AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Rain: ಮಳೆಯಿಂದ ಬಂಡೆಗಳ ಮಧ್ಯೆ ಸಿಲುಕಿದ ಕಾರಲ್ಲಿದ್ದವರ ರಕ್ಷಣೆ; ಶಾಕಿಂಗ್ ವಿಡಿಯೋ ಇಲ್ಲಿದೆ

Uttarakhand Flood Video: ಉತ್ತರಾಖಂಡದ ಮಳೆಯಿಂದ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದು ಭಾರೀ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಭೋರ್ಗರೆದು ಹರಿಯುತ್ತಿದ್ದ ನೀರಿನಿಂದ ಕಾರನ್ನು ಜೆಸಿಬಿಯಲ್ಲಿ ಮೇಲೆತ್ತಿ ಪ್ರಯಾಣಿಕರನ್ನು ಕಾಪಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ.

Uttarakhand Rain: ಮಳೆಯಿಂದ ಬಂಡೆಗಳ ಮಧ್ಯೆ ಸಿಲುಕಿದ ಕಾರಲ್ಲಿದ್ದವರ ರಕ್ಷಣೆ; ಶಾಕಿಂಗ್ ವಿಡಿಯೋ ಇಲ್ಲಿದೆ
ಉತ್ತರಾಖಂಡ ಪ್ರವಾಹದಲ್ಲಿ ಸಿಲುಕಿದ ಕಾರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 19, 2021 | 1:31 PM

ಉತ್ತರಾಖಂಡ: ಉತ್ತರಾಖಂಡದಲ್ಲಿ (Uttarakhand Flood) ಸುರಿಯುತ್ತಿರುವ ಮಳೆಗೆ 2 ದಿನದಲ್ಲಿ 16 ಜನರು ಸಾವನ್ನಪ್ಪಿದ್ದಾರೆ. ಕೇಂದ್ರ ಸರ್ಕಾರದಿಂದ ರಕ್ಷಣಾ ಕಾರ್ಯಾಚರಣೆಗೆ (Rescue Operation) ಎಲ್ಲ ರೀತಿಯ ಸಹಾಯ ಮಾಡುವುದಾಗಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇದರ ನಡುವೆ ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದ ಆಘಾತಕಾರಿ ವಿಡಿಯೋಗಳು ಟ್ವಿಟ್ಟರ್​ನಲ್ಲಿ ಹರಿದಾಡುತ್ತಿವೆ.

ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದು ಭಾರೀ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಆ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣದ ಮೇಲಿನ ಆಸೆಯನ್ನು ಬಿಟ್ಟಾಗಿತ್ತು. ಭೂಕುಸಿತದಿಂದ ಕೊರೆದುಹೋಗಿದ್ದ ಜಾಗದಲ್ಲಿನ ಬಂಡೆಗಳ ನಡುವೆ ಆ ಕಾರು ಸಿಲುಕಿಕೊಂಡಿತ್ತು. ಆ ಕಾರನ್ನು ಬಾರ್ಡರ್ ರೋಡ್ ಆರ್ಗನೈಸೇಷನ್ (BRO) ಸಿಬ್ಬಂದಿ ಸುರಕ್ಷಿತವಾಗಿ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಭೋರ್ಗರೆದು ಹರಿಯುತ್ತಿದ್ದ ನೀರಿನಿಂದ ಕಾರನ್ನು ಜೆಸಿಬಿಯಲ್ಲಿ ಮೇಲೆತ್ತಿ ಪ್ರಯಾಣಿಕರನ್ನು ಕಾಪಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ಮಳೆಯಲ್ಲಿ ಕೊಚ್ಚಿ ಹೋಗುವಾಗ ಎರಡು ಬಂಡೆಗಳ ನಡುವೆ ಸಿಲುಕಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬದರೀನಾಥ ರಾಷ್ಟ್ರೀಯ ಹೆದ್ದಾರಿಯ ಬಳಿ ಈ ಘಟನೆ ನಡೆದಿದ್ದು, ಕಾರನ್ನು ಯಾವ ರೀತಿ ಸಿನಿಮೀಯವಾಗಿ ರಕ್ಷಣೆ ಮಾಡಲಾಯಿತು ಎಂಬ ವಿಡಿಯೋ ಇಲ್ಲಿದೆ.

ಉತ್ತರಾಖಂಡದ ಪ್ರವಾಹ ಸ್ಥಿತಿ ಗಂಭೀರವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿಯೊಂದಿಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಧಾಮಿ ಪ್ರಧಾನಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ. ಉತ್ತರಾಖಂಡದಲ್ಲಿ ಕಳೆದ ಎರಡು ದಿನಗಳ ಮಳೆಯಲ್ಲಿ ನೇಪಾಳದ ಕಾರ್ಮಿಕರು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಹವಾಮಾನ ಸುಧಾರಿಸುವವರೆಗೂ ಹಿಮಾಲಯದ ದೇವಸ್ಥಾನಗಳಿಗೆ ತೆರಳದಂತೆ ಅಧಿಕಾರಿಗಳು ಚಾರ್​ಧಾಮ್ ಯಾತ್ರಿಕರಿಗೆ ಸೂಚಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ, ಚಂಪಾವತ್ ಜಿಲ್ಲೆಯ ಸೆಲ್ಖೋಲಾದಲ್ಲಿ ಭೂಕುಸಿತದಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಹಿಮಾಲಯದ ತಪ್ಪಲಿನ ದೇವಸ್ಥಾನಗಳಿಗೆ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ತಪೋವನ, ಹೃಷಿಕೇಶ, ಗಂಗೋತ್ರಿ, ಯಮುನೋತ್ರಿ, ಬದರಿನಾಥ ಮುಂತಾದ ಸ್ಥಳಗಳಿಗೆ ಭಕ್ತರು ಹಾಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಹಲ್ದ್ವಾನಿ ಜಿಲ್ಲೆಯ ಗೌಲಾ ನದಿಯ ಮೇಲೆ ಇನ್ನೇನು ಮುರಿದು ಬೀಳುತ್ತಿದ್ದ ಸೇತುವೆಯನ್ನು ದಾಟಲು ಆಚೆ ಕಡೆಯಿಂದ ಬೈಕ್​ನಲ್ಲಿ ಬರುತ್ತಿದ್ದ ಪ್ರಯಾಣಿಕನಿಗೆ ಜನರು ಜೋರಾಗಿ ಕೂಗಿ ಹೇಳುತ್ತಿದ್ದರೂ ಆತನಿಗೆ ಕೇಳಿಸಿಲ್ಲ. ಹಂದ್ವಾನಿ ಜಿಲ್ಲೆಯ ಗೌಲಾ ನದಿಯ ಸೇತುವೆ ದಾಟುತ್ತಿದ್ದ ಯುವಕರಿಬ್ಬರು ಕೊನೆ ಕ್ಷಣದಲ್ಲಿ ಬೈಕನ್ನು ಹಿಂದಕ್ಕೆ ತಿರುಗಿಸಿದರು. ಬಳಿಕ ಸೇತುವೆ ಮುರಿದು ಬಿದ್ದಿತು. ಕೆಲವೇ ಕ್ಷಣಗಳ ಅಂತರದಲ್ಲಿ ಆ ಬೈಕ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Uttarakhand Rain: ಉತ್ತರಕಾಶಿಯಲ್ಲಿ ಭೂಕುಸಿತದಿಂದ ಗಂಗೋತ್ರಿ, ಯಮುನೋತ್ರಿ ಹೆದ್ದಾರಿ ಬಂದ್

Uttarakhand Landslide ಡೆಹ್ರಾಡೂನ್-ಹೃಷಿಕೇಶ್ ಹೆದ್ದಾರಿಯಲ್ಲಿ ಮುರಿದು ಬಿದ್ದ ರಾಣಿ ಪೋಖರಿ ಸೇತುವೆ; ಹಲವೆಡೆ ಭೂಕುಸಿತ

Published On - 1:24 pm, Tue, 19 October 21

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?