AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ನಾನು ನೋಡ್ಕೋತೀನಿ, ನೀನು ಇಷ್ಟಪಟ್ಟವನ ಜತೆ ಖುಷಿಯಾಗಿರು ಎಂದು ಪತ್ನಿಗೆ ಮದುವೆ ಮಾಡಿಸಿದ ಗಂಡ

ಸಾಮಾನ್ಯವಾಗಿ ತನ್ನ ಸಂಗಾತಿಯನ್ನು ಬೇರೊಬ್ಬರ ಜತೆ ಹಂಚಿಕೊಳ್ಳಲು ಅಥವಾ ಬೇರೊಬ್ಬರಿಗೆ ಬಿಟ್ಟು ಕೊಡುವಂಥಾ ಮನೋಭಾವವಿರುವವರು ತುಂಬಾ ವಿರಳ. ಆದರೆ ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ್​ ನಗರ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತು ಆಕೆಯನ್ನು ಇಷ್ಟಪಟ್ಟವನೊಂದಿಗೆ ಮದುವೆ ಮಾಡಿಸುವ ನಿರ್ಧಾರ ಮಾಡಿದ್ದಾನೆ

ಮಕ್ಕಳನ್ನು ನಾನು ನೋಡ್ಕೋತೀನಿ, ನೀನು ಇಷ್ಟಪಟ್ಟವನ ಜತೆ ಖುಷಿಯಾಗಿರು ಎಂದು ಪತ್ನಿಗೆ ಮದುವೆ ಮಾಡಿಸಿದ ಗಂಡ
ಮದುವೆ
ನಯನಾ ರಾಜೀವ್
|

Updated on: Mar 27, 2025 | 2:50 PM

Share

ಉತ್ತರ ಪ್ರದೇಶ, ಮಾರ್ಚ್​ 27: ಸಾಮಾನ್ಯವಾಗಿ ತನ್ನ ಸಂಗಾತಿಯನ್ನು ಬೇರೊಬ್ಬರ ಜತೆ ಹಂಚಿಕೊಳ್ಳಲು ಅಥವಾ ಬೇರೊಬ್ಬರಿಗೆ ಬಿಟ್ಟು ಕೊಡುವಂಥಾ ಮನೋಭಾವವಿರುವವರು ತುಂಬಾ ವಿರಳ. ಆದರೆ ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಸಂತ ಕಬೀರ್​ ನಗರ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತು ಆಕೆಯನ್ನು ಇಷ್ಟಪಟ್ಟವನೊಂದಿಗೆ ಮದುವೆ ಮಾಡಿಸುವ ನಿರ್ಧಾರ ಮಾಡಿದ್ದಾನೆ. ಬಬ್ಲೂ ಎಂಬ ವ್ಯಕ್ತಿ ತನ್ನ ಇಬ್ಬರು ಮಕ್ಕಳನ್ನು ತಾನು ನೋಡಿಕೊಳ್ಳುವುದಾಗಿ ಹೇಳಿದನು. ಹೆಂಡತಿ ಆ ಬೇಡಿಕೆಯನ್ನು ಒಪ್ಪಿಕೊಂಡಳು.

ಬಬ್ಲೂ ಮತ್ತೆ ರಾಧಿಕಾ 2017ರಲ್ಲಿ ವಿವಾಹವಾಗಿದ್ದರು ಅವರಿಗೆ 7 ಮತ್ತು 9 ವರ್ಷದ ಇಬ್ಬರು ಮಕ್ಕಳಿದ್ದಾರೆ. ಜೀವನೋಪಾಯಕ್ಕಾಗಿ ಬಬ್ಲೂ ಆಗಾಗ ಮನೆಯಿಂದ ಬೇರೆ ಊರಿಗೆ ಹೋಗುತ್ತಿದ್ದ. ರಾಧಿಕಾ ಹಳ್ಳಿಯ ಯುವಕನೊಬ್ಬನನ್ನು ಇಷ್ಟಪಡಲು ಶುರು ಮಾಡಿದ್ದಳು.

ಈ ವಿಚಾರ ಬಬ್ಲೂ ಕುಟುಂಬದಿಂದ ತಿಳಿದಿತ್ತು. ನಂತರ ಸಮಸ್ಯೆಯನ್ನು ಬಗೆಹರಿಸಲು ಬಬ್ಲು ನಿರ್ಧಾರ ಮಾಡಿ ತನ್ನ ಪತ್ನಿಯನ್ನು ಆತನಿಗೆ ಬಿಟ್ಟುಕೊಡಲು ಮುಂದಾಗಿದ್ದ. ನ್ಯಾಯಾಲಯಕ್ಕೆ ಹೋಗಿ ಪತ್ನಿ ಹಾಗೂ ಆ ವ್ಯಕ್ತಿಯ ಜತೆ ವಿವಾಹಕ್ಕೆ ಸಾಕ್ಷಿಯಾದ. ನಂತರ ಅವರನ್ನು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿಅವರು ಹೂಮಾಲೆ ಧರಿಸಿ ವಿವಾಹ ಪ್ರತಿಜ್ಞೆ ಮಾಡಿದ್ದಾರೆ.

ಮತ್ತಷ್ಟು ಓದಿ: ಡ್ಯಾನ್ಸರ್​ಗೆ ಹಣ ಕೊಡುತ್ತಾ ಮೈಮೇಲೆ ಪ್ರಜ್ಞೆಯಿಲ್ಲದಂತೆ ಕುಣಿಯುತ್ತಿದ್ದ ಬಾಲಕ, ಮುಂದೇನಾಯ್ತು ನೋಡಿ

ಬಬ್ಲೂ ಕಾರ್ಯಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆತನ ತಾಳ್ಮೆ ಹಾಗೂ ತೆಗೆದುಕೊಂಡಿರುವ ನಿರ್ಧಾರವನ್ನು ಶ್ಲಾಘಿಸಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್