AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishno Devi Yatra 2021: ನವರಾತ್ರಿ ವಿಶೇಷವಾಗಿ ಜಮ್ಮು-ಕಾಶ್ಮೀರದ ವೈಷ್ಣೋ ದೇವಿಯ ದರ್ಶನ ಪಡೆದ ಭಕ್ತರು

Navratri 2021: ಶರನ್ನವರಾತ್ರಿ ಎಂದು ಕರೆಯುವ ಈ ದಿನದಂದು ದುರ್ಗಾದೇವಿಯು ಮಹಿಶಾಸುರನನ್ನು ಸಂಹಾರ ಮಾಡಿದ ದಿನವಾಗಿದೆ. ನವರಾತ್ರಿ ವಿಶೇಷ 10ನೇ ದಿನವನ್ನು ವಿಜಯ ದಶಮಿ ದಿನವನ್ನು ಆಚರಿಸಲಾಗುತ್ತದೆ.

Vaishno Devi Yatra 2021: ನವರಾತ್ರಿ ವಿಶೇಷವಾಗಿ ಜಮ್ಮು-ಕಾಶ್ಮೀರದ ವೈಷ್ಣೋ ದೇವಿಯ ದರ್ಶನ ಪಡೆದ ಭಕ್ತರು
ಶ್ರಿ ಮಾತಾ ವೈಷ್ಣೋ ದೇವಾಲಯ
Follow us
shruti hegde
|

Updated on: Apr 13, 2021 | 11:14 AM

ಜಮ್ಮು ಕಾಶ್ಮೀರ: ಆಕರ್ಷಕವಾಗಿ ವಿವಿಧ ಬಣ್ಣಗಳ ದೀಪಗಳಿಂದ ಅಲಂಕರಿಸಲ್ಪಟ್ಟ ಜಮ್ಮು- ಕಾಶ್ಮೀರದ ಕಟ್ರಾದ ಶ್ರಿ ಮಾತಾ ವೈಷ್ಣೋ ದೇವಿ ದೇವಸ್ಥಾನಕ್ಕೆ ಮಂಗಳವಾರ ನವರಾತ್ರಿಯ ಮೊದಲ ದಿನ ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ವರ್ಷ ಸಾವಿರಾರು ಭಕ್ತರು ನವರಾತ್ರಿ ದಿನದಂದು ಮಾತಾ ವೈಷ್ಣೋ ದೇವಿಯಲ್ಲಿ ಪ್ರಾರ್ಥನೆ ಮಾಡಲು ನೆರೆದಿರುತ್ತಾರೆ. ಆದರೆ ಕೊವಿಡ್​ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣದಿಂದ ಶ್ರೀ ಮಾತಾ ವೈಷ್ಣೋ ದೇವಿ ಮಂಡಳಿ (ಎಸ್​ಎಂವಿಡಿಎಸ್​ಬಿ) ಭಕ್ತರಿಗೆ ಅನುಕೂಲವಾಗುವಂತೆ ವ್ಯವಸ್ಥೆ ರೂಪಿಸಿದೆ. ವಿವಿಧ ರಾಜ್ಯಗಳಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕೊವಿಡ್​ ನೆಗೆಟಿವ್ ವರದಿಯನ್ನು ಕಡ್ಡಾಯ ಮಾಡಿದೆ.

ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ಆರ್​ಟಿ-ಪಿಸಿಆರ್​ ವರದಿಯನ್ನು ಸಲ್ಲಿಸಿದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದೇವಸ್ಥಾನದ ಆಡಳಿತ ಮಂಡಳಿ ಕೊವಿಡ್​ ತಡೆ ಹಿಡಿಯಲು ದೇವಸ್ಥಾನದಲ್ಲಿ ಉತ್ತಮ ವ್ಯವಸ್ಥೆ ಕಲ್ಪಿಸಿದೆ ಎಂದು ದೆಹಲಿಯ ಭಕ್ತರೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ದೇವಾಲಯಕ್ಕೆ ರೈಲಿನಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ರೈಲಿನಲ್ಲಿ ಬರುವ ಭಕ್ತರಿಗೆ ನಿಲ್ದಾಣದಲ್ಲಿ ಕೊವಿಡ್ ಪರೀಕ್ಷೆ ಮಾಡಿಸಲಾಗುತ್ತಿದೆ ಎಂದು ಕಟ್ರಾದ ಉಪ ಪೊಲೀಸ್​ ವರಿಷ್ಠಾಧಿಕಾರಿ(ಡಿಎಸ್​ಪಿ) ಕುಲ್ಜಿತ್ ಸಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.

ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ರಮೇಶ್​ ಕುಮಾರ್​ ದೆವಾಲಯಕ್ಕೆ ಭೇಟಿ ನೀಡಿ ಭಕ್ತರ ಅನುಕೂಲಕ್ಕಾಗಿ ಮಾಡಿರುವ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಕಟ್ರಾದ ವಿವಿಧ ಸ್ಥಳಗಳಲ್ಲಿ ಪ್ರಯಾಣ ನೋಂದಣಿ ಕೌಂಟರ್​ನಲ್ಲಿ ಹೆಸರು ನೋಂದಾಯಿಸಲು ಮಾಡಿರುವ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸಿದ್ದಾರೆ.

ಥರ್ಮಲ್​ ಸ್ಕ್ಯಾನಿಂಗ್​ ಅನ್ನು ತಪ್ಪದೇ ಮಾಡಲಾಗುತ್ತಿದೆ. ಜೊತೆಗೆ ಎಲ್ಲಾ ಕಡೆಯಲ್ಲಿ ಸ್ಯಾನಿಟೈಸರ್​ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಕಟ್ರಾ ರೈಲ್ವೆ ನಿಲ್ದಾಣದಲ್ಲಿ ಭಕ್ತರು ಆಗಮಿಸಿದ ತಕ್ಷಣ ಕೊವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ದೇವಸ್ಥಾನದ ಅಧಿಕಾರಿಯೋರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ನವರಾತ್ರಿಯ ಆಚರಣೆಯಲ್ಲಿ ಒಂಬತ್ತು ದೇವಿಯ ಆರಾಧನೆ ಮಾಡಲಾಗುತ್ತದೆ. ನವರಾತ್ರಿ ಹಬ್ಬವನ್ನು ದೇಶಾದ್ಯಂತ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತದೆ. ಮುಂದಿನ 9 ದಿನಗಳವರೆಗೆ ದುರ್ಗಾದೇವಿಯ ಪೂಜೆಯಲ್ಲಿ ಭಕ್ತರು ತೊಡಗಿರುತ್ತಾರೆ.

ಶರನ್ನವರಾತ್ರಿ ಎಂದು ಕರೆಯುವ ಈ ದಿನದಂದು ದುರ್ಗಾದೇವಿಯು ಮಹಿಶಾಸುರನನ್ನು ಸಂಹಾರ ಮಾಡಿದ ದಿನವಾಗಿದೆ. ನವರಾತ್ರಿ ವಿಶೇಷ 10ನೇ ದಿನವನ್ನು ವಿಜಯ ದಶಮಿ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!

ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ನಂತರ ಕಣಿವೆ ರಾಜ್ಯದಲ್ಲಿ ನೈಜ ಪ್ರಜಾಪ್ರಭುತ್ವ ಜಾರಿಯಾಗಿದೆ: ಪ್ರಧಾನಿ ಮೋದಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?