AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು

ತಂದೆಯ ಕೈಯಿಂದ ಜಾರಿದ ಹಸುಗೂಸನ್ನು ಎತ್ತಿದ ಕೋತಿ ಮೂರು ಅಂತಸ್ತಿನ ಕಟ್ಟಡದಿಂದ ಕೆಳಗೆ ಎಸೆದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಮಕರಣದ ಸಿದ್ಧತೆಯಲ್ಲಿದ್ದ ಕುಟುಂಬವು ಇದೀಗ 4 ತಿಂಗಳ ಹಸುಗೂಸನ್ನು ಕಳೆದುಕೊಂಡು ದುಃಖತಪ್ತವಾಗಿದೆ.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Jul 18, 2022 | 12:31 PM

Share

ಬರೇಲಿ: ಕೆಲವೊಮ್ಮೆ ಮಂಗಗಳು ಅತಿರೇಖದಿಂದ ವರ್ತಿಸಿ ಜನರಿಗೆ ತೊಂದರೆಯನ್ನು ನೀಡುತ್ತವೆ. ಇಂತಹ ಅನೇಕ ಘಟನೆಗಳು ನಡೆದಿದ್ದು, ಇದೀಗ ಉತ್ತರಪ್ರದೇಶದ ಬರೇಲಿ ಗ್ರಾಮಾಂತರ ಪ್ರದೇಶದಲ್ಲಿ ಮಗುವಿನ ಸಾವಿಗೆ ಕಾರಣವಾಗಿದೆ. ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋದ ಮಂಗವೊಂದು, ನಾಲ್ಕು ತಿಂಗಳ ಗಂಡು ಮಗುವನ್ನು ಕೆಳಗೆ ಎಸದ ಘಟನೆ ನಡೆದಿದ್ದು, ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.

ವರದಿಯ ಪ್ರಕಾರ, ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಮತ್ತು ಅವರ ಪತ್ನಿ ಶುಕ್ರವಾರ ಸಂಜೆ ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದಿವೆ. ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಏಕೆಂದರೆ ಕೋತಿಗಳ ಹಿಂಡು ಅವರನ್ನ ಸತ್ತಿವೆ.

ಕೋತಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನದಲ್ಲಿ ನಿರ್ದೇಶ್ ಅವರ ಕೈಯಿಂದ ಮಗು ಜಾರಿದೆ. ಈ ವೇಳೆ ಮಗುವನ್ನು ನಿರ್ದೇಶ್ ಅವರು ಎತ್ತಿಕೊಳ್ಳಲು ಮುಂದಾಗುತ್ತಿದ್ದಂತೆ ಕೂತಿ ಮಗುವನ್ನು ಹಿಡಿದು ಛಾವಣಿಯಿಂದ ಕಳೆಗೆ ಎಸೆದಿದೆ. ಪರಿಣಾಮವಾಗಿ ಮಗು ನೆಲಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವನ್ನಪ್ಪಿದೆ.

ನಿರ್ದೇಶ್ ಅವರಿಗೆ 7 ವರ್ಷದ ಮಗಳಿದ್ದರು. ಅಲ್ಲದೆ 4ತಿಂಗಳ ಮಗುವಿಗೆ ಸ್ವಲ್ಪ ದಿನದಲ್ಲಿಯೇ ನಾಮಕರಣ ಮಾಡಲು ಕಾರ್ಯಕ್ರಮ ನಡೆಸಲು ಸಿದ್ಧತೆಗಳ್ನು ನಡೆಸುತ್ತಿದ್ದರು. ಅಷ್ಟರೊಳಗೆ ಈ ಅವಘಡ ಸಂಭವಿಸಿದ್ದು, ಕುಟುಂಬವು ದುಃಖತಪ್ತವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Published On - 12:31 pm, Mon, 18 July 22

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ