AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು

ತಂದೆಯ ಕೈಯಿಂದ ಜಾರಿದ ಹಸುಗೂಸನ್ನು ಎತ್ತಿದ ಕೋತಿ ಮೂರು ಅಂತಸ್ತಿನ ಕಟ್ಟಡದಿಂದ ಕೆಳಗೆ ಎಸೆದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಮಕರಣದ ಸಿದ್ಧತೆಯಲ್ಲಿದ್ದ ಕುಟುಂಬವು ಇದೀಗ 4 ತಿಂಗಳ ಹಸುಗೂಸನ್ನು ಕಳೆದುಕೊಂಡು ದುಃಖತಪ್ತವಾಗಿದೆ.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Jul 18, 2022 | 12:31 PM

Share

ಬರೇಲಿ: ಕೆಲವೊಮ್ಮೆ ಮಂಗಗಳು ಅತಿರೇಖದಿಂದ ವರ್ತಿಸಿ ಜನರಿಗೆ ತೊಂದರೆಯನ್ನು ನೀಡುತ್ತವೆ. ಇಂತಹ ಅನೇಕ ಘಟನೆಗಳು ನಡೆದಿದ್ದು, ಇದೀಗ ಉತ್ತರಪ್ರದೇಶದ ಬರೇಲಿ ಗ್ರಾಮಾಂತರ ಪ್ರದೇಶದಲ್ಲಿ ಮಗುವಿನ ಸಾವಿಗೆ ಕಾರಣವಾಗಿದೆ. ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋದ ಮಂಗವೊಂದು, ನಾಲ್ಕು ತಿಂಗಳ ಗಂಡು ಮಗುವನ್ನು ಕೆಳಗೆ ಎಸದ ಘಟನೆ ನಡೆದಿದ್ದು, ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.

ವರದಿಯ ಪ್ರಕಾರ, ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಮತ್ತು ಅವರ ಪತ್ನಿ ಶುಕ್ರವಾರ ಸಂಜೆ ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದಿವೆ. ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಏಕೆಂದರೆ ಕೋತಿಗಳ ಹಿಂಡು ಅವರನ್ನ ಸತ್ತಿವೆ.

ಕೋತಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನದಲ್ಲಿ ನಿರ್ದೇಶ್ ಅವರ ಕೈಯಿಂದ ಮಗು ಜಾರಿದೆ. ಈ ವೇಳೆ ಮಗುವನ್ನು ನಿರ್ದೇಶ್ ಅವರು ಎತ್ತಿಕೊಳ್ಳಲು ಮುಂದಾಗುತ್ತಿದ್ದಂತೆ ಕೂತಿ ಮಗುವನ್ನು ಹಿಡಿದು ಛಾವಣಿಯಿಂದ ಕಳೆಗೆ ಎಸೆದಿದೆ. ಪರಿಣಾಮವಾಗಿ ಮಗು ನೆಲಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವನ್ನಪ್ಪಿದೆ.

ನಿರ್ದೇಶ್ ಅವರಿಗೆ 7 ವರ್ಷದ ಮಗಳಿದ್ದರು. ಅಲ್ಲದೆ 4ತಿಂಗಳ ಮಗುವಿಗೆ ಸ್ವಲ್ಪ ದಿನದಲ್ಲಿಯೇ ನಾಮಕರಣ ಮಾಡಲು ಕಾರ್ಯಕ್ರಮ ನಡೆಸಲು ಸಿದ್ಧತೆಗಳ್ನು ನಡೆಸುತ್ತಿದ್ದರು. ಅಷ್ಟರೊಳಗೆ ಈ ಅವಘಡ ಸಂಭವಿಸಿದ್ದು, ಕುಟುಂಬವು ದುಃಖತಪ್ತವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Published On - 12:31 pm, Mon, 18 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ