AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸ್​ ಬಂಕ್ ಮಾಡಿ ಶಾಲೆಯಲ್ಲೇ ಫೇಶಿಯಲ್​ ಮಾಡಿಸಿಕೊಂಡು ಪೇಚಿಗೆ ಸಿಲುಕಿದ ಮುಖ್ಯ ಶಿಕ್ಷಕಿ

ತರಗತಿಗೆ ಹೋಗದೆ ಗುಟ್ಟಾಗಿ ಶಾಲೆಯ ಅಡುಗೆ ಮನೆಯಲ್ಲಿ ಕುಳಿತು ಫೇಶಿಯಲ್ ಮಾಡಿಸಿಕೊಳ್ಳುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದನ್ನು ವಿಡಿಯೋ ಮಾಡಿ ಪ್ರಶ್ನಿಸಲು ಹೋದ ಶಿಕ್ಷಕಿಯನ್ನು ಥಳಿಸಿ ಕೈಗೆ ಕಚ್ಚಿ ಗಾಯಗೊಳಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಉನ್ನಾವೋನಲ್ಲಿ ನಡೆದಿದೆ.

ಕ್ಲಾಸ್​ ಬಂಕ್ ಮಾಡಿ ಶಾಲೆಯಲ್ಲೇ ಫೇಶಿಯಲ್​ ಮಾಡಿಸಿಕೊಂಡು ಪೇಚಿಗೆ ಸಿಲುಕಿದ ಮುಖ್ಯ ಶಿಕ್ಷಕಿ
ನಯನಾ ರಾಜೀವ್
|

Updated on: Apr 19, 2024 | 11:41 AM

Share

ಶಾಲೆಯ ಮುಖ್ಯಶಿಕ್ಷಕಿ(Teacher)ಯೊಬ್ಬರು ಕ್ಲಾಸ್​ ಬಂಕ್​ ಮಾಡಿ ಶಾಲೆಯ ಆವರಣದಲ್ಲೇ ಫೇಶಿಯಲ್​ ಮಾಡಿಸಿಕೊಂಡು ಈಗ ಪೇಚಿಗೆ ಸಿಲುಕಿದ್ದಾರೆ. ಉತ್ತರ ಪ್ರದೇಶ(Uttar Pradesh)ದ ಉನ್ನಾವೋದಲ್ಲಿ ಈ ಘಟನೆ ನಡೆದಿದೆ. ಮುಖ್ಯಶಿಕ್ಷಕಿ ಕ್ಯಾಂಪಸ್​ನಲ್ಲಿ ಫೇಶಿಯಲ್ ಮಾಡಿಸಿಕೊಳ್ಳುವುದನ್ನು ಸಹ ಶಿಕ್ಷಕಿಯೊಬ್ಬರು ವಿಡಿಯೋ ಮಾಡಿದ್ದಾರೆ, ಈ ವಿಷಯ ತಿಳಿಯುತ್ತಿದ್ದಂತೆ ಆ ಶಿಕ್ಷಕಿ ಮೇಲೆ ಮುಖ್ಯಶಿಕ್ಷಕಿ ಇಟ್ಟಿಗೆಯಿಂದ ಹೊಡೆದು, ಕೈ ಕಚ್ಚಿ ಹಲ್ಲೆ ನಡೆಸಿದ್ದಾರೆ.

ಸಂಗೀತಾ ಸಿಂಗ್ ಅವರು ತರಗತಿಯನ್ನು ತೆಗೆದುಕೊಳ್ಳುವ ಬದಲು ಉನ್ನಾವೊದ ದಾದಾಮೌ ಪ್ರಾಥಮಿಕ ಶಾಲೆಯ ಅಡುಗೆಮನೆಯೊಳಗೆ ಫೇಶಿಯಲ್ ಮಾಡಿಸಿಕೊಳ್ಳುತ್ತಿದ್ದರು. ಮತ್ತೊಬ್ಬ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ಪತ್ತೆಹಚ್ಚಿದ್ದಾರೆ.ಖಾನ್ ಚಿತ್ರೀಕರಿಸಿದ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೊಬೈಲ್​ ನೋಡಿದ ತಕ್ಷಣ ಎಚ್ಚೆತ್ತ ಮುಖ್ಯಶಿಕ್ಷಕಿ ನಾನು ಏನಾದರೂ ಮಾಡುತ್ತೇನೆ ಅದನ್ನು ಕೇಳಲು ನೀನ್ಯಾರು ಎಂದು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಕಲ್ಲನ್ನು ಎತ್ತಿಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ವಿಡಿಯೋ ವೈರಲ್ ಆದ ನಂತರ ಬ್ಲಾಕ್ ಶಿಕ್ಷಣಾಧಿಕಾರಿ ಈ ಬಗ್ಗೆ ತನಿಖೆ ಕೈಗೊಂಡಿದ್ದು, ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಖಾಸಗಿ ಕಂಪನಿ ಕೆಲಸ ಬಿಟ್ಟು ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ

ಸಂಗೀತಾ ಸಿಂಗ್ ವಿರುದ್ಧ ಅನಮ್ ಖಾನ್ ಬಿಘಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶಿಕ್ಷಕರಿಂದ ದೂರು ಬಂದಿದ್ದು, ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಘಾಪುರ ವೃತ್ತಾಧಿಕಾರಿ ಮಾಯಾ ರೈ ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!