AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುಂದಿನ ಜನ್ಮದಲ್ಲಿ ಸಿಗೋಣ… ವರನಿಗೆ ಮೆಸೇಜ್‌ ಮಾಡಿ ಮದುವೆ ಹಿಂದಿನ ದಿನ ನಾಪತ್ತೆಯಾದ ವಧು

ಹಲವಾರು ಕಾರಣಗಳಿಂದಾಗಿ ಆಗಬೇಕಿದ್ದ ಮದುವೆ ಕಾರ್ಯಕ್ರಮಗಳು ನಿಂತು ಹೋದಂತಹ ಸುದ್ದಿಗಳನ್ನು ಕೇಳಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಮದುವೆಯ ಹಿಂದಿನ ದಿನವೇ ವಧು ನಿಗೂಡವಾಗಿ ನಾಪತ್ತೆಯಾಗಿದ್ದಾಳೆ. ಪ್ರೇಮ ವಿವಾಹವಾಗಬೇಕಿದ್ದ ಆಕೆ ತನ್ನ ಭಾವಿ ಪತಿಗೆ ಮುಂದಿನ ಜನ್ಮದಲ್ಲಿ ಸಿಗೋಣ ಎಂಬ ವಾಟ್ಸಾಪ್‌ ಸಂದೇಶವನ್ನು ಕಳುಹಿಸಿ ನಿಗೂಢವಾಗಿ ಕಣ್ಮರೆಯಾಗಿದ್ದಾಳೆ. ಈ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದೆ.

Viral: ಮುಂದಿನ ಜನ್ಮದಲ್ಲಿ ಸಿಗೋಣ… ವರನಿಗೆ ಮೆಸೇಜ್‌ ಮಾಡಿ ಮದುವೆ ಹಿಂದಿನ ದಿನ ನಾಪತ್ತೆಯಾದ ವಧು
ವೈರಲ್​​ ಪೋಸ್ಟ್​​
ಮಾಲಾಶ್ರೀ ಅಂಚನ್​
| Edited By: |

Updated on: Mar 11, 2025 | 9:39 AM

Share

ಉತ್ತರ ಪ್ರದೇಶ, ಮಾ. 11: ಮದುವೆ (Wedding) ಮನೆಗಳಲ್ಲಿ ನಡೆಯುವ ಹೈ ಡ್ರಾಮಾಗಳಿಗೆ ಸಂಬಂಧಪಟ್ಟ ಒಂದಷ್ಟು ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ವರದಕ್ಷಿಣೆಯ (Dowry) ಕಾರಣದಿಂದ ಮದುವೆ ನಿಂತು ಹೋದ, ಊಟದ ವಿಚಾರಕ್ಕೆ ವಧು-ವರರ ಕುಟುಂಬಸ್ಥರ ನಡುವೆ ಮನಸ್ತಾಪ ಏರ್ಪಟ್ಟ ಸಾಕಷ್ಟು ಪ್ರಕರಣಗಳು ಈ ಹಿಂದೆಯೂ ನಡೆದಿವೆ. ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಮದುವೆ ಹಿಂದಿನ ದಿನ ಮದುವೆ ಮನೆಯಿಂದ ವಧುವೇ ನಾಪತ್ತೆಯಾಗಿದ್ದಾಳೆ. ಹೌದು ಪ್ರೇಮ ವಿವಾಹವಾಗಬೇಕಿದ್ದ ಆಕೆ ತನ್ನ ಭಾವಿ ಪತಿಗೆ ಮುಂದಿನ ಜನ್ಮದಲ್ಲಿ ಸಿಗೋಣ ಎಂಬ ವಾಟ್ಸಾಪ್‌ ಸಂದೇಶವನ್ನು ಕಳುಹಿಸಿ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಈ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದೆ.

‌ಉತ್ತರ ಪ್ರದೇಶದ ಕುಶಿನಗರ ಎಂಬಲ್ಲಿ ಈ ಘಟನೆ ನಡೆದಿದ್ದು, ಪ್ರೇಮ ವಿವಾಹವಾಗಬೇಕಿದ್ದ ವಧುವೇ ಮದುವೆಯ ಹಿಂದಿನ ದಿನ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಇಲ್ಲಿನ ಖಡ್ಡಾ ಎಂಬಲ್ಲಿನ ಹಳ್ಳಿಯ ಹುಡುಗಿ ಪುಷ್ಪಾ ಮತ್ತು ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ಪ್ರದೇಶದ ಮುಖೇಶ್ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮೊದ ಮೊದಲು ಮನೆಯವರು ವಿರೋಧಿಸಿದರೂ ಇವರಿಬ್ಬರೂ ಎರಡೂ ಕುಟುಂಬವನ್ನು ಒಪ್ಪಿಸಿ ಮದುವೆಗೆ ಸಜ್ಜಾಗಿದ್ದರು. ಮಾರ್ಚ್ 6 ಕ್ಕೆ ಮದುವೆಯೂ ನಿಗದಿಯಾಗಿತ್ತು. ಮದುವೆ ಸಂಬಂಧಿ ಶಾಸ್ತ್ರ, ಕಾರ್ಯಗಳು ಕೂಡಾ ನಡೆಯುತ್ತಿತ್ತು. ಈ ಮದುವೆಯ ಸಿದ್ಧತೆಗಳ ನಡುವೆಯೇ, ಪುಷ್ಪಾ ವರ ಮುಖೇಶ್‌ಗೆ ʼನಾನು ಮುಂದಿನ ಜನ್ಮದಲ್ಲಿ ಭೇಟಿಯಾಗುತ್ತೇನೆʼ ಎಂಬ ವಾಟ್ಸಾಪ್‌ ಸಂದೇಶವನ್ನು ಕಳುಹಿಸುತ್ತಾಳೆ. ಈ ಮೆಸೇಜ್‌ ನೋಡಿ ಮುಖೇಶ್‌ ಶಾಕ್‌ ಆಗಿದ್ದು, ಇದಾದ ಸ್ಪಲ್ಪ ಹೊತ್ತಿನ ಬಳಿಕ ವಧು ನಾಪತ್ತೆಯಾಗಿದ್ದಾಳೆ ಎಂಬ ಸುದ್ದಿ ಕೇಳಿ ಬರುತ್ತೆ. ತಕ್ಷಣ ಕುಟುಂಬಸ್ಥರು ಖಡ್ಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ವಧುವನ್ನು ಆದಷ್ಟು ಬೇಗ ಹುಡುಕಿ ಕೊಡುವಂತೆ ಪೊಲೀಸರಲ್ಲಿ ಕೇಳಿ ಕೊಂಡಿದ್ದಾರೆ.

ವರದಕ್ಷಿಣೆ ವಿವಾದ, ಮನಸ್ತಾಪ:

ಮುಖೇಶ್‌ ಮತ್ತು ಪುಷ್ಪಾ ಇಬ್ಬರೂ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು ಮತ್ತು ಬಹಳ ಕಷ್ಟಪಟ್ಟು ಈ ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು. ಹೀಗೆ ಮನೆಯವರನ್ನು ಒಪ್ಪಿಸಿ 8 ತಿಂಗಳ ಹಿಂದೆಯೇ ಮದುವೆ ನಿಶ್ಚಯಿಸಿದ್ದರು. ಆದರೆ ವರದಕ್ಷಿಣೆ ವಿಚಾರದಲ್ಲಿ ಎರಡೂ ಕುಟುಂಬದ ನಡುವೆ ಒಂದಷ್ಟು ಮನಸ್ತಾಪ ಏರ್ಪಟ್ಟಿತ್ತು. ಹುಡುಗನ ಮನೆಯವರು ವರದಕ್ಷಿಣೆ ಬೇಡಿಕೆ ಹೆಚ್ಚಿಸಿದ್ದರಿಂದ ಎರಡು ತಿಂಗಳ ಹಿಂದೆ ಮದುವೆ ರದ್ದಾಗಿತ್ತು. ಆದರೆ ನಂತರ ಹುಡುಗಿಯ ಕುಟುಂಬವು ರಾಜಿ ಸಂದಾನ ಮಾಡಿ ನಂತರ ಪುನಃ ಮದುವೆ ನಿಶ್ಚಯಿಸಿದ್ದರು, ಮದುವೆ ಮಾರ್ಚ್‌ 6 ಕ್ಕೆ ನಿಗದಿಯಾಗಿತ್ತು. ಆದ್ರೆ ಮದುವೆ ಸಂಭ್ರಮದಲ್ಲಿದ್ದ ಸಂದರ್ಭದಲ್ಲಿಯೇ ವಧು ನಾಪತ್ತೆಯಾಗಿದ್ದಾಳೆ.

ಇದನ್ನೂ ಓದಿ
Image
ಈಜುಕೊಳದಲ್ಲಿ ಪಲ್ಟಿ ಹೊಡೆದ 84 ರ ಹರೆಯದ ಅಜ್ಜಿ
Image
ಕುದುರೆಗೆ ಬಲವಂತವಾಗಿ ಸಿಗರೇಟ್ ಸೇದಿಸಿದ ಯುವಕರು
Image
ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸಿದ ಹೃದಯವಂತ
Image
ಲೈಫ್​​ನ್ನು ಬ್ಯಾಚುರಲ್ ಇದ್ದಾಗಲೇ ಎಂಜಾಯ್ ಮಾಡಿ ಎಂದ ಪೊಲೀಸ್

ಇದನ್ನೂ ಓದಿ: ಮರಿಗೆ ಜನ್ಮ ನೀಡಿದ ಆನೆ; ಹೊಸ ಅತಿಥಿಯನ್ನು ಕಂಡು ಸಂಭ್ರಮಿಸಿದ ಗಜ ಕುಟುಂಬ

ವಧುವಿನ ಸಹೋದರಿ, ಮದುವೆಯ ಸಮಯದಲ್ಲಿ ವರದಕ್ಷಿಣೆ ವಿವಾದದಿಂದಾಗಿ ಆಕೆ ತುಂಬಾ ಅಸಮಾಧಾನಗೊಂಡಿದ್ದಳು, ಇದು ಆಕೆಯ ಮಾನಸ್ಸಿನ ಮೇಲೆ ಸಾಕಷ್ಟು ಪರಿಣಾಮ ಬೀರಿತ್ತು ಎಂದು ಹೇಳಿದ್ದಾಳೆ. ಇದೀಗ ಪುಷ್ಪಾಗಾಗಿ ಹುಡುಕಾಟ ಮುಂದುವರೆದಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ದುಃಖದ ವಾತಾವರಣ ಮಡುಗಟ್ಟಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ