AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತ ಸಿಂಗಲ್​ ಹುಡುಗರೇ ಈಕೆಯ ಟಾರ್ಗೆಟ್!; ಏಳನೇ ಮದುವೆಯ ವೇಳೆ ಸಿಕ್ಕಿಬಿದ್ದ ಯುವತಿ

ಉತ್ತರ ಪ್ರದೇಶದಲ್ಲಿ ಒಂಟಿ ಪುರುಷರನ್ನು ಮದುವೆಯ ಹೆಸರಿನಲ್ಲಿ ವಂಚಿಸಿ, ಅವರ ಮನೆಗಳಿಂದ ನಗದು ಮತ್ತು ಚಿನ್ನಾಭರಣ ದೋಚುವ ದಂಧೆ ನಡೆಸುತ್ತಿದ್ದ ನಾಲ್ಕು ಜನರ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಪೂನಂ ಎಂಬ ಯುವತಿ ಈ ದಂಧೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಆಕೆ ಈಗಾಗಲೇ ಆರು ಮದುವೆಗಳನ್ನು ಮಾಡಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಈ ಗ್ಯಾಂಗ್ ಅನ್ನು ಬಂಧಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ.

ಶ್ರೀಮಂತ ಸಿಂಗಲ್​ ಹುಡುಗರೇ ಈಕೆಯ ಟಾರ್ಗೆಟ್!; ಏಳನೇ ಮದುವೆಯ ವೇಳೆ ಸಿಕ್ಕಿಬಿದ್ದ ಯುವತಿ
Uttar Pradesh Wedding Scam
ಅಕ್ಷತಾ ವರ್ಕಾಡಿ
|

Updated on:Dec 26, 2024 | 12:09 PM

Share

ಉತ್ತರ ಪ್ರದೇಶ: ಮದುವೆಯ ಹೆಸರಿನಲ್ಲಿ ಒಂಟಿ ಪುರುಷರನ್ನು ವಂಚಿಸಿ ನಂತರ ಅವರ ಮನೆಗಳಿಂದ ನಗದು ಮತ್ತು ಚಿನ್ನಾಭರಣ ದೋಚುವ ದಂಧೆ ನಡೆಸುತ್ತಿದ್ದ ಗುಂಪೊಂದು ಉತ್ತರ ಪ್ರದೇಶದ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಒಂಟಿ ಪುರುಷರನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಯುವತಿ ಪೂನಂ ಈಗಾಗಲೇ 6 ಮದುವೆಯಾಗಿದ್ದು, ಇದೀಗ ಏಳನೇ ಮದುವೆಯ ವೇಳೆ ಸಿಕ್ಕಿ ಬಿದ್ದಿದ್ದಾಳೆ. ಈ ಕಿಲಾಡಿ ಯುವತಿಯ ಹಿಂದೆ ದೊಡ್ಡ ಗ್ಯಾಂಗ್ ಇರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದ ಬಂದಾ ಮೂಲದ ಪೂನಂ ವಧುವಾಗಿ, ಸಂಜನಾ ಗುಪ್ತಾ ತಾಯಿಯಾಗಿ, ವಿಮಲೇಶ್ ವರ್ಮಾ ಮತ್ತು ಧರ್ಮೇಂದ್ರ ಪ್ರಜಾಪತಿ ಅಳಿಯಂದಿರಾಗಿ ನಾಲ್ವರು ಸೇರಿ ಗ್ಯಾಂಗ್ ಕಟ್ಟಿಕೊಂಡಿದ್ದರು. ಅವರಲ್ಲಿ ವಿಮಲೇಶ್ ವರ್ಮಾ ಮತ್ತು ಧರ್ಮೇಂದ್ರ ಪ್ರಜಾಪತಿ ಎಂಬವರು ಶ್ರೀಮಂತ ವ್ಯಕ್ತಿಗಳನ್ನು ಅಂದರೆ ಮದುವೆಯಾಗಲು ಹುಡುಗಿ ಹುಡುಕುತ್ತಿರುವ ಪುರುಷರನ್ನು ತಮ್ಮತ್ತ ಸೆಳೆಯುತ್ತಿದ್ದರು.

ಸುಂದರ ಹುಡುಗಿಯನ್ನು ತೋರಿಸುತ್ತೇವೆ ಎಂದು ಹೇಳಿ ತಮ್ಮ ಗ್ಯಾಂಗ್​ನಲ್ಲಿದ್ದ ಪೂನಂನನ್ನು ಪರಿಚಿಯಿಸುತ್ತಿದ್ದರು. ಶ್ರೀಮಂತ ಪುರುಷರನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿ ಮದುವೆಯಾಗುತ್ತಿದ್ದ ಪೂನಂ, ಆತನ ಮನೆಯಲ್ಲಿ ಹಣ, ಬಂಗಾರ ಬೆದರಿಕೆಯೊಡ್ಡಿ ಪರಾರಿಯಾಗುತ್ತಿದ್ದಳು. ಈ ಕ್ರಮದಲ್ಲಿ ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಶಂಕರ್ ಉಪಾಧ್ಯಾಯ ಎಂಬುವವರ ಜೊತೆ ಪೂನಂ ಮದುವೆ ಸಿದ್ಧವಾಗಿತ್ತು. ಇದಲ್ಲದೇ 1.5 ಲಕ್ಷ ರೂ. ನೀಡುವಂತೆ ಶಂಕರ್​ಗೆ ಬೆದರಿಕೆ ನೀಡಲಾಗಿತ್ತು. ಅವರಿಂದ ತಪ್ಪಿಸಿಕೊಂಡ ಶಂಕರ್​ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಅಸಲಿ ಕಥೆ ಹೊರಬಿದ್ದಿದೆ.

ಇದನ್ನೂ ಓದಿ: ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ; ಅಪರಾಧದ ಬಗ್ಗೆ ತಿಳಿದರೆ ನಿಮ್ಮ ರಕ್ತ ಕುದಿಯುವುದಂತೂ ಖಂಡಿತಾ

ಇದೊಂದು ದಂಧೆ ಎಂಬುದು ಪತ್ತೆಯಾಗಿದ್ದು, ಪೂನಂ ಈಗಾಗಲೇ ಆರು ಮದುವೆಯಾಗಿ ಕಳ್ಳತನ ಮಾಡಿ ಪರಾರಿಯಾಗಿದ್ದಾಳೆ. ಇದರಿಂದ ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯ ಹೆಸರಿನಲ್ಲಿ ಒಂಟಿ ಪುರುಷರನ್ನು ವಂಚಿಸಿ ನಂತರ ಅವರ ಮನೆಗಳಲ್ಲಿ ನಗದು ಮತ್ತು ಚಿನ್ನಾಭರಣ ದೋಚುವ ದಂಧೆ ನಡೆಸುತ್ತಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Thu, 26 December 24

Follow Us
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!