AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ

ತನ್ನ ಪ್ರೀತಿಯನ್ನು ನಿಜವೆಂದು ಸಾಬೀತುಪಡಿಸಲು ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಪ್ರಕರಣ ಉತ್ತರ ಪ್ರದೇಶದ ಬಂದಾ ಎಂಬಲ್ಲಿ ನಡೆದಿದೆ. ಈತ ತನ್ನ ಸ್ವಂತ ಪತ್ನಿಯ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಆಕೆಯೊಂದಿಗಿನ ಪ್ರೀತಿಯನ್ನು ಸಾಬೀತುಪಡಿಸಲು ಈತ ಡೆತ್​ ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Viral News: ತನ್ನ ಪ್ರೀತಿ ನಿಜವೆಂದು ಸಾಬೀತುಪಡಿಸಲು ಪ್ರಾಣವನ್ನೇ ತ್ಯಾಗ ಮಾಡಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jun 13, 2024 | 5:41 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಂದಾದಿಂದ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಒಬ್ಬ ವ್ಯಕ್ತಿ ಪ್ರೀತಿಯನ್ನು ಸಾಬೀತು ಪಡಿಸಲು ತನ್ನ ಜೀವವನ್ನು ತ್ಯಾಗ ಮಾಡಿದ್ದಾನೆ. ವ್ಯಕ್ತಿ ತನ್ನ ಹೆಂಡತಿಯ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮಾಹಿತಿ ಪ್ರಕಾರ ಸ್ವಂತ ಪತ್ನಿಯ ಹತ್ತಿರದ ಸಂಬಂಧಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇಬ್ಬರ ನಡುವೆ ಪ್ರೀತಿ ಚಿಗುರೊಡೆದಾಗ ಅವರ ಕುಟುಂಬದವರಿಗೂ ವಿಷಯ ತಿಳಿದಿತ್ತು. ಇದಾದ ನಂತರವೂ ಇಬ್ಬರೂ ಒಬ್ಬರನ್ನೊಬ್ಬರು ಭೇಟಿಯಾಗುತ್ತಿದ್ದರು. ಆದರೆ ಕೆಲ ದಿನಗಳಿಂದ ಆಕೆ ಆತನಿಂದ ದೂರವಾಗಿದ್ದಳು.

ಇತ್ತೀಚಿಗಷ್ಟೇ ತನ್ನ ಪ್ರೀತಿಯನ್ನು ಮತ್ತೆ ಪಡೆಯಲು ಆತ ಮಹಿಳೆಗೆ ಕರೆ ಮಾಡಿದ್ದ, ಈ ವೇಳೆ ನೀನು ನನ್ನನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ ನಿನ್ನ ಪ್ರಾಣವನ್ನೇ ತ್ಯಾಗ ಮಾಡಿ ತೋರಿಸು ಎಂದು ಆಕೆ ಹೇಳಿದ್ದಾಳೆ. ಆಕೆಯ ಮಾತಿನಂತೆ ವ್ಯಕ್ತಿ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

ನೀನು ನನ್ನನ್ನು ಪ್ರೀತಿಸಿದರೆ ಪ್ರಾಣ ತ್ಯಾಗ ಮಾಡಿ ತೋರಿಸು ಎಂದು ಮಹಿಳೆ ಆತನಿಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿದ್ದಳು. ಅದನ್ನು ಸವಾಲಾಗಿ ಸ್ವೀಕರಿಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:40 pm, Thu, 13 June 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!