AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 03, 2022 | 2:13 PM

Share

ಪ್ರಯಾಗರಾಜ್: ಕೇವಲ 16 ಗಂಟೆಯೊಳಗೆ 107 ಕಣ್ಣುಗಳ ಆಪರೇಷನ್ ಮಾಡುವ ಮೂಲಕ ಪ್ರಾದೇಶಿಕ ನೇತ್ರವಿಜ್ಞಾನ ಸಂಸ್ಥೆಯ ನಿರ್ದೇಶಕ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಎಂಎಲ್‌ಎನ್ ವೈದ್ಯಕೀಯ ಕಾಲೇಜಿನ (ಎಂಎಲ್‌ಎನ್‌ಎಂಸಿ) ಪ್ರಾಂಶುಪಾಲ ಡಾ. ಎಸ್.ಪಿ. ಸಿಂಗ್ ಹೊಸ ದಾಖಲೆ ಬರೆದಿದ್ದಾರೆ. ಅವರು ಹದಿನಾರೂವರೆ ಗಂಟೆಯ ಅವಧಿಯಲ್ಲಿ ಇಂಟ್ರಾಕ್ಯುಲರ್ ಲೆನ್ಸ್ (ಐಒಎಲ್) ಇಂಪ್ಲಾಂಟ್‌ನೊಂದಿಗೆ 107 ಫಾಕೊಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು. 1 ವಾರ ಅಬ್ಸರ್ವೇಷನ್​ನಲ್ಲಿದ್ದ ಎಲ್ಲಾ ರೋಗಿಗಳು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಡಾ. ಸಿಂಗ್ ಮಾಹಿತಿ ನೀಡಿದ್ದಾರೆ.

“ಒಂದೇ ಬಾರಿಗೆ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದರಿಂದ ನನಗೆ ಸಂತೋಷವಾಗಿದೆ. ಇದು ಕಿರಿಯ ಸರ್ಜನ್​ಗಳಿಗೆ ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದು ಭಾವಿಸುತ್ತೇನೆ” ಎಂದು ಡಾ. ಸಿಂಗ್ ಸಂತಸ ಹಂಚಿಕೊಂಡಿದ್ದಾರೆ. ಐ ಸರ್ಜನ್ ಡಾ. ಸಿಂಗ್ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ಪತ್ರ ಬರೆದು, ಅಗತ್ಯವಿರುವ ಪುರಾವೆಗಳೊಂದಿಗೆ ತಮ್ಮ ಸಾಧನೆಯ ಬಗ್ಗೆ ತಿಳಿಸಿದ್ದಾರೆ

ಇದಕ್ಕೂ ಮೊದಲು, ನವ ದೆಹಲಿಯ ಸೇನಾ ಆಸ್ಪತ್ರೆಯ ಸಂಶೋಧನೆ ಮತ್ತು ರೆಫರಲ್‌ನ ಆಗಿನ ಬ್ರಿಗೇಡಿಯರ್ (ಡಾ) ಜೆಕೆಎಸ್ ಪರಿಹಾರ್ ಅವರು ಅಕ್ಟೋಬರ್ 2011ರಲ್ಲಿ ಪೂರ್ವ ಲಡಾಖ್‌ನಲ್ಲಿ 34 ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದರು.

ಇದನ್ನೂ ಓದಿ: Mahashivratri: 10 ನಿಮಿಷದಲ್ಲಿ 11.71 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್ ದಾಖಲೆ ಬರೆದ ಉಜ್ಜಯಿನಿ

Viral Video: ಹೆಲಿಕಾಪ್ಟರ್​​ ಕೆಳಗೆ ನೇತಾಡುತ್ತಾ ಪುಲ್ ಅಪ್ಸ್​ ಮಾಡಿ ದಾಖಲೆ ಬರೆದ ಯುವಕ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ