AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎಂಜಲು ಉಗುಳಿ ರೊಟ್ಟಿ ಬೇಯಿಸಿದ ಯುವಕ, ವೈರಲ್ ಆಯ್ತು ದೃಶ್ಯ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಆಕ್ರೋಶಕ್ಕೆ ಕಾರಣವಾಗುತ್ತದೆ. ಇದಕ್ಕೆ ಈ ವಿಡಿಯೋನೇ ಸಾಕ್ಷಿ. ಯುವಕನೊಬ್ಬ ರೊಟ್ಟಿಯನ್ನು ತಟ್ಟಿ, ಅದಕ್ಕೆ ಎಂಜಲು ಉಗುಳಿ ಬೇಯಿಸಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ಯುವಕನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.

Video: ಎಂಜಲು ಉಗುಳಿ ರೊಟ್ಟಿ ಬೇಯಿಸಿದ ಯುವಕ, ವೈರಲ್ ಆಯ್ತು ದೃಶ್ಯ
ಎಂಜಲು ಉಗುಳಿ ರೊಟ್ಟಿ ಬೇಯಿಸಿದ ಯುವಕImage Credit source: Twitter
ಸಾಯಿನಂದಾ
|

Updated on: Sep 24, 2025 | 3:42 PM

Share

ಗಾಜಿಯಾಬಾದ್, ಸೆಪ್ಟೆಂಬರ್ 24: ಬೀದಿ ಬದಿಗಳಲ್ಲಿ ಸಿಗುವ ಆಹಾರವನ್ನು (food) ಬಾಯಿ ಚಪ್ಪರಿಸಿಕೊಂಡು ತಿನ್ನುವವರೇ ಹೆಚ್ಚು. ಆದರೆ ಈ ಆಹಾರವು ಶುಚಿಯಾಗಿ ಹಾಗೂ ನೈರ್ಮಲ್ಯತೆಯಿಂದ ಕೂಡಿದೆಯೇ ಎಂದು ಯಾರು ಯೋಚನೆ ಮಾಡಲ್ಲ. ಆದರೆ ಕೆಲವೊಮ್ಮೆ ಆಹಾರ ತಯಾರಿಸುವವರ ಅಸಭ್ಯಕರ ವರ್ತನೆಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಬ್ಬ ಯುವಕನು ರೊಟ್ಟಿಯನ್ನು ಕೈಯಲ್ಲಿ ತಯಾರಿಸಿ ಎಂಜಲು ಉಗುಳಿ ಬೇಯಿಸುತ್ತಿರುವ ದೃಶ್ಯವು ವೈರಲ್ ಆಗಿದೆ. ಈ ಘಟನೆಯೂ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ (Ghaziabad of Uttara Pradesh) ನಡೆದಿದೆ ಎನ್ನಲಾಗಿದ್ದು, ಇದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ವೈರಲ್ ವಿಡಿಯೋದಲ್ಲಿ ನಾಲ್ವರು ಯುವಕರು ಇರುವುದನ್ನು ಕಾಣಬಹುದು. ಒಬ್ಬ ಯುವಕನು ಬೆಂದ ರೊಟ್ಟಿಯನ್ನು ತೆಗೆಯುತ್ತಿದ್ದರೆ, ಮತ್ತೊಬ್ಬ ಯುವಕನು ರೊಟ್ಟಿಯನ್ನು ತಟ್ಟಿ ಅದಕ್ಕೆ ಎಂಜಲು ಉಗುಳಿ ಬೇಯಿಸುತ್ತಿರುವುದನ್ನು ನೀವಿಲ್ಲಿ ನೋಡಬಹುದು. ಈ ದೃಶ್ಯವನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ
Image
2 ಪಾನಿಪುರಿ ಕಡಿಮೆ ಕೊಟ್ಟಿದ್ದಕ್ಕೆ ರಸ್ತೆಮಧ್ಯೆ ಪ್ರತಿಭಟನೆಗೆ ಕುಳಿತ ಮಹಿಳೆ
Image
ಹಸಿವು ತಾಳಲಾರದೇ ಈ ಪುಟ್ಟ ಬಾಲಕ ಮಾಡಿದ ಕೆಲಸ ನೋಡಿದ್ರೆ ಶಾಕ್‌ ಆಗ್ತೀರಾ
Image
ಆನ್ಲೈನ್ ಫುಡ್ ದರವು ಶೇ 80 ರಷ್ಟು ಹೆಚ್ಚು
Image
ಈ ರೆಸ್ಟೋರೆಂಟ್‌ನಲ್ಲಿ ಫುಡ್ ವೇಸ್ಟ್ ಮಾಡಿದ್ರೆ ಬೀಳುತ್ತೆ 20 ರೂ ದಂಡ

ಇದನ್ನೂ ಓದಿ:2 ಪಾನಿಪುರಿ ಕಡಿಮೆ ಕೊಟ್ಟಿದ್ದಕ್ಕೆ ಅಳುತ್ತಾ ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಮಹಿಳೆ!

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಕಾಮೆಂಟ್ ಮಾಡಿ ಆಹಾರ ನೈರ್ಮಲ್ಯತೆಯನ್ನು ಪ್ರಶ್ನೆ ಮಾಡಿದ್ದಾರೆ. ಕೆಲವರು ಈ ರೀತಿಯಾಗಿ ಆಹಾರ ತಯಾರಿಸಿರುವುದನ್ನು ನೋಡುತ್ತಿದ್ರೆ ತಿನ್ನಲು ಮನಸ್ಸಾಗುವುದಿಲ್ಲ ಎಂದಿದ್ದಾರೆ. ಮತ್ತೊಬ್ಬರು, ಈ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ