AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮನೆ ಮಕ್ಕಳನ್ನು ರಕ್ಷಿಸಲು ಕಾಳಿಂಗ ಸರ್ಪವನ್ನೇ ಕಚ್ಚಿ ಕೊಂದ ಪಿಟ್‌ ಬುಲ್‌

ಸಾಕು ಪ್ರಾಣಿಗಳು ಮನೆ ಮಂದಿಯನ್ನು ರಕ್ಷಿಸುವ ಸಲುವಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮನೆ ಬಳಿ ಬಂದ ಕಾಳಿಂಗ ಸರ್ಪದಿಂದ ಮನೆ ಮಕ್ಕಳನ್ನು ರಕ್ಷಿಸಲು ಪಿಟ್‌ ಬುಲ್‌ ತಳಿಯ ಶ್ವಾನ ವಿಷ ಪೂರಿತ ಹಾವಿನ ಜೊತೆಗೆ ಕಾದಾಡಿ, ಕೊನೆಗೆ ಆ ಹಾವನ್ನೇ ಸಾಯಿಸಿದೆ. ಸದ್ಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಮನೆ ಮಕ್ಕಳನ್ನು ರಕ್ಷಿಸಲು ಕಾಳಿಂಗ ಸರ್ಪವನ್ನೇ ಕಚ್ಚಿ ಕೊಂದ ಪಿಟ್‌ ಬುಲ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 25, 2024 | 3:38 PM

ನಿಷ್ಠೆ ಎಂಬ ಪದದ ಬಗ್ಗೆ ಮಾತನಾಡುವಾಗ ಮೊದಲು ನೆನಪಿಗೆ ಬರುವುದೇ ಶ್ವಾನ. ಹೌದು ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ತಮಗೆ ತುತ್ತು ಅನ್ನ ನೀಡಿ ಸಲಹುವ ಮಾಲೀಕರಿಗಾಗಿ ಈ ಶ್ವಾನಗಳು ಎಂತಹ ಕಷ್ಟಗಳನ್ನು ಸಹ ಎದುರಿಸುತ್ತವೆ. ಸಾಕು ಪ್ರಾಣಿಗಳು ಮನೆ ಮಂದಿಯನ್ನು ರಕ್ಷಿಸುವ ಸಲುವಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮನೆ ಬಳಿ ಬಂದ ಕಾಳಿಂಗ ಸರ್ಪದಿಂದ ಮನೆ ಮಕ್ಕಳನ್ನು ರಕ್ಷಿಸಲು ಪಿಟ್‌ ಬುಲ್‌ ಶ್ವಾನ ವಿಷ ಪೂರಿತ ಹಾವಿನ ಜೊತೆಗೆ ಕಾದಾಡಿ, ಕೊನೆಗೆ ಆ ಹಾವನ್ನೇ ಸಾಯಿಸಿದೆ. ಸದ್ಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದ್ದು, ಇಲ್ಲಿನ ಶಿವಗಣೇಶ್‌ ಕಾಲೋನಿಯ ಪಂಜಾಬ್‌ ಸಿಂಗ್‌ ಎಂಬವರ ಮನೆಯ ನಾಯಿ ಜೆನ್ನಿ ಗಾರ್ಡನ್‌ನಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ರಕ್ಷಿಸಲು ದೈತ್ಯ ಕಾಳಿಂಗ ಸರ್ಪವನ್ನೇ ಹೊಡೆದು ಸಾಯಿಸಿದೆ. ಮನೆ ಮಕ್ಕಳು ಗಾರ್ಡನ್‌ನಲ್ಲಿ ಆಟವಾಡುತ್ತಿದ್ದ ವೇಳೆ ಅಲ್ಲಿ ದೈತ್ಯ ಕಾಳಿಂಗ ಸರ್ಪವೊಂದು ಎಂಟ್ರಿ ಕೊಟ್ಟಿದ್ದು, ಇದನ್ನು ಕಂಡ ಜೆನ್ನಿ ಈ ಹಾವು ಮಕ್ಕಳಿಗೆ ಅಪಾಯ ಮಾಡುವ ಮುನ್ನ ಅದರ ಕಥೆಯನ್ನೇ ಮುಗಿಸಬೇಕು ಎಂದು ಓಡಿ ಹೋಗಿ ಕಾಳಿಂಗ ಸರ್ಪದೊಂಗಿದೆ ಕಾದಾಡಿ ಕೊನೆಗೆ ಅದನ್ನು ಹೊಡೆದು ಸಾಯಿಸಿದೆ. ಈ ಹಿಂದೆಯೂ ಜೆನ್ನಿ ಮನೆ ಬಳಿ ಬಂದ ಸುಮಾರು ಎಂಟರಿಂದ ಹತ್ತು ಶ್ವಾನಗಳನ್ನು ಹೊಡೆದು ಸಾಯಿಸಿದೆ ಎಂದು ಮಾಲೀಕ ಹೇಳಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ

ವಿಶಾಲ್‌ ಸಿಂಗ್‌ (vishal_rajput01) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮನೆಯ ಗಾರ್ಡನ್‌ ಬಳಿ ಬಂದ ವಿಷಪೂರಿತ ಕಾಳಿಂಗ ಸರ್ಪದೊಂದಿಗೆ ಪಿಟ್‌ ಬುಲ್‌ ಶ್ವಾನ ಕಾದಾಡುವ ದೃಶ್ಯವನ್ನು ಕಾಣಬಹುದು. ಹೀಗೆ ಗಾರ್ಡನ್‌ನಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ರಕ್ಷಿಸಲು ಶ್ವಾನ ಹಾವನ್ನು ಹೊಡೆದು ಸಾಯಿಸಿದೆ.

ಇದನ್ನೂ ಓದಿ: ಇಟಲಿ ಪ್ರಧಾನಿ ಮೆಲೋನಿಯೊಂದಿಗೆ ಎಲಾನ್ ಮಸ್ಕ್ ಡೇಟಿಂಗ್‌? ವೈರಲ್‌ ಆಯ್ತು ಫೋಟೋ

ಈ ವಿಡಿಯೋ ಫುಟೇಜ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ನಿಜಕ್ಕೂ ನಿಯತ್ತಿಗೆ ಮತ್ತೊಂದು ಹೆಸರೇ ಶ್ವಾನ ಅಂತ ನೆಟ್ಟಿಗರು ಮಾತನಾಡಿಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್