AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 03, 2022 | 2:13 PM

Share

ಪ್ರಯಾಗರಾಜ್: ಕೇವಲ 16 ಗಂಟೆಯೊಳಗೆ 107 ಕಣ್ಣುಗಳ ಆಪರೇಷನ್ ಮಾಡುವ ಮೂಲಕ ಪ್ರಾದೇಶಿಕ ನೇತ್ರವಿಜ್ಞಾನ ಸಂಸ್ಥೆಯ ನಿರ್ದೇಶಕ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಎಂಎಲ್‌ಎನ್ ವೈದ್ಯಕೀಯ ಕಾಲೇಜಿನ (ಎಂಎಲ್‌ಎನ್‌ಎಂಸಿ) ಪ್ರಾಂಶುಪಾಲ ಡಾ. ಎಸ್.ಪಿ. ಸಿಂಗ್ ಹೊಸ ದಾಖಲೆ ಬರೆದಿದ್ದಾರೆ. ಅವರು ಹದಿನಾರೂವರೆ ಗಂಟೆಯ ಅವಧಿಯಲ್ಲಿ ಇಂಟ್ರಾಕ್ಯುಲರ್ ಲೆನ್ಸ್ (ಐಒಎಲ್) ಇಂಪ್ಲಾಂಟ್‌ನೊಂದಿಗೆ 107 ಫಾಕೊಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು. 1 ವಾರ ಅಬ್ಸರ್ವೇಷನ್​ನಲ್ಲಿದ್ದ ಎಲ್ಲಾ ರೋಗಿಗಳು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಡಾ. ಸಿಂಗ್ ಮಾಹಿತಿ ನೀಡಿದ್ದಾರೆ.

“ಒಂದೇ ಬಾರಿಗೆ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದರಿಂದ ನನಗೆ ಸಂತೋಷವಾಗಿದೆ. ಇದು ಕಿರಿಯ ಸರ್ಜನ್​ಗಳಿಗೆ ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದು ಭಾವಿಸುತ್ತೇನೆ” ಎಂದು ಡಾ. ಸಿಂಗ್ ಸಂತಸ ಹಂಚಿಕೊಂಡಿದ್ದಾರೆ. ಐ ಸರ್ಜನ್ ಡಾ. ಸಿಂಗ್ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ಪತ್ರ ಬರೆದು, ಅಗತ್ಯವಿರುವ ಪುರಾವೆಗಳೊಂದಿಗೆ ತಮ್ಮ ಸಾಧನೆಯ ಬಗ್ಗೆ ತಿಳಿಸಿದ್ದಾರೆ

ಇದಕ್ಕೂ ಮೊದಲು, ನವ ದೆಹಲಿಯ ಸೇನಾ ಆಸ್ಪತ್ರೆಯ ಸಂಶೋಧನೆ ಮತ್ತು ರೆಫರಲ್‌ನ ಆಗಿನ ಬ್ರಿಗೇಡಿಯರ್ (ಡಾ) ಜೆಕೆಎಸ್ ಪರಿಹಾರ್ ಅವರು ಅಕ್ಟೋಬರ್ 2011ರಲ್ಲಿ ಪೂರ್ವ ಲಡಾಖ್‌ನಲ್ಲಿ 34 ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದರು.

ಇದನ್ನೂ ಓದಿ: Mahashivratri: 10 ನಿಮಿಷದಲ್ಲಿ 11.71 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್ ದಾಖಲೆ ಬರೆದ ಉಜ್ಜಯಿನಿ

Viral Video: ಹೆಲಿಕಾಪ್ಟರ್​​ ಕೆಳಗೆ ನೇತಾಡುತ್ತಾ ಪುಲ್ ಅಪ್ಸ್​ ಮಾಡಿ ದಾಖಲೆ ಬರೆದ ಯುವಕ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ