AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು

ತಂದೆಯ ಕೈಯಿಂದ ಜಾರಿದ ಹಸುಗೂಸನ್ನು ಎತ್ತಿದ ಕೋತಿ ಮೂರು ಅಂತಸ್ತಿನ ಕಟ್ಟಡದಿಂದ ಕೆಳಗೆ ಎಸೆದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಮಕರಣದ ಸಿದ್ಧತೆಯಲ್ಲಿದ್ದ ಕುಟುಂಬವು ಇದೀಗ 4 ತಿಂಗಳ ಹಸುಗೂಸನ್ನು ಕಳೆದುಕೊಂಡು ದುಃಖತಪ್ತವಾಗಿದೆ.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 18, 2022 | 12:31 PM

Share

ಬರೇಲಿ: ಕೆಲವೊಮ್ಮೆ ಮಂಗಗಳು ಅತಿರೇಖದಿಂದ ವರ್ತಿಸಿ ಜನರಿಗೆ ತೊಂದರೆಯನ್ನು ನೀಡುತ್ತವೆ. ಇಂತಹ ಅನೇಕ ಘಟನೆಗಳು ನಡೆದಿದ್ದು, ಇದೀಗ ಉತ್ತರಪ್ರದೇಶದ ಬರೇಲಿ ಗ್ರಾಮಾಂತರ ಪ್ರದೇಶದಲ್ಲಿ ಮಗುವಿನ ಸಾವಿಗೆ ಕಾರಣವಾಗಿದೆ. ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋದ ಮಂಗವೊಂದು, ನಾಲ್ಕು ತಿಂಗಳ ಗಂಡು ಮಗುವನ್ನು ಕೆಳಗೆ ಎಸದ ಘಟನೆ ನಡೆದಿದ್ದು, ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.

ವರದಿಯ ಪ್ರಕಾರ, ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಮತ್ತು ಅವರ ಪತ್ನಿ ಶುಕ್ರವಾರ ಸಂಜೆ ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದಿವೆ. ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಏಕೆಂದರೆ ಕೋತಿಗಳ ಹಿಂಡು ಅವರನ್ನ ಸತ್ತಿವೆ.

ಕೋತಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನದಲ್ಲಿ ನಿರ್ದೇಶ್ ಅವರ ಕೈಯಿಂದ ಮಗು ಜಾರಿದೆ. ಈ ವೇಳೆ ಮಗುವನ್ನು ನಿರ್ದೇಶ್ ಅವರು ಎತ್ತಿಕೊಳ್ಳಲು ಮುಂದಾಗುತ್ತಿದ್ದಂತೆ ಕೂತಿ ಮಗುವನ್ನು ಹಿಡಿದು ಛಾವಣಿಯಿಂದ ಕಳೆಗೆ ಎಸೆದಿದೆ. ಪರಿಣಾಮವಾಗಿ ಮಗು ನೆಲಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವನ್ನಪ್ಪಿದೆ.

ನಿರ್ದೇಶ್ ಅವರಿಗೆ 7 ವರ್ಷದ ಮಗಳಿದ್ದರು. ಅಲ್ಲದೆ 4ತಿಂಗಳ ಮಗುವಿಗೆ ಸ್ವಲ್ಪ ದಿನದಲ್ಲಿಯೇ ನಾಮಕರಣ ಮಾಡಲು ಕಾರ್ಯಕ್ರಮ ನಡೆಸಲು ಸಿದ್ಧತೆಗಳ್ನು ನಡೆಸುತ್ತಿದ್ದರು. ಅಷ್ಟರೊಳಗೆ ಈ ಅವಘಡ ಸಂಭವಿಸಿದ್ದು, ಕುಟುಂಬವು ದುಃಖತಪ್ತವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Published On - 12:31 pm, Mon, 18 July 22

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ