AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ನಾನು ನೋಡ್ಕೋತೀನಿ, ನೀನು ಇಷ್ಟಪಟ್ಟವನ ಜತೆ ಖುಷಿಯಾಗಿರು ಎಂದು ಪತ್ನಿಗೆ ಮದುವೆ ಮಾಡಿಸಿದ ಗಂಡ

ಸಾಮಾನ್ಯವಾಗಿ ತನ್ನ ಸಂಗಾತಿಯನ್ನು ಬೇರೊಬ್ಬರ ಜತೆ ಹಂಚಿಕೊಳ್ಳಲು ಅಥವಾ ಬೇರೊಬ್ಬರಿಗೆ ಬಿಟ್ಟು ಕೊಡುವಂಥಾ ಮನೋಭಾವವಿರುವವರು ತುಂಬಾ ವಿರಳ. ಆದರೆ ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ್​ ನಗರ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತು ಆಕೆಯನ್ನು ಇಷ್ಟಪಟ್ಟವನೊಂದಿಗೆ ಮದುವೆ ಮಾಡಿಸುವ ನಿರ್ಧಾರ ಮಾಡಿದ್ದಾನೆ

ಮಕ್ಕಳನ್ನು ನಾನು ನೋಡ್ಕೋತೀನಿ, ನೀನು ಇಷ್ಟಪಟ್ಟವನ ಜತೆ ಖುಷಿಯಾಗಿರು ಎಂದು ಪತ್ನಿಗೆ ಮದುವೆ ಮಾಡಿಸಿದ ಗಂಡ
ಮದುವೆ
ನಯನಾ ರಾಜೀವ್
|

Updated on: Mar 27, 2025 | 2:50 PM

Share

ಉತ್ತರ ಪ್ರದೇಶ, ಮಾರ್ಚ್​ 27: ಸಾಮಾನ್ಯವಾಗಿ ತನ್ನ ಸಂಗಾತಿಯನ್ನು ಬೇರೊಬ್ಬರ ಜತೆ ಹಂಚಿಕೊಳ್ಳಲು ಅಥವಾ ಬೇರೊಬ್ಬರಿಗೆ ಬಿಟ್ಟು ಕೊಡುವಂಥಾ ಮನೋಭಾವವಿರುವವರು ತುಂಬಾ ವಿರಳ. ಆದರೆ ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎಂದು ಪತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಸಂತ ಕಬೀರ್​ ನಗರ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತು ಆಕೆಯನ್ನು ಇಷ್ಟಪಟ್ಟವನೊಂದಿಗೆ ಮದುವೆ ಮಾಡಿಸುವ ನಿರ್ಧಾರ ಮಾಡಿದ್ದಾನೆ. ಬಬ್ಲೂ ಎಂಬ ವ್ಯಕ್ತಿ ತನ್ನ ಇಬ್ಬರು ಮಕ್ಕಳನ್ನು ತಾನು ನೋಡಿಕೊಳ್ಳುವುದಾಗಿ ಹೇಳಿದನು. ಹೆಂಡತಿ ಆ ಬೇಡಿಕೆಯನ್ನು ಒಪ್ಪಿಕೊಂಡಳು.

ಬಬ್ಲೂ ಮತ್ತೆ ರಾಧಿಕಾ 2017ರಲ್ಲಿ ವಿವಾಹವಾಗಿದ್ದರು ಅವರಿಗೆ 7 ಮತ್ತು 9 ವರ್ಷದ ಇಬ್ಬರು ಮಕ್ಕಳಿದ್ದಾರೆ. ಜೀವನೋಪಾಯಕ್ಕಾಗಿ ಬಬ್ಲೂ ಆಗಾಗ ಮನೆಯಿಂದ ಬೇರೆ ಊರಿಗೆ ಹೋಗುತ್ತಿದ್ದ. ರಾಧಿಕಾ ಹಳ್ಳಿಯ ಯುವಕನೊಬ್ಬನನ್ನು ಇಷ್ಟಪಡಲು ಶುರು ಮಾಡಿದ್ದಳು.

ಈ ವಿಚಾರ ಬಬ್ಲೂ ಕುಟುಂಬದಿಂದ ತಿಳಿದಿತ್ತು. ನಂತರ ಸಮಸ್ಯೆಯನ್ನು ಬಗೆಹರಿಸಲು ಬಬ್ಲು ನಿರ್ಧಾರ ಮಾಡಿ ತನ್ನ ಪತ್ನಿಯನ್ನು ಆತನಿಗೆ ಬಿಟ್ಟುಕೊಡಲು ಮುಂದಾಗಿದ್ದ. ನ್ಯಾಯಾಲಯಕ್ಕೆ ಹೋಗಿ ಪತ್ನಿ ಹಾಗೂ ಆ ವ್ಯಕ್ತಿಯ ಜತೆ ವಿವಾಹಕ್ಕೆ ಸಾಕ್ಷಿಯಾದ. ನಂತರ ಅವರನ್ನು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿಅವರು ಹೂಮಾಲೆ ಧರಿಸಿ ವಿವಾಹ ಪ್ರತಿಜ್ಞೆ ಮಾಡಿದ್ದಾರೆ.

ಮತ್ತಷ್ಟು ಓದಿ: ಡ್ಯಾನ್ಸರ್​ಗೆ ಹಣ ಕೊಡುತ್ತಾ ಮೈಮೇಲೆ ಪ್ರಜ್ಞೆಯಿಲ್ಲದಂತೆ ಕುಣಿಯುತ್ತಿದ್ದ ಬಾಲಕ, ಮುಂದೇನಾಯ್ತು ನೋಡಿ

ಬಬ್ಲೂ ಕಾರ್ಯಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆತನ ತಾಳ್ಮೆ ಹಾಗೂ ತೆಗೆದುಕೊಂಡಿರುವ ನಿರ್ಧಾರವನ್ನು ಶ್ಲಾಘಿಸಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್