ವಿಡಿಯೋ ವೈರಲ್: ಈ ಮನೆಯಲ್ಲಿ ಹಾವುಗಳದ್ದೇ ರಾಶಿ, ಮೈ ಜುಮ್ ಎನಿಸುವ ದೃಶ್ಯ

ನಾವೆಲ್ಲರೂ ಈ ಹಾವು ಹೆಸರು ಕೇಳಿದರೆ ಕೂಡಲೇ ಭಯ ಪಡುತ್ತೇವೆ. ಅಪ್ಪಿ ತಪ್ಪಿ ಈ ಹಾವು ಮನೆಯೊಳಗೆ ಬಂದು ಬಿಟ್ಟರೆ, ಅದು ಹೊರಗೆ ಹೋಗುವ ತನಕ ನಾವು ಮನೆಯೊಳಗೆ ಕಾಲಿಡಲ್ಲ. ಆದರೆ ಇಲ್ಲೊಂದು ಮನೆಯ ನೆಲಮಾಳಿಗೆಯ ಮೇಲೆ ಹತ್ತಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ದೃಶ್ಯ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರು ಭಯಭೀತರಾಗಿದ್ದಾರೆ.

ವಿಡಿಯೋ ವೈರಲ್: ಈ ಮನೆಯಲ್ಲಿ ಹಾವುಗಳದ್ದೇ ರಾಶಿ, ಮೈ ಜುಮ್ ಎನಿಸುವ ದೃಶ್ಯ
ವೈರಲ್​​ ವಿಡಿಯೋ
Edited By:

Updated on: May 21, 2025 | 12:33 PM

ಉತ್ತರ ಪ್ರದೇಶ, ಮೇ 21 : ಮಳೆಗಾಲ (rainy season) ದಲ್ಲಿ ಹಾವುಗಳು ಮನೆಯ ಸುತ್ತಮುತ್ತ ಕಾಣಿಸಿಕೊಳ್ಳುತ್ತವೆ. ಹಲವು ಬಾರಿ ಮನೆಯ ಮೂಲೆಯಲ್ಲಿ ಅಥವಾ ಬೆಚ್ಚಗೆಗಿರುವ ಸ್ಥಳಗಳಲ್ಲಿ ಅವಿತು ಕುಳಿತುಕೊಳ್ಳುವುದನ್ನು ನೀವು ನೋಡಿರಬಹುದು. ಸಾಮಾನ್ಯವಾಗಿ ಒಂದು ಹಾವು (snake) ಕಣ್ಣಿಗೆ ಬಿದ್ದ ಕೂಡಲೇ ಎದೆ ಹಿಡಿದು ಓಡಿ ಹೋಗುವವರೇ ಹೆಚ್ಚು. ಆದರೆ ಇದೀಗ ಮನೆಯ ನೆಲ ಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳು ಕಂಡು ಬಂದಿದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ಈ ದೃಶ್ಯವು ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಈ ಘಟನೆಯೂ ಉತ್ತರ ಪ್ರದೇಶ (Uttar Pradesh) ದ ಮಹಾರಾಜ್‌ಗಂಜ್‌ನ ಹಾರ್ದಿದಾಲಿ ಗ್ರಾಮ (Hardidali village of maharajganj)ದಲ್ಲಿ ನಡೆದಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಸಂಸ್ಥೆ ಭಾರತ ಸಮಾಚಾರ ಹೆಸರಿನ ಎಕ್ಸ್​​​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನೆಲಮಾಳಿಗೆಯ ಗೂಡಿನಂತಹ ರಚನೆಯಲ್ಲಿ ಹತ್ತಕ್ಕೂ ಹೆಚ್ಚು ಹಾವುಗಳನ್ನು ಕಾಣಬಹುದು. ಹಾವುಗಳು ಗಿಜಿಗುಟ್ಟುತ್ತಾ ನಿಧಾನವಾಗಿ ಚಲಿಸುತ್ತಿದೆ. ಈ ದೃಶ್ಯವು ಒಂದು ಕ್ಷಣ ಮೈ ಜುಮ್​​​​ ಎನ್ನುವಂತೆ ಮಾಡುತ್ತದೆ. ಮನೆಯ ನೆಲಮಾಳಿಗೆಯ ಮೇಲೆ ಹಾವುಗಳ ರಾಶಿಯನ್ನು ಕಂಡ ಗ್ರಾಮಸ್ಥರು ತಕ್ಷಣವೇ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ
ಟೈಮ್‌ ಟ್ರಾವೆಲಿಂಗ್‌ ಮಾಡಿ ಮಹಾತ್ಮರನ್ನು ಭೇಟಿಯಾದ ಮೋದಿಜಿ-ಯೋಗಿಜಿ
ಫ್ರೀಯಾಗಿ ಕೊಟ್ಟ ಚಟ್ನಿಯ ಹೆಸ್ರನ್ನೂ ಬಿಲ್‌ನಲ್ಲಿ ನಮೂದಿಸಿದ ಹೋಟೆಲ್
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುತ್ತಾ?

ಇದನ್ನೂ ಓದಿ : ಪ್ರವಾಸಿಗರ ಮೇಲೆ ಕಲ್ಲು ಎಸೆದ ಮರಿ ಚಿಂಪಾಜಿ, ತಾಯಿ ಚಿಂಪಾಂಜಿಯ ರಿಯಾಕ್ಷನ್​​ ನೋಡಿ?

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಇನ್ನು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಎರಡು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರು, ಇದು ಎಐ ಎಫೆಕ್ಟ್ ಎಂದಿದ್ದಾರೆ. ಇನ್ನೊಬ್ಬರು, ಇಷ್ಟೊಂದು ಹಾವುಗಳು ಇಲ್ಲಿಗೆ ಹೇಗೆ ಬಂತು ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು, ಪೊಲೀಸರು ಮತ್ತು ಅರಣ್ಯ ಇಲಾಖೆಗೆ ಇದಕ್ಕೆ ಸಂಬಂಧ ಪಟ್ಟಂತೆ ತಕ್ಷಣವೇ ಕ್ರಮ ಕೈಗೊಳ್ಳಿ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 12:23 pm, Wed, 21 May 25

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us