AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇನ್‌ಸ್ಟಾಗ್ರಾಮ್‌ ಲವ್; ಪ್ರೇಯಸಿಯನ್ನು ಭೇಟಿಯಾಗಲು ಬಂದವನಿಗೆ ಮದುವೆ ಮಾಡಿಸಿದ ಕುಟುಂಬಸ್ಥರು

ನಿನ್ನೆಯಷ್ಟೇ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಆಕೆ ಪ್ರೀತಿಸಿದ ಯುವಕಕ ಜೊತೆ ಮಾಡಿಸಿದ ಸುದ್ದಿಯೊಂದು ಸಖತ್‌ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಇನ್ನೊಂದು ಪ್ರಕರಣವೊಂದು ಬೆಳಕಿಗೆ ಬಂದಿದ್ದು, ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಪ್ರೇಮಿಗಳಿಗೆ ಯುವತಿಯ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ. ಆ ಯುವಕ ಪ್ರೇಯಸಿಯನ್ನು ಭೇಟಿ ಮಾಡುವ ಸಲುವಾಗಿ ಆಕೆಯ ಗ್ರಾಮಕ್ಕೆ ಬಂದಿದ್ದಾನೆ. ಆ ಸಂದರ್ಭದಲ್ಲಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಈ ಇಬ್ಬರಿಗೆ ಒತ್ತಾಯ ಪೂರ್ವಕವಾಗಿ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಇನ್‌ಸ್ಟಾಗ್ರಾಮ್‌ ಲವ್; ಪ್ರೇಯಸಿಯನ್ನು ಭೇಟಿಯಾಗಲು ಬಂದವನಿಗೆ ಮದುವೆ ಮಾಡಿಸಿದ ಕುಟುಂಬಸ್ಥರು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 28, 2025 | 12:29 PM

Share

ಉತ್ತರ ಪ್ರದೇಶ: ಮಕ್ಕಳ ಪ್ರೇಮ ಪುರಾಣ (Love story) ಮನೆಯವರಿಗೆ ಗೊತ್ತಾದ್ರೆ ಅವರಿಗೆ ಹೊಡೆದು ಬಡಿದು ಮಾಡ್ತಾರೆ. ಜೊತೆಗೆ ಪ್ರೀತಿಗೆ ವಿರೋಧ ವ್ಯಕ್ತಪಡಿಸುವ ಮೂಲಕ ಪ್ರೇಮಿಗಳಿಬ್ಬರನ್ನು ದೂರ ಮಾಡಲು ನೋಡ್ತಾರೆ. ಆದ್ರೆ ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಮಸ್ಥರ (villagers) ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಪ್ರೇಮಿಗಳಿಬ್ಬರಿಗೆ (lovers) ಕುಟುಂಬಸ್ಥರೇ ಮದುವೆ (marriage) ಮಾಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ (Instagram) ಮೂಲಕ ಈ ಇಬ್ಬರಿಗೂ ಪರಿಚಯವಾಗಿದ್ದು, ಆ ಯುವಕ ಪ್ರೇಯಸಿಯನ್ನು ಭೇಟಿ ಮಾಡುವ ಸಲುವಾಗಿ ಆಕೆಯ ಗ್ರಾಮಕ್ಕೆ ಬಂದಿದ್ದಾನೆ. ಹೀಗೆ ಇವರಿಬ್ಬರು ಏಕಾಂತದಲ್ಲಿ ಸಮಯ ಕಳೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದು, ಈ ವಿಷಯ ಯುವತಿಯ ಕುಟುಂಬಸ್ಥರ ಕಿವಿಗೆ ಬೀಳುತ್ತಿದ್ದಂತೆ, ಪ್ರೇಮಿಗಳಿಬ್ಬರನ್ನು ಹಿಡಿದು ದೇವಸ್ಥಾನದಲ್ಲಿ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಜಲೌನ್‌ನಲ್ಲಿ ಈ ಘಟನೆ ನಡೆದಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಪ್ರೇಮಿಗಳಿಬ್ಬರಿಗೆ ಯುವತಿಯ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ ಮೂಲಕ ಈ ಇಬ್ಬರಿಗೂ ಪರಿಚಯವಾಗಿದ್ದು, ಯುವಕ ಪ್ರೇಯಸಿಯನ್ನು ನೋಡುವ ಸಲುವಾಗಿ ಆಕೆಯ ಗ್ರಾಮಕ್ಕೆ ಬಂದಿದ್ದಾನೆ. ಮತ್ತು ಈ ಇಬ್ಬರು ಏಕಾಂತದಲ್ಲಿ ಕುಳಿತು ಸಮಯ ಕಳೆಯುತ್ತಿದ್ದಾಗ, ಗ್ರಾಮಸ್ಥರ ಕಣ್ಣಿಗೆ ಬಿದ್ದಿದ್ದು, ತಕ್ಷಣ ಈ ವಿಷಯವನ್ನು ಅವರು ಯುವತಿಯ ಕುಟುಂಬಸ್ಥರಿಗೆ ತಿಳಿಸುತ್ತಾರೆ. ನಂತರ ಕುಟುಂಬಸ್ಥರು ಈ ಇಬ್ಬರನ್ನು ಹಿಡಿದು ದೇವಾಲಯವೊಂದರಲ್ಲಿ ಮದುವೆ ಮಾಡಿಸಿದ್ದಾರೆ. ಆದರೆ ಈ ಮದುವೆಗೆ ಯುವಕನ ತಂದೆ ವಿರೋಧ ವ್ಯಕ್ತಪಡಿಸಿ, ಮನೆಗೆ ಬರದಂತೆ ಎಚ್ಚರಿಕೆ ನೀಡಿದ್ದಾರೆ. ಇದೀಗ ಈ ವಿಶಿಷ್ಟ ಮದುವೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ
Image
ಹಿರಿ ಜೀವಗಳಿಗೆ  ಮರುಮದುವೆ ಮಾಡಿಸಿದ ಮೊಮ್ಮಕ್ಕಳು
Image
ರಾತ್ರಿಯ ರೊಮ್ಯಾ‌ನ್ಸ್ ವಿಡಿಯೋ ಶೇರ್‌ ಮಾಡಿದ ನವಜೋಡಿ
Image
ಕೋಪದಲ್ಲಿ ಗಂಡನ ನಾಲಿಗೆ ಕಚ್ಚಿ ತುಂಡರಿಸಿದ ಹೆಂಡತಿ
Image
ಯಾವ ಲಾಭದಾಯಕ ಉದ್ದಿಮೆಗೂ ಕಮ್ಮಿಯಿಲ್ಲ ಈ ಚೇಳು ಸಾಕಾಣಿಕೆ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, “ಪ್ರೇಮಿಗಳಿಗೆ ಒತ್ತಾಯಪೂರ್ವಕವಾಗಿ ಮದುವೆ ಮಾಡಿಸಿದ ಗೆಳತಿಯ ಕುಟುಂಬಸ್ಥರು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕ ತನ್ನ ಪ್ರೇಯಸಿಯ ಕುತ್ತಿಗೆಗೆ ಹೂವಿನ ಹಾರವನ್ನು ಹಾಕುವಂತಹ ದೃಶ್ಯವನ್ನು ಕಾಣಬಹುದು. ಸಿಕ್ಕಿಬಿದ್ದ ಈ ಪ್ರೇಮಿಗಳನ್ನು ಹತ್ತಿರದ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಯುವತಿಯ ಕುಟುಂಬಸ್ಥರು ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ಅಮಿತ್​​ ಶಾ ಹೃದಯ ಗೆದ್ದ ಪುಟ್ಟಕ್ಕ, 7 ವರ್ಷದ ಬಾಲಕಿಯ ಪ್ರತಿಭೆಗೆ ಭಾರೀ ಮೆಚ್ಚುಗೆ

ಮಾರ್ಚ್‌ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 62 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ಒಳ್ಳೆಯ ಕಾರ್ಯʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೀಗೆ ಒತ್ತಾಯಪೂರ್ವಕವಾಗಿ ಮದುವೆ ಮಾಡಿಸುವುದು ತಪ್ಪಲ್ಲವೆʼ ಎಂದು ಕೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ