AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮನೆ ಮಕ್ಕಳನ್ನು ರಕ್ಷಿಸಲು ಕಾಳಿಂಗ ಸರ್ಪವನ್ನೇ ಕಚ್ಚಿ ಕೊಂದ ಪಿಟ್‌ ಬುಲ್‌

ಸಾಕು ಪ್ರಾಣಿಗಳು ಮನೆ ಮಂದಿಯನ್ನು ರಕ್ಷಿಸುವ ಸಲುವಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮನೆ ಬಳಿ ಬಂದ ಕಾಳಿಂಗ ಸರ್ಪದಿಂದ ಮನೆ ಮಕ್ಕಳನ್ನು ರಕ್ಷಿಸಲು ಪಿಟ್‌ ಬುಲ್‌ ತಳಿಯ ಶ್ವಾನ ವಿಷ ಪೂರಿತ ಹಾವಿನ ಜೊತೆಗೆ ಕಾದಾಡಿ, ಕೊನೆಗೆ ಆ ಹಾವನ್ನೇ ಸಾಯಿಸಿದೆ. ಸದ್ಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಮನೆ ಮಕ್ಕಳನ್ನು ರಕ್ಷಿಸಲು ಕಾಳಿಂಗ ಸರ್ಪವನ್ನೇ ಕಚ್ಚಿ ಕೊಂದ ಪಿಟ್‌ ಬುಲ್‌
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 25, 2024 | 3:38 PM

Share

ನಿಷ್ಠೆ ಎಂಬ ಪದದ ಬಗ್ಗೆ ಮಾತನಾಡುವಾಗ ಮೊದಲು ನೆನಪಿಗೆ ಬರುವುದೇ ಶ್ವಾನ. ಹೌದು ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ತಮಗೆ ತುತ್ತು ಅನ್ನ ನೀಡಿ ಸಲಹುವ ಮಾಲೀಕರಿಗಾಗಿ ಈ ಶ್ವಾನಗಳು ಎಂತಹ ಕಷ್ಟಗಳನ್ನು ಸಹ ಎದುರಿಸುತ್ತವೆ. ಸಾಕು ಪ್ರಾಣಿಗಳು ಮನೆ ಮಂದಿಯನ್ನು ರಕ್ಷಿಸುವ ಸಲುವಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮನೆ ಬಳಿ ಬಂದ ಕಾಳಿಂಗ ಸರ್ಪದಿಂದ ಮನೆ ಮಕ್ಕಳನ್ನು ರಕ್ಷಿಸಲು ಪಿಟ್‌ ಬುಲ್‌ ಶ್ವಾನ ವಿಷ ಪೂರಿತ ಹಾವಿನ ಜೊತೆಗೆ ಕಾದಾಡಿ, ಕೊನೆಗೆ ಆ ಹಾವನ್ನೇ ಸಾಯಿಸಿದೆ. ಸದ್ಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದ್ದು, ಇಲ್ಲಿನ ಶಿವಗಣೇಶ್‌ ಕಾಲೋನಿಯ ಪಂಜಾಬ್‌ ಸಿಂಗ್‌ ಎಂಬವರ ಮನೆಯ ನಾಯಿ ಜೆನ್ನಿ ಗಾರ್ಡನ್‌ನಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ರಕ್ಷಿಸಲು ದೈತ್ಯ ಕಾಳಿಂಗ ಸರ್ಪವನ್ನೇ ಹೊಡೆದು ಸಾಯಿಸಿದೆ. ಮನೆ ಮಕ್ಕಳು ಗಾರ್ಡನ್‌ನಲ್ಲಿ ಆಟವಾಡುತ್ತಿದ್ದ ವೇಳೆ ಅಲ್ಲಿ ದೈತ್ಯ ಕಾಳಿಂಗ ಸರ್ಪವೊಂದು ಎಂಟ್ರಿ ಕೊಟ್ಟಿದ್ದು, ಇದನ್ನು ಕಂಡ ಜೆನ್ನಿ ಈ ಹಾವು ಮಕ್ಕಳಿಗೆ ಅಪಾಯ ಮಾಡುವ ಮುನ್ನ ಅದರ ಕಥೆಯನ್ನೇ ಮುಗಿಸಬೇಕು ಎಂದು ಓಡಿ ಹೋಗಿ ಕಾಳಿಂಗ ಸರ್ಪದೊಂಗಿದೆ ಕಾದಾಡಿ ಕೊನೆಗೆ ಅದನ್ನು ಹೊಡೆದು ಸಾಯಿಸಿದೆ. ಈ ಹಿಂದೆಯೂ ಜೆನ್ನಿ ಮನೆ ಬಳಿ ಬಂದ ಸುಮಾರು ಎಂಟರಿಂದ ಹತ್ತು ಶ್ವಾನಗಳನ್ನು ಹೊಡೆದು ಸಾಯಿಸಿದೆ ಎಂದು ಮಾಲೀಕ ಹೇಳಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ

ವಿಶಾಲ್‌ ಸಿಂಗ್‌ (vishal_rajput01) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮನೆಯ ಗಾರ್ಡನ್‌ ಬಳಿ ಬಂದ ವಿಷಪೂರಿತ ಕಾಳಿಂಗ ಸರ್ಪದೊಂದಿಗೆ ಪಿಟ್‌ ಬುಲ್‌ ಶ್ವಾನ ಕಾದಾಡುವ ದೃಶ್ಯವನ್ನು ಕಾಣಬಹುದು. ಹೀಗೆ ಗಾರ್ಡನ್‌ನಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ರಕ್ಷಿಸಲು ಶ್ವಾನ ಹಾವನ್ನು ಹೊಡೆದು ಸಾಯಿಸಿದೆ.

ಇದನ್ನೂ ಓದಿ: ಇಟಲಿ ಪ್ರಧಾನಿ ಮೆಲೋನಿಯೊಂದಿಗೆ ಎಲಾನ್ ಮಸ್ಕ್ ಡೇಟಿಂಗ್‌? ವೈರಲ್‌ ಆಯ್ತು ಫೋಟೋ

ಈ ವಿಡಿಯೋ ಫುಟೇಜ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ನಿಜಕ್ಕೂ ನಿಯತ್ತಿಗೆ ಮತ್ತೊಂದು ಹೆಸರೇ ಶ್ವಾನ ಅಂತ ನೆಟ್ಟಿಗರು ಮಾತನಾಡಿಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ