AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಾರಣಾಸಿಯಲ್ಲಿ ಗಾಳಿಪಟ ಹಾರಿಸಿದ ಕಪಿರಾಯ; ವಿಡಿಯೋ ವೈರಲ್‌

ಮೊನ್ನೆಯಷ್ಟೆ ಪಾತ್ರೆ ತೊಳೆಯುವುದರಿಂದ ಹಿಡಿದು ಚಪಾತಿ ಲಟ್ಟಿಸುವವರೆಗೆ ಅಚ್ಚುಕಟ್ಟಾಗಿ ಮನೆಕೆಲಸ ಮಾಡುವಂತಹ ಕೋತಿಯ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ವೈರಲ್‌ ಆಗಿದ್ದು, ಕಟ್ಟಡದ ಮೇಲೆ ಕುಳಿತಿದ್ದಂತಹ ಮಂಗವೊಂದು ಮಕ್ಕಳಂತೆ ಖುಷಿಯಾಗಿ ಗಾಳಿಪಟ ಹಾರಿಸಿದೆ. ಈ ಮುದ್ದಾದ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 07, 2025 | 10:24 AM

Share

ಆಹಾರವನ್ನರಸುತ್ತಾ ಜನವಸತಿ ಪ್ರದೇಶ್ಳ ಕಡೆಗೆ ಬರುವ ಮಂಗಗಳು ತಮ್ಮ ಚೇಷ್ಟೆ ಮತ್ತು ತುಂಟತನದಿಂದ ಮನರಂಜನೆ ಹಾಗೂ ಜನರಿಗೆ ತೊಂದರೆ ಕೊಡುವಂತಹ ಕೆಲಸಗಳನ್ನು ಮಾಡುತ್ತಿರುತ್ತವೆ. ಅದರಲ್ಲೂ ಈ ಕೋತಿಗಳು ಕೆಲವೊಮ್ಮೆ ಮನುಷ್ಯರಂತೆಯೇ ವರ್ತಿಸುತ್ತವೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಕೂಡಾ ವೈರಲ್‌ ಆಗಿವೆ. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಕೋತಿಯೊಂದು ಮಕ್ಕಳಂತೆ ಬಹಳ ಖುಷಿಯಿಂದ ಗಾಳಿಪಟವನ್ನು ಹಾರಿಸಿದೆ. ಈ ದೃಶ್ಯ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಕಪಿರಾಯ ಪಟ ಹಾರಿಸುವ ಶೈಲಿಯನ್ನು ಕಂಡು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ಈ ಘಟನೆ ವಾರಣಾಸಿಯಲ್ಲಿ ನಡೆದಿದ್ದು, ಕೋತಿಯೊಂದು ಟೆರೇಸ್‌ ಮೇಲೆ ಕುಳಿತು ಮನುಷ್ಯರಿಗಿಂತ ನಾನೇನು ಕಮ್ಮಿಯಿಲ್ಲ ಎಂಬಂತೆ ಕೌಶಲ್ಯಯುತವಾಗಿ ಗಾಳಿಪಟವನ್ನು ಹಾರಿಸಿದೆ. ಕಪಿರಾಯ ಪಟ ಹಾರಿಸುವ ದೃಶ್ಯವನ್ನು ಕಂಡು ಅಲ್ಲಿ ನೆರೆದಿದ್ದ ಸ್ಥಳೀಯರು ಫುಲ್‌ ಶಾಕ್‌ ಆಗಿದ್ದಾರೆ.

ಈ ಕುರಿತ ವಿಡಿಯೋವನ್ನು rose_k01 ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಈ ದೃಶ್ಯದಲ್ಲಿ ಕಟ್ಟಡದ ಮೇಲೆ ಕುಳಿತ ಕೋತಿ ಮಕ್ಕಳಿಗಿಂತ ಸೂಪರ್‌ ಆಗಿ ಗಾಳಿಪಟ ಹಾರಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಚಹಾಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡಿರುವುದು ಧನಶ್ರೀ ಎಂದು ಸುಳ್ಳು ಪೋಸ್ಟ್ ವೈರಲ್

ಜನವರಿ 6 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.8 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಯ್ಯಯ್ಯೋ ಈ ದೃಶ್ಯವಂತೂ ತುಂಬಾನೇ ಮುದ್ದಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಮಂಗನಿಂದ ಮಾನವ ಅಂತಾರೆ, ಮನುಷ್ಯರಾದ ನಾವು ಗಾಳಿಪಟವನ್ನು ಹಾರಿಸಬಹುದಾದರೆ ಅವುಗಳಿಗೆ ಇದು ಸಾಧ್ಯವಿಲ್ಲದ ಮಾತೇʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ಕಲಿಯುಗದಲ್ಲಿ ಎಲ್ಲವೂ ಸಾಧ್ಯʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?