AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ತರಗತಿಯಲ್ಲೇ ಗಡದ್ದಾಗಿ ನಿದ್ದೆಗೆ ಜಾರಿದ ಸರ್ಕಾರಿ ಶಾಲಾಶಿಕ್ಷಕಿ, ವಿಡಿಯೋ ವೈರಲ್

ಮಕ್ಕಳಿಗೆ ಒಳ್ಳೆಯ ಶಿಕ್ಷಣ ದೊರೆತು ಒಂದೊಳ್ಳೆ ಬದುಕು ಕಟ್ಟಿಕೊಳ್ಳಲಿ ಎನ್ನುವುದು ಪ್ರತಿಯೊಬ್ಬ ತಂದೆ ತಾಯಂದಿರ ಆಸೆ. ಹೀಗಾಗಿ ಎಷ್ಟೇ ಕಷ್ಟವಾಗಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಲಿ ಎಂದು ಶಾಲೆಗೆ ಕಳುಹಿಸುತ್ತಾರೆ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕಿಯೇ ತರಗತಿಯಲ್ಲಿ ನಿದ್ದೆಗೆ ಜಾರಿದ್ದಾರೆ. ಸರ್ಕಾರಿ ಶಿಕ್ಷಕಿ ತರಗತಿಯಲ್ಲಿ ನಿದ್ದೆ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ, ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral : ತರಗತಿಯಲ್ಲೇ ಗಡದ್ದಾಗಿ ನಿದ್ದೆಗೆ ಜಾರಿದ ಸರ್ಕಾರಿ ಶಾಲಾಶಿಕ್ಷಕಿ, ವಿಡಿಯೋ ವೈರಲ್
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: Apr 11, 2025 | 9:44 AM

Share

ಉತ್ತರ ಪ್ರದೇಶ, ಏಪ್ರಿಲ್ 10: ವಿದ್ಯಾರ್ಥಿ (student)ಗಳ ಜೀವನದಲ್ಲಿ ಶಿಕ್ಷಕ (teachers)ರ ಪಾತ್ರ ಬಹುದೊಡ್ಡದು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಶ್ರಮವಹಿಸುತ್ತಾರೆ. ಈ ಮಕ್ಕಳಿಗೆ ಭವಿಷ್ಯವನ್ನು ಕಟ್ಟಿಕೊಡಬೇಕಾದ ಶಿಕ್ಷಕರೇ ಯಾವುದೇ ಟೆನ್ಶನ್ ಇಲ್ಲದೇ ನಿದ್ದೆ ಮಾಡಿದರೆ ಹೇಗಿರುತ್ತೆ ಎಂದು ಯೋಚಿಸಿದ್ದೀರಾ. ಉತ್ತರ ಪ್ರದೇಶ (uttar pradesh) ದ ಮೀರತ್‌ (meerut) ನ ಕೃಷ್ಣಪುರಿ ಜೂನಿಯರ್ ಹೈಸ್ಕೂಲ್‌ (krishnapuri junior highschool) ನ ಶಿಕ್ಷಕಿಯೊಬ್ಬರು ತರಗತಿಯಲ್ಲೇ ನಿದ್ರೆಗೆ ಜಾರಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ನೆಟ್ಟಿಗರು ಫುಲ್ ಗರಂ ಆಗಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.

Theindianbuzz ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಶಾಲಾ ಅವಧಿಯಲ್ಲೇ ಮಕ್ಕಳ ಸಮ್ಮುಖದಲ್ಲಿ ತರಗತಿಯೊಳಗೆ ನಿದ್ದೆಗೆ ಜಾರಿರುವ ಶಿಕ್ಷಕಿಯನ್ನು ನೋಡಬಹುದು. ಹೌದು, ಮಹಿಳಾ ಶಿಕ್ಷಕಿ ಮಕ್ಕಳ ಬಗ್ಗೆ ಯೋಚನೆಯೇ ಇಲ್ಲದೇ ಕುರ್ಚಿಯ ಮೇಲೆ ಆರಾಮವಾಗಿ ಕುಳಿತು ನಿದ್ರಿಸಿದ್ದಾರೆ. ಈ ಶಿಕ್ಷಕಿಯೂ ಗಾಢವಾದ ನಿದ್ರೆಯಲ್ಲಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ವಿದ್ಯಾರ್ಥಿಯೊಬ್ಬರು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಮೂಲ ಶಿಕ್ಷಣ ಅಧಿಕಾರಿ (ಬಿಎಸ್‌ಎ) ಆಶಾ ಚೌಧರಿ ಪ್ರತಿಕ್ರಿಯೆ ನೀಡಿದ್ದು, ಈ ವಿಷಯ ಗಮನಕ್ಕೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಲಾಗಿದೆ. ತನಿಖೆಯ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಸಲುವಾಗಿ, ಬೇಜವಾಬ್ದಾರಿತನ ತೋರುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಬ್ಬಬಾ ಸೆಕೆ ತಡೆಯೋಕೆ ಆಗಲ್ಲ, ಹೀಗೆ ಮಾಡಿದ್ರೆ ಮೈಯೆಲ್ಲಾ ಕೂಲ್ ಆಗುತ್ತೆ

ಈ ವಿಡಿಯೋವೊಂದು ಅಧಿಕ ವೀಕ್ಷಣೆ ಕಂಡಿದ್ದು, ಕಾಮೆಂಟ್ ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು,’ಶಿಕ್ಷಕರೇ ತಮ್ಮ ಕರ್ತವ್ಯ ಮರೆತರೆ ಮಕ್ಕಳ ಶಿಕ್ಷಣದ ಭವಿಷ್ಯ ಏನಾಗಬಹುದು’ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು, ತರಗತಿಯಲ್ಲಿ ಬೇಜವಾಬ್ದಾರಿ ತೋರುವ ಶಿಕ್ಷಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಮತ್ತೊಬ್ಬರು, ‘ಈ ರೀತಿ ಶಿಕ್ಷಕರು ಒಬ್ಬರು ಇದ್ದರೆ ಶಾಲೆ ಹಾಗೂ ಶಿಕ್ಷಣದ ಗುಣಮಟ್ಟ ಹೇಗೆ ಸುಧಾರಿಸುತ್ತಾರೆ. ಸಂಬಂಧ ಪಟ್ಟ ಶಿಕ್ಷಣ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಿ’ ಎಂದು ಕಾಮೆಂಟ್ ಮಾಡಿದ್ದಾರೆ. ಅವರಿಗೇಣಿ ಆಗಬೇಕು, ಸರ್ಕಾರಿ ಉದ್ಯೋಗ ಸಂಬಳ ಸಮಯಕ್ಕೆ ಸರಿಯಾಗಿ ಬರುತ್ತದೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?