AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜ್ಯೂಸ್‌ಗೆ ಮೂತ್ರ ಮಿಕ್ಸ್‌ ಮಾಡಿ ಮಾರಾಟ; ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಅಂಗಡಿಯಾತ

ಕನ್ವರ್‌ ಯಾತ್ರೆಯು ಹಿಂದೂಗಳ ವಾರ್ಷಿಕ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಲಕ್ಷಾತಂರ ಭಕ್ತರು ಈ ಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಈ ಯಾತ್ರೆ ಸಾಗುವ ಮಾರ್ಗದಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳಿದ್ದು, ಅದರೊಲೊಂದು ಜ್ಯೂಸ್‌ ಅಂಗಡಿಯ ಮಾಲೀಕ ಇದೀಗ ಜ್ಯೂಸ್‌ಗೆ ಮೂತ್ರ ಬೆರೆಸಿ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Video: ಜ್ಯೂಸ್‌ಗೆ ಮೂತ್ರ ಮಿಕ್ಸ್‌ ಮಾಡಿ ಮಾರಾಟ; ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಅಂಗಡಿಯಾತ
ವೈರಲ್‌ ವಿಡಿಯೋImage Credit source: Social Media
ಮಾಲಾಶ್ರೀ ಅಂಚನ್​
|

Updated on: Jul 14, 2025 | 1:33 PM

Share

ಗ್ರಾಹಕರಿಗೆ ನೀಡುವ ಆಹಾರದ ವಿಷಯದಲ್ಲಿ ಹೋಟೆಲ್‌ಗಳು ಮತ್ತು ಅಂಗಡಿಗಳು ತುಸು ಹೆಚ್ಚೇ ನೈರ್ಮಲ್ಯ  ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಆದರೆ ಕೆಲವರು ಇದರ ಬಗ್ಗೆ ಗಮನ ಹರಿಸುವುದೇ ಇಲ್ಲ. ಇಷ್ಟು ಮಾತ್ರವಲ್ಲದೆ ಜ್ಯೂಸ್‌ಗೆ ಮೂತ್ರ ಮಿಕ್ಸ್‌ ಮಾಡಿ, ಆಹಾರಕ್ಕೆ ಉಗುಳು ಮಿಶ್ರಣ ಮಾಡಿ ಗ್ರಾಹಕರಿಗೆ ಕೊಟ್ಟಂತಹತ ಅದೆಷ್ಟೋ ಪ್ರಕರಣಗಳು ನಡೆದಿವೆ. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲೂ (Ghaziabad) ಸಹ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕನ್ವರ್‌ ಯಾತ್ರೆಗೆ ಹೋಗುವ ದಾರಿ ಮಧ್ಯದಲ್ಲಿ ಜ್ಯೂಸ್‌ ಅಂಗಡಿ ಮಾಲೀಕನೊಬ್ಬ ಮೂತ್ರ ಬೆರೆಸಿದ (vendor caught selling urine mixed juice) ಜ್ಯೂಸನ್ನು ಗ್ರಾಹಕರಿಗೆ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದಾನೆ. ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದು, ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ.

ಜ್ಯೂಸ್‌ಗೆ ಮೂತ್ರ ಬೆರೆಸಿ ಮಾರಾಟ ಮಾಡಿದ ಅಂಗಡಿ ಮಾಲೀಕ:

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಅಮೀರ್‌ ಖಾನ್‌ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ಮೂತ್ರ ಬೆರೆಸಿದ ಜ್ಯೂಸ್‌ ಮಾರಾಟ ಮಾಡಿ ಸಿಕ್ಕಿಬಿದ್ದಿದ್ದಾನೆ. ಹೌದು ಕನ್ವರ್‌ ಯಾತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಈತ ಜ್ಯೂಸ್ ಅಂಗಡಿ ಇದ್ದು, ಇಲ್ಲಿ ಈತ ಮೂತ್ರ ಬೆರೆಸಿದ ಜ್ಯೂಸನ್ನು ಮಾರಾಟ ಮಾಡುತ್ತಿದ್ದನು. ಈ ವೇಳೆ ರೆಡ್‌ ಹ್ಯಾಂಡ್‌ ಈತ ಸಿಕ್ಕಿ ಬಿದ್ದಿದ್ದು, ಸದ್ಯ ಆರೋಪಿಯನ್ನು ಬಂಧಿಸಿ, ಆತನ ಅಂಗಡಿಯಲ್ಲಿದ್ದ 1 ಲೀ ಮೂತ್ರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
ವಿಚ್ಛೇದನ ನೀಡಿ ಹಾಲಿನಲ್ಲಿ ಸ್ನಾನ ಮಾಡಿದ ಪತಿ
Image
ಆರೋಗ್ಯ ಸಮಸ್ಯೆ ಅಂದ್ರು ವಿಚಿತ್ರ ಬೇಡಿಕೆ ಇಡ್ತಾರಂತೆ ಬಾಸ್
Image
ಬೆಂಗಳೂರಿನಲ್ಲಿ ನಡೆದ ವಿಚಿತ್ರ ಘಟನೆ ಬಗ್ಗೆ ಹಂಚಿಕೊಂಡ ಯುವತಿ
Image
ಉದ್ಯಾನವನಕ್ಕೆ ಭೇಟಿ ನೀಡಿದ ಮಹಿಳೆಯ ಕೆನ್ನೆಗೆ ಚುಂಬಿಸಿದ ಮರಿಯಾನೆ

ಈ ಕುರಿತ ವಿಡಿಯೋವನ್ನು Megh Updates ಹೆಸರಿನ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದ್ದು, “ಕನ್ವರ್‌ ಯಾತ್ರಾ ಮಾರ್ಗದಲ್ಲಿ ಮೂತ್ರ ಮಿಶ್ರಿತ ಜ್ಯೂಸ್‌ ಮಾರಾಟ ಮಾಡುತ್ತಿದ್ದ ಮುಸ್ಲಿಂ ಜ್ಯೂಸ್‌ ಮಾರಾಟಗಾರ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಜ್ಯೂಸ್‌ ಅಂಗಡಿಯ ಬಳಿ ನಿಂತು ಗ್ರಾಹಕರು ಗಲಾಟೆ ಮಾಡುತ್ತಾ ಮೂತ್ರ ಬೆರೆಸಿದ ಜ್ಯೂಸ್‌ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಇನ್ನೊಬ್ಬನ ಜತೆಗೆ ಓಡಿ ಹೋದ ಪತ್ನಿ, ವಿಚ್ಛೇದನ ನೀಡಿ ಹಾಲಿನಲ್ಲಿ ಸ್ನಾನ ಮಾಡಿದ ಪತಿ

ಜುಲೈ 13 ರಂದು ಶೇರ್‌ ಮಾಡಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಂತಹ ತಪ್ಪುಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಲೇಬೇಕುʼ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಿಜಕ್ಕೂ ಇದು ಘೋರ ಅಪರಾಧ, ಆತನಿಗೆ ಕಠಿಣ ಶಿಕ್ಷೆ ಆಗ್ಲೇಬೇಕುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದು ತುಂಬಾ ಗಂಭೀರ ಮತ್ತು ಆತಂಕಕಾರಿ ವಿಷಯʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!