AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varanasi Airport: ಈ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಭಾಷೆಯಲ್ಲೂ ಕೇಳುತ್ತೆ ಅನೌನ್ಸ್​ಮೆಂಟ್!

ವಾರಾಣಸಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಸಂಸ್ಕೃತ ಪ್ರಕಟಣೆಯನ್ನು ಒಳಗೊಂಡ ವಿಡಿಯೋ ಕ್ಲಿಪ್  ಹಂಚಿಕೊಳ್ಳಲಾಗಿದೆ.

Varanasi Airport: ಈ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಭಾಷೆಯಲ್ಲೂ ಕೇಳುತ್ತೆ ಅನೌನ್ಸ್​ಮೆಂಟ್!
ವಾರಾಣಸಿ ವಿಮಾನ ನಿಲ್ದಾಣ
TV9 Web
| Edited By: |

Updated on:Jun 22, 2022 | 11:53 AM

Share

ವಾರಾಣಸಿ: ವಾರಾಣಸಿಯ (Varanasi Airport) ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್-19 ಬಗ್ಗೆ ಸಂಸ್ಕೃತ ಭಾಷೆಯಲ್ಲಿ ಪ್ರಕಟಣೆಗಳನ್ನು (Announcement) ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪ್ರಕಟಣೆಗಳನ್ನು ಮಾಡಲಾಗುತ್ತಿತ್ತು. ಇದೀಗ ಹೊಸ ಸೇರ್ಪಡೆಯಾಗಿ ಸಂಸ್ಕೃತ (Sanskrit) ಭಾಷೆಯನ್ನು ಸೇರಿಸಲಾಗಿದೆ.

ವಾರಾಣಸಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಸಂಸ್ಕೃತ ಪ್ರಕಟಣೆಯನ್ನು ಒಳಗೊಂಡ ವಿಡಿಯೋ ಕ್ಲಿಪ್  ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪ್ರಯಾಣಿಕರು ಚಲಿಸುತ್ತಿರುವಾಗ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಘೋಷಣೆಯಾಗುತ್ತಿರುವುದನ್ನು ಕೇಳಬಹುದು. ಈಗ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ನಂತರ, ಕೋವಿಡ್ ಮಾನದಂಡಗಳನ್ನು ಸಂಸ್ಕೃತದಲ್ಲಿಯೂ ಘೋಷಿಸಲಾಗುತ್ತಿದೆ.

ಇದನ್ನೂ ಓದಿ
Image
Monsoon 2022: ತಮಿಳುನಾಡಿನಾದ್ಯಂತ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ
Image
Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ
Image
Viral Photo: ಚಲಿಸುತ್ತಿದ್ದ ರೈಲಿನಲ್ಲಿ ಯೋಗಾಸನ ಮಾಡಿದ ಪ್ರಯಾಣಿಕರು

ಕೆಲವು ನೆಟ್ಟಿಗರು ಈ ಕ್ರಮವನ್ನು ಸ್ವಾಗತಿಸಿದ್ದರೆ ಇನ್ನು ಕೆಲವರು ಜನರಿಗೆ ಸಂಸ್ಕೃತ ಹೇಗೆ ಅರ್ಥವಾಗುತ್ತದೆ? ಎಲ್ಲರಿಗೂ ಸಂಸ್ಕೃತ ಅರ್ಥವಾಗುವುದಿಲ್ಲ. ಪಾಲಿ ಮತ್ತು ಪ್ರಾಕೃತ ಭಾಷೆಯನ್ನು ಕೂಡ ಸೇರಿಸಿ ಎಂದು ಇನ್ನು ಕೆಲವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಹೊಸ ಅಂತಾರಾಷ್ಟ್ರೀಯ ಮಾರ್ಗಗಳು ಆರಂಭ

“ಈಗ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಇಂಗ್ಲಿಷ್ ಮತ್ತು ಹಿಂದಿ ನಂತರ ಕೊವಿಡ್ ಮಾನದಂಡಗಳನ್ನು ಸಂಸ್ಕೃತದಲ್ಲಿಯೂ ಘೋಷಿಸಲಾಗುತ್ತಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿದ ತಕ್ಷಣ, ಅವರು ಸಂಸ್ಕೃತ ಭಾಷೆಯ ಕೇಂದ್ರವನ್ನು ಪ್ರವೇಶಿಸಿದ ಅನುಭವವಾಗುತ್ತದೆ” ಎಂದು ವಾರಾಣಸಿ ವಿಮಾನ ನಿಲ್ದಾಣ ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.

ವಿಮಾನ ನಿಲ್ದಾಣದ ನಿರ್ದೇಶಕ ಆರ್ಯಮ ಸನ್ಯಾಲ್ ಪ್ರಕಾರ, ವಾರಣಾಸಿ ಪ್ರಾಚೀನ ಕಾಲದಿಂದಲೂ ಸಂಸ್ಕೃತದ ಕೇಂದ್ರವಾಗಿತ್ತು. ಹೀಗಾಗಿ, ಸಂಸ್ಕೃತ ಭಾಷೆಗೆ ಗೌರವವನ್ನು ನೀಡಲು ಈ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲಾಗಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Wed, 22 June 22

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ