Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಿಯುಗದ ಶ್ರವಣ ಕುಮಾರ; ಹೆತ್ತವಳ ಆಸೆ ಈಡೇರಿಸಲು ವೃದ್ಧ ತಾಯಿಯನ್ನು ಬಂಡಿಯಲ್ಲಿ ಕುಂಭಮೇಳಕ್ಕೆ ಕರೆದೊಯ್ದ ಮಗ

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಜಗತ್ತಿನ ಈ ಅತಿದೊಡ್ಡ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬರು ವೃದ್ಧೆ ಕುಂಭಮೇಳದಲ್ಲಿ ಪಾಲ್ಗೊಳ್ಳಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದು, ತಾಯಿಯ ಈ ಬಯಕೆಯನ್ನು ಈಡೇರಿಸಲೇಬೇಕೆಂದು ತಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೂ ಮಗ, ವೃದ್ಧ ತಾಯಿಯನ್ನು ಬಂಡಿಯಲ್ಲಿ ಕೂರಿಸಿ, ಕುಂಭಮೇಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಕಲಿಯುಗದ ಶ್ರವಣ ಕುಮಾರನ ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಕಲಿಯುಗದ ಶ್ರವಣ ಕುಮಾರ; ಹೆತ್ತವಳ ಆಸೆ ಈಡೇರಿಸಲು ವೃದ್ಧ ತಾಯಿಯನ್ನು ಬಂಡಿಯಲ್ಲಿ ಕುಂಭಮೇಳಕ್ಕೆ ಕರೆದೊಯ್ದ ಮಗ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 29, 2025 | 5:46 PM

ಅಂದಿನ ಕಾಲದಲ್ಲಿ ಶ್ರವಣ ಕುಮಾರ ಕಣ್ಣು ಕಾಣದ ತನ್ನ ಹೆತ್ತವರನ್ನು ಹೆಗಲ ಮೇಲೆ ಹೊತ್ತು ತೀರ್ಥಯಾತ್ರೆಗೆ ಕರೆದೊಯ್ಯುವ ಮೂಲಕ ಮಾತೃ ಮತ್ತು ಪಿತೃ ಭಕ್ತಿ ಮೆರೆದಿದ್ದ. ಅದೇ ರೀತಿ ಇಲ್ಲೊಬ್ರು ಆಧುನಿಕ ಶ್ರವಣ ಕುಮಾರ ಹೆತ್ತವಳ ಆಸೆಯನ್ನು ಈಡೇರಿಸಲು ವೃದ್ಧ ತಾಯಿಯನ್ನು ಬಂಡಿಯ ಮೇಲೆ ಕೂರಿಸಿ ಮಹಾ ಕುಂಭಮೇಳಕ್ಕೆ ಕರೆದೊಯದಿದ್ದಾರೆ. ಹೌದು ತಾಯಿಯ ಈ ಬಯಕೆಯನ್ನು ಈಡೇರಿಸಲೇಬೇಕೆಂದು ತಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೂ ಮಗ, ವೃದ್ಧ ತಾಯಿಯನ್ನು ಬಂಡಿಯಲ್ಲಿ ಕೂರಿಸಿ, ಕುಂಭಮೇಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಕಲಿಯುಗದ ಶ್ರವಣ ಕುಮಾರನ ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಬುಲಂದರ್‌ಶಹರ್‌ನ 65 ವರ್ಷದ ವ್ಯಕ್ತಿಯೊಬ್ಬರು 92 ವರ್ಷ ವಯಸ್ಸಿನ ತನ್ನ ತಾಯಿಯನ್ನು ಬಂಡಿಯ ಮೇಲೆ ಕೂರಿಸಿ ಮಹಾಕುಂಭಮೇಳಕ್ಕೆ ಕರೆದೊಯ್ದಿದ್ದಾರೆ. ತಾನು ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನವನ್ನು ಮಾಡಬೇಕೆಂದು ತಾಯಿ ಮಗನ ಬಳಿ ಹೇಳಿಕೊಂಡಿದ್ದು, ತಾಯಿಯ ಆಸೆಯನ್ನು ಇಡೇರಿಸಲೇಬೇಕೆಂದು ತಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೂ ಮಗ, ವೃದ್ಧ ತಾಯಿಯನ್ನು ಬಂಡಿಯಲ್ಲಿ ಕೂರಿಸಿ, ಸ್ವತಃ ತಾನೇ ಬಂಡಿಯನ್ನು ಎಳೆದೊಯ್ಯುವ ಮೂಲಕ ಕುಂಭಮೇಳಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ವರದಿಗಳ ಪ್ರಕಾರ 13 ದಿನಗಳ ಕಾಲ ಪ್ರಯಾಣ ಮಾಡುವ ಮೂಲಕ ಅವರು ಪ್ರಯಾಗ್‌ರಾಜ್‌ಗೆ ತಲುಪಲಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು ians_india ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮಗ ತನ್ನ ವೃದ್ಧ ತಾಯಿಯನ್ನು ಬಂಡಿಯ ಮೇಲೆ ಕೂರಿಸಿ, ಆಕೆಯನ್ನು ಮಹಾಕುಂಭಮೇಳಕ್ಕೆ ಕರೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಕಾಣಬಹುದು. ಈ ದೃಶ್ಯ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಕಲಿಯುಗದ ಶ್ರವಣ ಕುಮಾರನ ಈ ಮಾತೃ ಪ್ರೇಮವನ್ನು ನೆಟ್ಟಿಗರು ಕೊಂಡಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Wed, 29 January 25

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!