AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varanasi Airport: ಈ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಭಾಷೆಯಲ್ಲೂ ಕೇಳುತ್ತೆ ಅನೌನ್ಸ್​ಮೆಂಟ್!

ವಾರಾಣಸಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಸಂಸ್ಕೃತ ಪ್ರಕಟಣೆಯನ್ನು ಒಳಗೊಂಡ ವಿಡಿಯೋ ಕ್ಲಿಪ್  ಹಂಚಿಕೊಳ್ಳಲಾಗಿದೆ.

Varanasi Airport: ಈ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಭಾಷೆಯಲ್ಲೂ ಕೇಳುತ್ತೆ ಅನೌನ್ಸ್​ಮೆಂಟ್!
ವಾರಾಣಸಿ ವಿಮಾನ ನಿಲ್ದಾಣ
TV9 Web
| Updated By: ಸುಷ್ಮಾ ಚಕ್ರೆ|

Updated on:Jun 22, 2022 | 11:53 AM

Share

ವಾರಾಣಸಿ: ವಾರಾಣಸಿಯ (Varanasi Airport) ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್-19 ಬಗ್ಗೆ ಸಂಸ್ಕೃತ ಭಾಷೆಯಲ್ಲಿ ಪ್ರಕಟಣೆಗಳನ್ನು (Announcement) ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪ್ರಕಟಣೆಗಳನ್ನು ಮಾಡಲಾಗುತ್ತಿತ್ತು. ಇದೀಗ ಹೊಸ ಸೇರ್ಪಡೆಯಾಗಿ ಸಂಸ್ಕೃತ (Sanskrit) ಭಾಷೆಯನ್ನು ಸೇರಿಸಲಾಗಿದೆ.

ವಾರಾಣಸಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಸಂಸ್ಕೃತ ಪ್ರಕಟಣೆಯನ್ನು ಒಳಗೊಂಡ ವಿಡಿಯೋ ಕ್ಲಿಪ್  ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪ್ರಯಾಣಿಕರು ಚಲಿಸುತ್ತಿರುವಾಗ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಘೋಷಣೆಯಾಗುತ್ತಿರುವುದನ್ನು ಕೇಳಬಹುದು. ಈಗ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ನಂತರ, ಕೋವಿಡ್ ಮಾನದಂಡಗಳನ್ನು ಸಂಸ್ಕೃತದಲ್ಲಿಯೂ ಘೋಷಿಸಲಾಗುತ್ತಿದೆ.

ಇದನ್ನೂ ಓದಿ
Image
Monsoon 2022: ತಮಿಳುನಾಡಿನಾದ್ಯಂತ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ
Image
Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ
Image
Viral Photo: ಚಲಿಸುತ್ತಿದ್ದ ರೈಲಿನಲ್ಲಿ ಯೋಗಾಸನ ಮಾಡಿದ ಪ್ರಯಾಣಿಕರು

ಕೆಲವು ನೆಟ್ಟಿಗರು ಈ ಕ್ರಮವನ್ನು ಸ್ವಾಗತಿಸಿದ್ದರೆ ಇನ್ನು ಕೆಲವರು ಜನರಿಗೆ ಸಂಸ್ಕೃತ ಹೇಗೆ ಅರ್ಥವಾಗುತ್ತದೆ? ಎಲ್ಲರಿಗೂ ಸಂಸ್ಕೃತ ಅರ್ಥವಾಗುವುದಿಲ್ಲ. ಪಾಲಿ ಮತ್ತು ಪ್ರಾಕೃತ ಭಾಷೆಯನ್ನು ಕೂಡ ಸೇರಿಸಿ ಎಂದು ಇನ್ನು ಕೆಲವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಹೊಸ ಅಂತಾರಾಷ್ಟ್ರೀಯ ಮಾರ್ಗಗಳು ಆರಂಭ

“ಈಗ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಇಂಗ್ಲಿಷ್ ಮತ್ತು ಹಿಂದಿ ನಂತರ ಕೊವಿಡ್ ಮಾನದಂಡಗಳನ್ನು ಸಂಸ್ಕೃತದಲ್ಲಿಯೂ ಘೋಷಿಸಲಾಗುತ್ತಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿದ ತಕ್ಷಣ, ಅವರು ಸಂಸ್ಕೃತ ಭಾಷೆಯ ಕೇಂದ್ರವನ್ನು ಪ್ರವೇಶಿಸಿದ ಅನುಭವವಾಗುತ್ತದೆ” ಎಂದು ವಾರಾಣಸಿ ವಿಮಾನ ನಿಲ್ದಾಣ ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.

ವಿಮಾನ ನಿಲ್ದಾಣದ ನಿರ್ದೇಶಕ ಆರ್ಯಮ ಸನ್ಯಾಲ್ ಪ್ರಕಾರ, ವಾರಣಾಸಿ ಪ್ರಾಚೀನ ಕಾಲದಿಂದಲೂ ಸಂಸ್ಕೃತದ ಕೇಂದ್ರವಾಗಿತ್ತು. ಹೀಗಾಗಿ, ಸಂಸ್ಕೃತ ಭಾಷೆಗೆ ಗೌರವವನ್ನು ನೀಡಲು ಈ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲಾಗಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Wed, 22 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ