ಪ್ರೇಮಿಗಳ ದಿನ; ‘ಸ್ವಾತಂತ್ರ್ಯ ಕೆಲವರಿಗೆ ಮಾತ್ರ ಉಡುಗೊರೆ! ಬನ್ನಿ ನಮ್ಮ ದಿನವನ್ನು ಆಚರಿಸೋಣ’

Valentine’s Day : ಅತ್ಯದ್ಭುತ ಸರ್! ಆಲ್​ ಇಂಡಿಯಾ ಸಿಂಗಲ್​ ಪೀಪಲ್ ಅಸೋಸಿಯೇಷನ್​ಗೆ ನೀವೇ ಅಧ್ಯಕ್ಷರು ಎನ್ನುತ್ತಿದ್ದಾರೆ ನೆಟ್ಟಿಗರು. ಹಾಗಿದ್ದರೆ ತೆಮ್ಜೆನ್​ ಒಬ್ಬಂಟಿಗರಿಗೆ ಏನೆಂದು ಸಂದೇಶ ನೀಡಿದ್ದಾರೆ? ಓದಿ.

ಪ್ರೇಮಿಗಳ ದಿನ; ‘ಸ್ವಾತಂತ್ರ್ಯ ಕೆಲವರಿಗೆ ಮಾತ್ರ ಉಡುಗೊರೆ! ಬನ್ನಿ ನಮ್ಮ ದಿನವನ್ನು ಆಚರಿಸೋಣ’
ನಾಗಾಲ್ಯಾಂಡ್ ಸಚಿವ ತೆಮ್ಜೆನ್​ ಇಮ್ನಾ ಅಲಾಂಗ್​
Follow us
| Updated By: ಶ್ರೀದೇವಿ ಕಳಸದ

Updated on:Feb 14, 2023 | 2:34 PM

Viral Video : ನಾಗಾಲ್ಯಾಂಡ್​ನ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್​ (Temjen Imna Along) ಸತತವಾಗಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಲೇ ಇರುತ್ತಾರೆ. ಇವರ ನವಿರಾದ ಹಾಸ್ಯಪ್ರಜ್ಞೆ ನೆಟ್ಟಿಗರನ್ನು ಪ್ರತಿಕ್ರಿಯಿಸುವಂತೆ ಪ್ರೇರೇಪಿಸುತ್ತಿರುತ್ತದೆ. ಇದೀಗ ಪ್ರೇಮಿಗಳ ದಿನದಂದು (Valentine’s Day) ಒಬ್ಬಂಟಿಗರಿಗೆ ವಿಶೇಷ ಸಂದೇಶ ನೀಡಿದ್ದಾರೆ. ನೆಟ್ಟಿಗರು ಆಹಾ ಎಂದು ಸಂಭ್ರಮಿಸುತ್ತಿದ್ದಾರೆ.

ಇಂದು ಪ್ರೇಮಿಗಳ ದಿನ. ಜಗತ್ತಿನ ಸಾಕಷ್ಟು ಜೋಡಿಗಳು ಈ ದಿನವನ್ನು ವಿಶೇಷವಾಗಿ ಆಚರಿಸುತ್ತಿವೆ. ನೀವೂ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯುತ್ತಿದ್ದರೆ ಬಹಳೇ ಖುಷಿ. ಆದರೆ ನಿಮ್ಮಲ್ಲಿ ಕೆಲವರು ಒಂಟಿಯಾಗಿರುತ್ತೀರಿ. ಅಂಥವರು ದಯವಿಟ್ಟು ಬೇಸರಿಸಿಕೊಳ್ಳಬೇಡಿ, ದುಃಖಿಸಬೇಡಿ. ನೀವು ಸಂಗಾತಿಗಾಗಿ ಹುಡುಕಾಟವನ್ನು ನಿಲ್ಲಿಸಿ. ಆದರೆ ನಿಮ್ಮ ಸ್ವಾತಂತ್ರ್ಯವನ್ನು ಸಂಭ್ರಮಿಸಿ!

ಇದನ್ನೂ ಓದಿ : ಸೀರೆಯುಟ್ಟು ಜಿಮ್​ ವರ್ಕೌಟ್ ಮಾಡುತ್ತಿರುವ ಮಹಿಳೆಯ ವಿಡಿಯೋ ವೈರಲ್; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ

‘ಒಬ್ಬಂಟಿಗರಿಗೆ ನಮಸ್ಕಾರ! ಸ್ವಾತಂತ್ರ್ಯ ಎನ್ನುವುದು ಉಡುಗೊರೆ. ಆದರೆ ಎಲ್ಲರಿಗೂ ಇದು ಸಿಗುವಂಥದ್ದಲ್ಲ. ಬನ್ನಿ ನಮ್ಮ ಈ ದಿನವನ್ನು ಆಚರಿಸೋಣ.’ ಎಂದಿದ್ದಾರೆ ತೆಮ್ಜೆನ್​.  ಅನೇಕರು ಈ ಟ್ವೀಟ್ ನೋಡಿ, ಓಹ್​ ನೀವು ಸಿಂಗಲ್ ಎಂದು ನಮಗೀಗಲೇ ತಿಳಿಯಿತು ಎಂದು ನಕ್ಕಿದ್ದಾರೆ.

ಇದನ್ನೂ ಓದಿ : ವರ್ಷದ ಅಪ್ಪ ಪ್ರಶಸ್ತಿ ಈ ಅಪ್ಪನಿಗೇ! ವೈರಲ್ ಆದ ವಿಡಿಯೋ

ನಾಲ್ಕು ಲಕ್ಷಕ್ಕಿಂತಲೂ ಹೆಚ್ಚು ಜನರು ಈ ಪೋಸ್ಟ್ ನೋಡಿದ್ದಾರೆ. 18,400 ಕ್ಕೂ ಹೆಚ್ಚು ಜನರು ಇದನ್ನು ಇಷ್ಟಪಟ್ಟಿದ್ದಾರೆ. 1,300ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಹಲವಾರು ಜನ, ನಿಮಗಾಗಿ ನಾವು ಹುಡುಗಿ ಹುಡುಕುತ್ತಿದ್ದೇವೆ ಎಂದು ತೆಮ್ಜೆನ್​ ಅವರಿಗೆ ಹೇಳಿದ್ದಾರೆ.

ಇದನ್ನೂ ಓದಿ : ಎಸ್ಕಲೇಟರ್ ಹುಚ್ಚು ಹಿಡಿಸಿಕೊಂಡ ನಾಯಿಯ ವಿಡಿಯೋ ವೈರಲ್

ಬನ್ನಿ ನಿಮಗೂ ಸ್ವಾಗತ ಎಂದು ಯೋಗಿ ಆದಿತ್ಯನಾಥ ಫೋಟೋ ಟ್ವೀಟ್ ಮಾಡಿದ್ದಾರೆ ಒಬ್ಬರು. ತೆಮ್ಜೆನ್​ ಬಹಳ ಬೇಡಿಕೆಯಲ್ಲಿರುವ ಅವಿವಾಹಿತ ಪುರುಷ ನೀವು. ನಿಮಗಾಗಿ ಖಂಡಿತ ಹುಡುಗಿ ಹುಡುಕೋಣ ಎಂದಿದ್ಧಾರೆ ಮತ್ತೊಬ್ಬರು. ಆಲ್​ ಇಂಡಿಯಾ ಸಿಂಗಲ್​ ಪೀಪಲ್ ಅಸೋಸಿಯೇಷನ್​ಗೆ ನೀವೇ ಅಧ್ಯಕ್ಷರು ಸರ್ ಎಂದಿದ್ದಾರೆ ಇನ್ನೂ ಒಬ್ಬರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 2:31 pm, Tue, 14 February 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ