AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಧುನಿನ ಕಡೆಯವರು ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ

ಕ್ಷುಲ್ಲಕ ಕಾರಣಗಳಿಂದ ಇನ್ನೇನು ಸ್ವಲ್ಪ ಹೊತ್ತಿನಲ್ಲಿ ಆಗಬೇಕಿದ್ದ ಮದುವೆಗಳೇ ನಿಂತು ಹೋದ ಅದೆಷ್ಟೋ ಘಟನೆಗಳು ಈ ಹಿಂದೆಯೂ ಸಾಕಷ್ಟು ನಡೆದಿವೆ. ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ವಧುವಿನ ಕಡೆಯವರು ರೊಟ್ಟಿ ಬಡಿಸಲು ತಡ ಮಾಡಿದರೆಂಬ ಕಾರಣಕ್ಕೆ ವರನೊಬ್ಬ ಆಗಬೇಕಿದ್ದ ಮದುವೆಯನ್ನೇ ರದ್ದು ಮಾಡಿ, ಮರುದಿನ ತನ್ನ ಅತ್ತೆ ಮಗಳೊಂದಿಗೆ ಮದುವೆಯಾಗಿದ್ದಾನೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: ವಧುನಿನ ಕಡೆಯವರು ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Dec 31, 2024 | 1:00 PM

Share

ಮದುವೆ ಮಂಟಪದಲ್ಲಿವೇ ಮದುವೆ ಮುರಿದು ಬಿದ್ದಂತಹ ಕೆಲವೊಂದಿಷ್ಟು ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಅದರಲ್ಲೂ ಕೇವಲ ಊಟದ ವಿಚಾರಕ್ಕೆ ಅದೆಷ್ಟೋ ಮದುವೆಗಳು ರದ್ದಾಗಿದ್ದುಂಟು, ಮದುವೆ ಮನೆ ರಣರಂಗವಾಗಿದ್ದುಂಟು. ಇದೀಗ ಇಲ್ಲೊಂದು ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ವಧುವಿನ ಕಡೆಯವರು ರೊಟ್ಟಿ ಬಡಿಸಲು ತಡ ಮಾಡಿದರೆಂಬ ಕಾರಣಕ್ಕೆ ವರನೊಬ್ಬ ಆಗಬೇಕಿದ್ದ ಮದುವೆಯನ್ನೇ ರದ್ದು ಮಾಡಿ, ಮರುದಿನ ಅತ್ತೆ ಮಗಳೊಂದಿಗೆ ಮದುವೆಯಾಗಿದ್ದಾನೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ವಧುವಿನ ಕಡೆಯವರು ರೊಟ್ಟಿ ಬಡಿಸಲು ವಿಳಂಬ ಮಾಡಿದರೆಂದು ಕೋಪಗೊಂಡ ವರ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾನೆ. ನಂತರ ಆತ ತನ್ನ ಅತ್ತೆ ಮಗಳನ್ನು ಮದುವೆಯಾಗಿದ್ದಾನೆ.

ವರದಿಗಳ ಪ್ರಕಾರ ಡಿಸೆಂಬರ್‌ 22 ರಂದು ಈ ಘಟನೆ ನಡೆದಿದ್ದು, ವರ ತನ್ನ ಸ್ನೇಹಿತರೊಂದಿಗೆ ಊಟಕ್ಕೆ ಕುಳಿತ ಸಂದರ್ಭದಲ್ಲಿ ಮದುಮಗನಿಗೆ ವಧುವಿನ ಕುಟುಂಬಸ್ಥರು ರೊಟ್ಟಿ ಬಡಿಸುವಾಗ ವಿಳಂಬ ಮಾಡಿದ್ದು, ಇದನ್ನು ಕಂಡು ಸ್ನೇಹಿತರು ಆತನನ್ನು ಗೇಲಿ ಮಾಡಿದ್ದಾರೆ. ಇದರಿಂದ ಕೋಪಗೊಂಡ ವರ ವಧುವಿನ ಮನೆಯವರನ್ನು ನಿಂದಿಸಿ ಕೊನೆಗೆ ಮದುವೆಯನ್ನೇ ಕ್ಯಾನ್ಸಲ್‌ ಮಾಡಿ ಹೊರಟು ಹೋಗಿದ್ದಾನೆ. ನ್ಯಾಯಕ್ಕಾಗಿ ವಧುವಿನ ಕಡೆಯವರು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ನಾವೆಲ್ಲರೂ ಬೆಳಗ್ಗೆಯೇ ರೆಡಿಯಾಗಿ ಕುಳಿತಿದ್ದೆವು. ಆದರೆ ಆತ ರೊಟ್ಟಿ ಬಡಿಸಲು ತಡವಾಯಿತೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ. ಅಷ್ಟೇ ಅಷ್ಟೇ ಅಲ್ಲದೆ ನನ್ನ ಪೋಷಕರನ್ನು ಕೂಡಾ ನಿಂದಿಸಿದ್ದಾನೆ. ಅದಕ್ಕಾಗಿ ನಾನು ಪೊಲೀಸ್‌ ಠಾಣೆಯ ಮೆಟ್ಟಿಲೇರಬೇಕಾಯಿತು ಎಂದು ವಧು ಹೇಳಿಕೊಂಡಿದ್ದಾಳೆ.

ಮದುವೆ ಮನೆಗೆ ಸುಮಾರು 200 ಮಂದಿ ಅತಿಥಿಗಳು ಬಂದಿದ್ದರು. ಅತಿಥಿಗಳ ಆತಿಥ್ಯದಿಂದ ಹಿಡಿದು ಊಟದವರೆಗೆ ಸುಮಾರು ಏಳು ಲಕ್ಷ ರೂ. ಖರ್ಷಾಗಿದೆ. ಅಷ್ಟೇ ಅಲ್ಲದೆ ಮದುವೆಯ ದಿನವೇ ವರದಕ್ಷಿಣೆಯ ರೂಪದಲ್ಲಿ 1.5 ಲಕ್ಷ ರೂ.ಗಳನ್ನು ಕೂಡಾ ನೀಡಿದ್ದೇವೆ ಎಂದು ವಧುವಿನ ತಾಯಿ ಆರೋಪಿಸಿದ್ದಾರೆ. ಇದೀಗ ವರ ಬೇರೆ ಮದುವೆಯಾಗಿದ್ದು, ಆತನ ವಿರುದ್ಧ ಎಫ್‌.ಐ.ಆರ್‌ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಒಂಟಿಯಾಗಿದ್ದ ತಾಯಿಗೆ ಎರಡನೇ ಮದುವೆ ಮಾಡಿಸಿದ ಮಗ; ಭಾವನಾತ್ಮಕ ವಿಡಿಯೋ ವೈರಲ್‌

ನಂತರ ಎಸ್ಪಿ ಸೂಚನೆ ಮೇರೆಗೆ ಎರಡೂ ಕಡೆಯವರನ್ನು ಹಾಗೂ ಗ್ರಾಮದ ಮುಖಂಡರನ್ನು ಮೊಘಲ್ಸರಾಯ್ ಠಾಣೆಗೆ ಕರೆಸಿ, ರಾಜಿ ಸಂದಾನ ಮಾಡಲಾಯಿತು. ಗಂಟೆಗಳ ಮಾತುಕತೆಯ ನಂತರ, ಅಂತಿಮವಾಗಿ ಎರಡೂ ಕಡೆಯವರ ನಡುವೆ ಒಪ್ಪಂದ ನಡೆದು ವರನ ಕಡೆಯವರು ವಧುವಿಗೆ 1.61 ಲಕ್ಷ ರೂ. ಪರಿಹಾರ ಧನ ಕೊಡುವುದಾಗಿ ಒಪ್ಪಿಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು