AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ - ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್

‘ಕೊರೊನಾ ಸೋಂಕಿಗೂ ಬದುಕುವ ಹಕ್ಕಿದೆ, ಅದು ಕೂಡಾ ಒಂದು ಜೀವಿ’: ಉತ್ತರಾಖಂಡದ ಮಾಜಿ ಸಿಎಂ ರಾವತ್
ಉತ್ತರಾಖಂಡದ ಮಾಜಿ ಸಿಎಂ ರಾವತ್
shruti hegde
|

Updated on:May 14, 2021 | 3:57 PM

Share

‘ಪ್ರತಿ ಜೀವಿಗೂ ಕೂಡಾ ಬದುಕುವ ಹಕ್ಕಿರುತ್ತದೆ. ಹಾಗೆಯೇ ಕೊರೊನಾ ಕೂಡಾ ಒಂದು ಜೀವಿಯಾದ್ದರಿಂದ ಅದಕ್ಕೂ ಜೀವಿಸುವ ಹಕ್ಕಿದೆ’ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಹೇಳಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾತ್ವಿಕ ದೃಷ್ಟಿಕೋನದಿಂದ ನೋಡುವುದಾದರೆ ಕೊರೊನಾ ವೈರಸ್​ ಕೂಡಾ ಒಂದು ಜೀವಿಯಾಗಿದೆ. ಉಳಿದವರಂತೆ ಬದುಕುವ ಹಕ್ಕು ಹೊಂದಿದೆ. ನಾವು ಮಾನವರು. ನಮ್ಮನ್ನು ನಾವು ಅತ್ಯಂತ ಬುದ್ಧಿವಂತರೆಂದು ಅಂದುಕೊಳ್ಳುತ್ತೇವೆ. ಹಾಗಾಗಿ ವೈರಸ್​ಅನ್ನು ತೊಡೆದು ಹಾಕಲು ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ ಕೊರೊನಾ ವೈರಸ್​ ನಿರಂತರವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ನೀಡುತ್ತಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ರಾವತ್​ ಅವರು ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ನೆಟ್ಟಿಗರು, ಈ ಜೀವಂತ ವೈರಸ್​ಗೆ ಸೆಂಟ್ರಲ್​ ವಿಸ್ತಾದಲ್ಲಿ ಆಶ್ರಯ ನೀಡಬೇಕು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಕುಂಭಮೇಳಕ್ಕೆ ಬರುವವರು ಕೊವಿಡ್​-19 ನೆಗೆಟಿವ್​ ರಿಪೋರ್ಟ್​ ತರುವ ಅಗತ್ಯವಿಲ್ಲ’ -ಉತ್ತರಾಖಂಡ ನೂತನ ಸಿಎಂ ತಿರತ್​ ಸಿಂಗ್​ ರಾವತ್​

Published On - 3:55 pm, Fri, 14 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್