AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನೋಟಿನ ಮಾಲೆಯಿಂದ ಹಣ ಎಗರಿಸಿದ ಕಳ್ಳನನ್ನು ಬೆನ್ನಟ್ಟಿ ಹಿಡಿದ ವರ; ವಿಡಿಯೋ ವೈರಲ್

ಹಣ ಕಂಡ್ರೆ ಹೆಣ ಕೂಡಾ ಬಾಯಿ ಬಿಡುತ್ತೇ ಅನ್ನೋ ಹಾಗೆ ಇಲ್ಲೊಬ್ಬ ವ್ಯಕ್ತಿ ರಸ್ತೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರವನ್ನು ಕಂಡು ಆ ಹಾರದಿಂದ ಒಂದೆರಡು ನೋಟುಗಳನ್ನು ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದರಿಂದ ಸಿಟ್ಟಿಗೆದ್ದ ವರ ಆ ಖದೀಮನನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡಿ ಆತನಿಗೆ ಹಿಗ್ಗಾಮುಗ್ಗ ಥಳಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ನೋಟಿನ ಮಾಲೆಯಿಂದ ಹಣ ಎಗರಿಸಿದ ಕಳ್ಳನನ್ನು ಬೆನ್ನಟ್ಟಿ ಹಿಡಿದ ವರ; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Nov 25, 2024 | 6:11 PM

Share

ಹಣ ಕಂಡರೆ ಹೆಣ ಕೂಡಾ ಬಾಯಿ ಬಿಡುತ್ತೆ ಎಂಬ ಮಾತೊಂದಿದೆ. ಹಣದ ಮಹಿಮೆಯೇ ಅಂಥದ್ದು, ಬಿಟ್ಟಿ ಸಿಗುವ ದುಡ್ಡಿಗಾಗಿ ಈ ಜನ ಕಳ್ಳತನ, ಕೊಲೆ ಮಾಡೋದಕ್ಕೂ ತಯಾರಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಬಿಟ್ಟಿ ಹಣಕ್ಕೆ ಆಸೆ ಪಟ್ಟು ಸರಿಯಾಗಿ ಗೂಸಾ ತಿಂದಿದ್ದಾನೆ. ಹೌದು ರಸ್ತೆಯಲ್ಲಿ ಕುದುರೆ ಸವಾರಿಯಲ್ಲಿ ಹೋಗ್ತಿದ್ದ ವರನ ಕೊರಳಲ್ಲಿ ಗರಿಗರಿ ನೋಟಿನ ಹಾರವನ್ನು ನೋಡಿದ ಆ ವ್ಯಕ್ತಿ ಸಿಕ್ಕಿದ್ದೇ ಚಾನ್ಸ್‌ ಎನ್ನುತ್ತಾ ನೋಟುಗಳನ್ನು ಎಗರಿಸಿದ್ದಾನೆ. ಇದರಿಂದ ಕೋಪಗೊಂಡ ವರ ಕುದುರೆಯಿಂದ ಕೆಳಗಿಳಿದು ಹಣ ಕದ್ದ ಖದೀಮನನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡಿ, ಆತನಿಗೆ ಸರಿಯಾಗಿ ಗೂಸಾ ಕೊಟ್ಟಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದು, ವರ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಕಳ್ಳನೊಬ್ಬ ಮದುಮಗನ ಕೊರಳಲ್ಲಿದ್ದ 50 ರೂಪಾಯಿನ ನೋಟಿನ ಹಾರದಿಂದ ಒಂದೆರಡು ನೋಟನ್ನು ಎಗರಿಸಿ ಗಾಡಿಯಲ್ಲಿ ಪರಾರಿಯಾಗಿದ್ದಾನೆ. ಇದರಿಂದ ಕೋಪಗೊಂಡ ಮದುಮಗ ಕುದುರೆಯಿಂದ ಕೆಳಗಿಳಿದು, ಕಳ್ಳನನ್ನು ಬೆನ್ನಟ್ಟಿ ಆತನನನ್ನು ಹಿಡಿದು ಹೆದ್ದಾರಿಯಲ್ಲಿಯೇ ಆತನಿಗೆ ಹಿಗ್ಗಾಮುಗ್ಗ ಥಳಿಸಿ ಗ್ರಹಚಾರ ಬಿಡಿದಿದ್ದಾನೆ.

ನರೇಂದ್ರ ಪ್ರತಾಪ್‌ (hindipatrakar) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮದುಮಗ ನೋಟಿನ ಹಾರದಿಂದ ಹಣ ಕದ್ದ ಕಳ್ಳನ ಗಾಡಿಯನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡುವಂತಹ ದೃಶ್ಯವನ್ನು ಕಾಣಬಹುದು. ಮದುಮಗ ಸಿನೆಮಾ ಹೀರೋನಂತೆ ಸಾಹಸ ಮಾಡಿ ಹಾಗೋ ಹೀಗೋ ಗಾಡಿಯೊಳಗೆ ನುಗ್ಗಿ, ಖದೀಮನನ್ನು ಗಾಡಿಯಿಂದ ನಡು ರಸ್ತೆಗೆ ದರದರನೇ ಎಳೆದೊಯ್ದು ತನ್ನ ಸ್ನೇಹಿತರ ಜೊತೆ ಸೇರಿ ಆತನಿಗೆ ಸರಿಯಾಗಿ ಗೂಸಾ ಕೊಟ್ಟಿದ್ದಾನೆ.

ಇದನ್ನೂ ಓದಿ:ಹುಲಿ ಘರ್ಜನೆ ಕೇಳಿ ಮರವೇರಿ ಕುಳಿತ ಫಾರೆಸ್ಟ್‌ ಗಾರ್ಡ್; ಮುಂದೇನಾಯ್ತು ನೋಡಿ…

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 2.7 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಒಂದೆರಡು ನೋಟಿಗಾಗಿ ವರ ಪ್ರಾಣವನ್ನು ಪಣಕ್ಕಿಡಬಾರದಿತ್ತುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಧುವಿನ ಭವಿಷ್ಯ ಅಪಾಯದಲ್ಲಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್