AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಫೀಸ್‌ ಕಟ್ಟಿಲ್ಲ, ಮಕ್ಕಳನ್ನು ಶಾಲೆಯಿಂದ ಹೊರ ಹಾಕಿ ಬಿಸಿಲಲ್ಲಿ ಕೂರಿಸಿದ ಪ್ರೈವೆಟ್‌ ಸ್ಕೂಲ್‌ ಮ್ಯಾನೇಜರ್

ಇಲ್ಲೊಂದು ಕಡೆ ಅಮಾನವೀಯ ಘಟನೆಯೊಂದು ನಡೆದಿದ್ದು, ಪೋಷಕರು ಸಮಯಕ್ಕೆ ಸರಿಯಾಗಿ ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಪ್ರೈವೆಟ್‌ ಸ್ಕೂಲ್‌ ಮ್ಯಾನೇಜರ್‌ ಒಬ್ಬ ವಿದ್ಯಾರ್ಥಿಗಳನ್ನು ಶಾಲೆಯ ಗೇಟ್‌ನಿಂದ ಹೊರ ಹಾಕಿ ಬಿಸಿಲಲ್ಲಿ ಕೂರಿಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮ್ಯಾನೇಜರ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Viral: ಫೀಸ್‌ ಕಟ್ಟಿಲ್ಲ, ಮಕ್ಕಳನ್ನು ಶಾಲೆಯಿಂದ ಹೊರ ಹಾಕಿ ಬಿಸಿಲಲ್ಲಿ ಕೂರಿಸಿದ ಪ್ರೈವೆಟ್‌ ಸ್ಕೂಲ್‌ ಮ್ಯಾನೇಜರ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Oct 02, 2024 | 3:17 PM

Share

ಕೆಲವೊಂದು ಬಾರಿ ನಾನಾ ಕಾರಣಗಳಿಂದ ಪೋಷಕರಿಗೆ ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಸಾಧ್ಯವಾಗುವುದಿಲ್ಲ. ಇದೇ ಕಾರಣವನ್ನು ಇಟ್ಟುಕೊಂಡು ಶಿಕ್ಷಕರು ಅಥವಾ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಅವಮಾನ ಮಾಡುವಂತಿಲ್ಲ. ಆದ್ರೆ ಇಲ್ಲೊಂದು ಖಾಸಗಿ ಶಾಲೆಯಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಪೋಷಕರು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಸ್ಕೂಲ್‌ ಮ್ಯಾನೇಜರ್‌ ಒಬ್ಬ ವಿದ್ಯಾರ್ಥಿಗಳನ್ನು ಶಾಲೆಯ ಗೇಟ್‌ನಿಂದ ಹೊರ ಹಾಕಿ ಬಿಸಿಲಲ್ಲಿ ಕೂರಿಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಸ್ಕೂಲ್‌ ಮ್ಯಾನೇಜರ್‌ ಸುಮಾರು 100 ಮುಗ್ಧ ವಿದ್ಯಾರ್ಥಿಗಳನ್ನು ಗೇಟ್‌ ಒಳಗೆ ಬರಲು ಬಿಡದೆ ಬಿಸಿಲಲ್ಲಿ ಕೂರಿಸಿದ್ದಾನೆ. ಅಷ್ಟೇ ಅಲ್ಲದೆ ವಿಡಿಯೋ ಮಾಡುವ ಮೂಲಕ ಶುಲ್ಕ ಕಟ್ಟುವಂತೆ ಒತ್ತಡ ಹೇರಿ ಮಕ್ಕಳಿಗೆ ಅವಮಾನವನ್ನೂ ಮಾಡಿದ್ದಾನೆ. ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದ್ದು, ಮ್ಯಾನೇಜರ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಸದ್ಯ ಈ ಬಗ್ಗೆ ಶಾಲಾ ನಿರೀಕ್ಷಕರು ತನಿಖೆಗೆ ಆದೇಶಿಸಿದ್ದಾರೆ.

Info_4Education ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಕ್ಕಳು ಶಾಲೆಗೆ ಗೇಟ್‌ ಹೊರಗಡೆ ಬಿಸಿಲಿನಲ್ಲಿ ತಲೆ ತಗ್ಗಿಸಿ ಕುಳಿತಿರುವಂತಹ ದೃಶ್ಯವನ್ನು ಕಾಣಬಹುದು. ಶುಲ್ಕವನ್ನು ಕಟ್ಟುವವರೆಗೆ ನಿಮ್ಮ ಮಕ್ಕಳನ್ನು ಶಾಲೆಯ ಗೇಟ್‌ ಒಳಗೆ ಬಿಡುವುದಿಲ್ಲ ಎಂದು ಪೋಷಕರಿಗೆ ಈಗಾಗಲೇ ತಿಳಿಸಲಾಗಿದೆ, ಆದ್ರೆ ಅವರು ಇನ್ನೂ ಫೀಸ್‌ ಕಟ್ಟಿಲ್ಲ ಅದಕ್ಕಾಗಿ ಇವರನ್ನೆಲ್ಲಾ ಹೊರ ಹಾಕಿದ್ದೇನೆ ಎಂದು ಮ್ಯಾನೇಜರ್‌ ವಿಡಿಯೋ ಮಾಡುತ್ತಾ ದರ್ಪದ ಮಾತುಗಳನ್ನಾಡಿದ್ದಾನೆ.

ಇದನ್ನೂ ಓದಿ: ತಂದೆಯೇ ತನ್ನ ಮಗಳನ್ನು ಮದುವೆಯಾಗುವ ಅನಿಷ್ಠ ಸಂಪ್ರದಾಯ, ಎಂಥಾ ವಿಚಿತ್ರ ಪದ್ಧತಿ ನೋಡಿ…

ಅಕ್ಟೋಬರ್‌ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಶುಲ್ಕ ಪಾವತಿ ಮಾಡಲು ಸಾಧ್ಯವಾಗದಿದ್ದರೆ, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬಹುದಿತ್ತಲ್ವಾʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!