AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 03, 2022 | 2:13 PM

Share

ಪ್ರಯಾಗರಾಜ್: ಕೇವಲ 16 ಗಂಟೆಯೊಳಗೆ 107 ಕಣ್ಣುಗಳ ಆಪರೇಷನ್ ಮಾಡುವ ಮೂಲಕ ಪ್ರಾದೇಶಿಕ ನೇತ್ರವಿಜ್ಞಾನ ಸಂಸ್ಥೆಯ ನಿರ್ದೇಶಕ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಎಂಎಲ್‌ಎನ್ ವೈದ್ಯಕೀಯ ಕಾಲೇಜಿನ (ಎಂಎಲ್‌ಎನ್‌ಎಂಸಿ) ಪ್ರಾಂಶುಪಾಲ ಡಾ. ಎಸ್.ಪಿ. ಸಿಂಗ್ ಹೊಸ ದಾಖಲೆ ಬರೆದಿದ್ದಾರೆ. ಅವರು ಹದಿನಾರೂವರೆ ಗಂಟೆಯ ಅವಧಿಯಲ್ಲಿ ಇಂಟ್ರಾಕ್ಯುಲರ್ ಲೆನ್ಸ್ (ಐಒಎಲ್) ಇಂಪ್ಲಾಂಟ್‌ನೊಂದಿಗೆ 107 ಫಾಕೊಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು. 1 ವಾರ ಅಬ್ಸರ್ವೇಷನ್​ನಲ್ಲಿದ್ದ ಎಲ್ಲಾ ರೋಗಿಗಳು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಡಾ. ಸಿಂಗ್ ಮಾಹಿತಿ ನೀಡಿದ್ದಾರೆ.

“ಒಂದೇ ಬಾರಿಗೆ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದರಿಂದ ನನಗೆ ಸಂತೋಷವಾಗಿದೆ. ಇದು ಕಿರಿಯ ಸರ್ಜನ್​ಗಳಿಗೆ ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದು ಭಾವಿಸುತ್ತೇನೆ” ಎಂದು ಡಾ. ಸಿಂಗ್ ಸಂತಸ ಹಂಚಿಕೊಂಡಿದ್ದಾರೆ. ಐ ಸರ್ಜನ್ ಡಾ. ಸಿಂಗ್ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ಪತ್ರ ಬರೆದು, ಅಗತ್ಯವಿರುವ ಪುರಾವೆಗಳೊಂದಿಗೆ ತಮ್ಮ ಸಾಧನೆಯ ಬಗ್ಗೆ ತಿಳಿಸಿದ್ದಾರೆ

ಇದಕ್ಕೂ ಮೊದಲು, ನವ ದೆಹಲಿಯ ಸೇನಾ ಆಸ್ಪತ್ರೆಯ ಸಂಶೋಧನೆ ಮತ್ತು ರೆಫರಲ್‌ನ ಆಗಿನ ಬ್ರಿಗೇಡಿಯರ್ (ಡಾ) ಜೆಕೆಎಸ್ ಪರಿಹಾರ್ ಅವರು ಅಕ್ಟೋಬರ್ 2011ರಲ್ಲಿ ಪೂರ್ವ ಲಡಾಖ್‌ನಲ್ಲಿ 34 ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದರು.

ಇದನ್ನೂ ಓದಿ: Mahashivratri: 10 ನಿಮಿಷದಲ್ಲಿ 11.71 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್ ದಾಖಲೆ ಬರೆದ ಉಜ್ಜಯಿನಿ

Viral Video: ಹೆಲಿಕಾಪ್ಟರ್​​ ಕೆಳಗೆ ನೇತಾಡುತ್ತಾ ಪುಲ್ ಅಪ್ಸ್​ ಮಾಡಿ ದಾಖಲೆ ಬರೆದ ಯುವಕ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್