AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನೋಟಿನ ಮಾಲೆಯಿಂದ ಹಣ ಎಗರಿಸಿದ ಕಳ್ಳನನ್ನು ಬೆನ್ನಟ್ಟಿ ಹಿಡಿದ ವರ; ವಿಡಿಯೋ ವೈರಲ್

ಹಣ ಕಂಡ್ರೆ ಹೆಣ ಕೂಡಾ ಬಾಯಿ ಬಿಡುತ್ತೇ ಅನ್ನೋ ಹಾಗೆ ಇಲ್ಲೊಬ್ಬ ವ್ಯಕ್ತಿ ರಸ್ತೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರವನ್ನು ಕಂಡು ಆ ಹಾರದಿಂದ ಒಂದೆರಡು ನೋಟುಗಳನ್ನು ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದರಿಂದ ಸಿಟ್ಟಿಗೆದ್ದ ವರ ಆ ಖದೀಮನನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡಿ ಆತನಿಗೆ ಹಿಗ್ಗಾಮುಗ್ಗ ಥಳಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ನೋಟಿನ ಮಾಲೆಯಿಂದ ಹಣ ಎಗರಿಸಿದ ಕಳ್ಳನನ್ನು ಬೆನ್ನಟ್ಟಿ ಹಿಡಿದ ವರ; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 25, 2024 | 6:11 PM

ಹಣ ಕಂಡರೆ ಹೆಣ ಕೂಡಾ ಬಾಯಿ ಬಿಡುತ್ತೆ ಎಂಬ ಮಾತೊಂದಿದೆ. ಹಣದ ಮಹಿಮೆಯೇ ಅಂಥದ್ದು, ಬಿಟ್ಟಿ ಸಿಗುವ ದುಡ್ಡಿಗಾಗಿ ಈ ಜನ ಕಳ್ಳತನ, ಕೊಲೆ ಮಾಡೋದಕ್ಕೂ ತಯಾರಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಬಿಟ್ಟಿ ಹಣಕ್ಕೆ ಆಸೆ ಪಟ್ಟು ಸರಿಯಾಗಿ ಗೂಸಾ ತಿಂದಿದ್ದಾನೆ. ಹೌದು ರಸ್ತೆಯಲ್ಲಿ ಕುದುರೆ ಸವಾರಿಯಲ್ಲಿ ಹೋಗ್ತಿದ್ದ ವರನ ಕೊರಳಲ್ಲಿ ಗರಿಗರಿ ನೋಟಿನ ಹಾರವನ್ನು ನೋಡಿದ ಆ ವ್ಯಕ್ತಿ ಸಿಕ್ಕಿದ್ದೇ ಚಾನ್ಸ್‌ ಎನ್ನುತ್ತಾ ನೋಟುಗಳನ್ನು ಎಗರಿಸಿದ್ದಾನೆ. ಇದರಿಂದ ಕೋಪಗೊಂಡ ವರ ಕುದುರೆಯಿಂದ ಕೆಳಗಿಳಿದು ಹಣ ಕದ್ದ ಖದೀಮನನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡಿ, ಆತನಿಗೆ ಸರಿಯಾಗಿ ಗೂಸಾ ಕೊಟ್ಟಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದು, ವರ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಕಳ್ಳನೊಬ್ಬ ಮದುಮಗನ ಕೊರಳಲ್ಲಿದ್ದ 50 ರೂಪಾಯಿನ ನೋಟಿನ ಹಾರದಿಂದ ಒಂದೆರಡು ನೋಟನ್ನು ಎಗರಿಸಿ ಗಾಡಿಯಲ್ಲಿ ಪರಾರಿಯಾಗಿದ್ದಾನೆ. ಇದರಿಂದ ಕೋಪಗೊಂಡ ಮದುಮಗ ಕುದುರೆಯಿಂದ ಕೆಳಗಿಳಿದು, ಕಳ್ಳನನ್ನು ಬೆನ್ನಟ್ಟಿ ಆತನನನ್ನು ಹಿಡಿದು ಹೆದ್ದಾರಿಯಲ್ಲಿಯೇ ಆತನಿಗೆ ಹಿಗ್ಗಾಮುಗ್ಗ ಥಳಿಸಿ ಗ್ರಹಚಾರ ಬಿಡಿದಿದ್ದಾನೆ.

ನರೇಂದ್ರ ಪ್ರತಾಪ್‌ (hindipatrakar) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮದುಮಗ ನೋಟಿನ ಹಾರದಿಂದ ಹಣ ಕದ್ದ ಕಳ್ಳನ ಗಾಡಿಯನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡುವಂತಹ ದೃಶ್ಯವನ್ನು ಕಾಣಬಹುದು. ಮದುಮಗ ಸಿನೆಮಾ ಹೀರೋನಂತೆ ಸಾಹಸ ಮಾಡಿ ಹಾಗೋ ಹೀಗೋ ಗಾಡಿಯೊಳಗೆ ನುಗ್ಗಿ, ಖದೀಮನನ್ನು ಗಾಡಿಯಿಂದ ನಡು ರಸ್ತೆಗೆ ದರದರನೇ ಎಳೆದೊಯ್ದು ತನ್ನ ಸ್ನೇಹಿತರ ಜೊತೆ ಸೇರಿ ಆತನಿಗೆ ಸರಿಯಾಗಿ ಗೂಸಾ ಕೊಟ್ಟಿದ್ದಾನೆ.

ಇದನ್ನೂ ಓದಿ:ಹುಲಿ ಘರ್ಜನೆ ಕೇಳಿ ಮರವೇರಿ ಕುಳಿತ ಫಾರೆಸ್ಟ್‌ ಗಾರ್ಡ್; ಮುಂದೇನಾಯ್ತು ನೋಡಿ…

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 2.7 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಒಂದೆರಡು ನೋಟಿಗಾಗಿ ವರ ಪ್ರಾಣವನ್ನು ಪಣಕ್ಕಿಡಬಾರದಿತ್ತುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಧುವಿನ ಭವಿಷ್ಯ ಅಪಾಯದಲ್ಲಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ