭಾರೀ ಮೆಚ್ಚುಗೆ

ಮಾರ್ಚ್‌ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 62 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ಒಳ್ಳೆಯ ಕಾರ್ಯʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೀಗೆ ಒತ್ತಾಯಪೂರ್ವಕವಾಗಿ ಮದುವೆ ಮಾಡಿಸುವುದು ತಪ್ಪಲ್ಲವೆʼ ಎಂದು ಕೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್