AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು

ತಂದೆಯ ಕೈಯಿಂದ ಜಾರಿದ ಹಸುಗೂಸನ್ನು ಎತ್ತಿದ ಕೋತಿ ಮೂರು ಅಂತಸ್ತಿನ ಕಟ್ಟಡದಿಂದ ಕೆಳಗೆ ಎಸೆದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಮಕರಣದ ಸಿದ್ಧತೆಯಲ್ಲಿದ್ದ ಕುಟುಂಬವು ಇದೀಗ 4 ತಿಂಗಳ ಹಸುಗೂಸನ್ನು ಕಳೆದುಕೊಂಡು ದುಃಖತಪ್ತವಾಗಿದೆ.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on:Jul 18, 2022 | 12:31 PM

Share

ಬರೇಲಿ: ಕೆಲವೊಮ್ಮೆ ಮಂಗಗಳು ಅತಿರೇಖದಿಂದ ವರ್ತಿಸಿ ಜನರಿಗೆ ತೊಂದರೆಯನ್ನು ನೀಡುತ್ತವೆ. ಇಂತಹ ಅನೇಕ ಘಟನೆಗಳು ನಡೆದಿದ್ದು, ಇದೀಗ ಉತ್ತರಪ್ರದೇಶದ ಬರೇಲಿ ಗ್ರಾಮಾಂತರ ಪ್ರದೇಶದಲ್ಲಿ ಮಗುವಿನ ಸಾವಿಗೆ ಕಾರಣವಾಗಿದೆ. ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋದ ಮಂಗವೊಂದು, ನಾಲ್ಕು ತಿಂಗಳ ಗಂಡು ಮಗುವನ್ನು ಕೆಳಗೆ ಎಸದ ಘಟನೆ ನಡೆದಿದ್ದು, ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.

ವರದಿಯ ಪ್ರಕಾರ, ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಮತ್ತು ಅವರ ಪತ್ನಿ ಶುಕ್ರವಾರ ಸಂಜೆ ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದಿವೆ. ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಏಕೆಂದರೆ ಕೋತಿಗಳ ಹಿಂಡು ಅವರನ್ನ ಸತ್ತಿವೆ.

ಕೋತಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನದಲ್ಲಿ ನಿರ್ದೇಶ್ ಅವರ ಕೈಯಿಂದ ಮಗು ಜಾರಿದೆ. ಈ ವೇಳೆ ಮಗುವನ್ನು ನಿರ್ದೇಶ್ ಅವರು ಎತ್ತಿಕೊಳ್ಳಲು ಮುಂದಾಗುತ್ತಿದ್ದಂತೆ ಕೂತಿ ಮಗುವನ್ನು ಹಿಡಿದು ಛಾವಣಿಯಿಂದ ಕಳೆಗೆ ಎಸೆದಿದೆ. ಪರಿಣಾಮವಾಗಿ ಮಗು ನೆಲಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವನ್ನಪ್ಪಿದೆ.

ನಿರ್ದೇಶ್ ಅವರಿಗೆ 7 ವರ್ಷದ ಮಗಳಿದ್ದರು. ಅಲ್ಲದೆ 4ತಿಂಗಳ ಮಗುವಿಗೆ ಸ್ವಲ್ಪ ದಿನದಲ್ಲಿಯೇ ನಾಮಕರಣ ಮಾಡಲು ಕಾರ್ಯಕ್ರಮ ನಡೆಸಲು ಸಿದ್ಧತೆಗಳ್ನು ನಡೆಸುತ್ತಿದ್ದರು. ಅಷ್ಟರೊಳಗೆ ಈ ಅವಘಡ ಸಂಭವಿಸಿದ್ದು, ಕುಟುಂಬವು ದುಃಖತಪ್ತವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Published On - 12:31 pm, Mon, 18 July 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ