AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ

ತನ್ನ ಪ್ರೀತಿಯನ್ನು ನಿಜವೆಂದು ಸಾಬೀತುಪಡಿಸಲು ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಪ್ರಕರಣ ಉತ್ತರ ಪ್ರದೇಶದ ಬಂದಾ ಎಂಬಲ್ಲಿ ನಡೆದಿದೆ. ಈತ ತನ್ನ ಸ್ವಂತ ಪತ್ನಿಯ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಆಕೆಯೊಂದಿಗಿನ ಪ್ರೀತಿಯನ್ನು ಸಾಬೀತುಪಡಿಸಲು ಈತ ಡೆತ್​ ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jun 13, 2024 | 5:41 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಂದಾದಿಂದ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಒಬ್ಬ ವ್ಯಕ್ತಿ ಪ್ರೀತಿಯನ್ನು ಸಾಬೀತು ಪಡಿಸಲು ತನ್ನ ಜೀವವನ್ನು ತ್ಯಾಗ ಮಾಡಿದ್ದಾನೆ. ವ್ಯಕ್ತಿ ತನ್ನ ಹೆಂಡತಿಯ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮಾಹಿತಿ ಪ್ರಕಾರ ಸ್ವಂತ ಪತ್ನಿಯ ಹತ್ತಿರದ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇಬ್ಬರ ನಡುವೆ ಪ್ರೀತಿ ಚಿಗುರೊಡೆದಾಗ ಅವರ ಕುಟುಂಬದವರಿಗೂ ವಿಷಯ ತಿಳಿದಿತ್ತು. ಇದಾದ ನಂತರವೂ ಇಬ್ಬರೂ ಒಬ್ಬರನ್ನೊಬ್ಬರು ಭೇಟಿಯಾಗುತ್ತಿದ್ದರು. ಆದರೆ ಕೆಲ ದಿನಗಳಿಂದ ಆಕೆ ಆತನಿಂದ ದೂರವಾಗಿದ್ದಳು.

ಇತ್ತೀಚಿಗಷ್ಟೇ ತನ್ನ ಪ್ರೀತಿಯನ್ನು ಮತ್ತೆ ಪಡೆಯಲು ಆತ ಮಹಿಳೆಗೆ ಕರೆ ಮಾಡಿದ್ದ, ಈ ವೇಳೆ ನೀನು ನನ್ನನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ ನಿನ್ನ ಪ್ರಾಣವನ್ನೇ ತ್ಯಾಗ ಮಾಡಿ ತೋರಿಸು ಎಂದು ಆಕೆ ಹೇಳಿದ್ದಾಳೆ. ಆಕೆಯ ಮಾತಿನಂತೆ ವ್ಯಕ್ತಿ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ನೀನು ನನ್ನನ್ನು ಪ್ರೀತಿಸಿದರೆ ಪ್ರಾಣ ತ್ಯಾಗ ಮಾಡಿ ತೋರಿಸು ಎಂದು ಮಹಿಳೆ ಆತನಿಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿದ್ದಳು. ಅದನ್ನು ಸವಾಲಾಗಿ ಸ್ವೀಕರಿಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:40 pm, Thu, 13 June 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ