AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸ್​ ಬಂಕ್ ಮಾಡಿ ಶಾಲೆಯಲ್ಲೇ ಫೇಶಿಯಲ್​ ಮಾಡಿಸಿಕೊಂಡು ಪೇಚಿಗೆ ಸಿಲುಕಿದ ಮುಖ್ಯ ಶಿಕ್ಷಕಿ

ತರಗತಿಗೆ ಹೋಗದೆ ಗುಟ್ಟಾಗಿ ಶಾಲೆಯ ಅಡುಗೆ ಮನೆಯಲ್ಲಿ ಕುಳಿತು ಫೇಶಿಯಲ್ ಮಾಡಿಸಿಕೊಳ್ಳುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದನ್ನು ವಿಡಿಯೋ ಮಾಡಿ ಪ್ರಶ್ನಿಸಲು ಹೋದ ಶಿಕ್ಷಕಿಯನ್ನು ಥಳಿಸಿ ಕೈಗೆ ಕಚ್ಚಿ ಗಾಯಗೊಳಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಉನ್ನಾವೋನಲ್ಲಿ ನಡೆದಿದೆ.

ಕ್ಲಾಸ್​ ಬಂಕ್ ಮಾಡಿ ಶಾಲೆಯಲ್ಲೇ ಫೇಶಿಯಲ್​ ಮಾಡಿಸಿಕೊಂಡು ಪೇಚಿಗೆ ಸಿಲುಕಿದ ಮುಖ್ಯ ಶಿಕ್ಷಕಿ
ನಯನಾ ರಾಜೀವ್
|

Updated on: Apr 19, 2024 | 11:41 AM

Share

ಶಾಲೆಯ ಮುಖ್ಯಶಿಕ್ಷಕಿ(Teacher)ಯೊಬ್ಬರು ಕ್ಲಾಸ್​ ಬಂಕ್​ ಮಾಡಿ ಶಾಲೆಯ ಆವರಣದಲ್ಲೇ ಫೇಶಿಯಲ್​ ಮಾಡಿಸಿಕೊಂಡು ಈಗ ಪೇಚಿಗೆ ಸಿಲುಕಿದ್ದಾರೆ. ಉತ್ತರ ಪ್ರದೇಶ(Uttar Pradesh)ದ ಉನ್ನಾವೋದಲ್ಲಿ ಈ ಘಟನೆ ನಡೆದಿದೆ. ಮುಖ್ಯಶಿಕ್ಷಕಿ ಕ್ಯಾಂಪಸ್​ನಲ್ಲಿ ಫೇಶಿಯಲ್ ಮಾಡಿಸಿಕೊಳ್ಳುವುದನ್ನು ಸಹ ಶಿಕ್ಷಕಿಯೊಬ್ಬರು ವಿಡಿಯೋ ಮಾಡಿದ್ದಾರೆ, ಈ ವಿಷಯ ತಿಳಿಯುತ್ತಿದ್ದಂತೆ ಆ ಶಿಕ್ಷಕಿ ಮೇಲೆ ಮುಖ್ಯಶಿಕ್ಷಕಿ ಇಟ್ಟಿಗೆಯಿಂದ ಹೊಡೆದು, ಕೈ ಕಚ್ಚಿ ಹಲ್ಲೆ ನಡೆಸಿದ್ದಾರೆ.

ಸಂಗೀತಾ ಸಿಂಗ್ ಅವರು ತರಗತಿಯನ್ನು ತೆಗೆದುಕೊಳ್ಳುವ ಬದಲು ಉನ್ನಾವೊದ ದಾದಾಮೌ ಪ್ರಾಥಮಿಕ ಶಾಲೆಯ ಅಡುಗೆಮನೆಯೊಳಗೆ ಫೇಶಿಯಲ್ ಮಾಡಿಸಿಕೊಳ್ಳುತ್ತಿದ್ದರು. ಮತ್ತೊಬ್ಬ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ಪತ್ತೆಹಚ್ಚಿದ್ದಾರೆ.ಖಾನ್ ಚಿತ್ರೀಕರಿಸಿದ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೊಬೈಲ್​ ನೋಡಿದ ತಕ್ಷಣ ಎಚ್ಚೆತ್ತ ಮುಖ್ಯಶಿಕ್ಷಕಿ ನಾನು ಏನಾದರೂ ಮಾಡುತ್ತೇನೆ ಅದನ್ನು ಕೇಳಲು ನೀನ್ಯಾರು ಎಂದು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಕಲ್ಲನ್ನು ಎತ್ತಿಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ವಿಡಿಯೋ ವೈರಲ್ ಆದ ನಂತರ ಬ್ಲಾಕ್ ಶಿಕ್ಷಣಾಧಿಕಾರಿ ಈ ಬಗ್ಗೆ ತನಿಖೆ ಕೈಗೊಂಡಿದ್ದು, ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಖಾಸಗಿ ಕಂಪನಿ ಕೆಲಸ ಬಿಟ್ಟು ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ

ಸಂಗೀತಾ ಸಿಂಗ್ ವಿರುದ್ಧ ಅನಮ್ ಖಾನ್ ಬಿಘಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶಿಕ್ಷಕರಿಂದ ದೂರು ಬಂದಿದ್ದು, ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಘಾಪುರ ವೃತ್ತಾಧಿಕಾರಿ ಮಾಯಾ ರೈ ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ