AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎ ಪರೀಕ್ಷೆಯಲ್ಲಿ ಮಗ ಪಾಸಾದ ಸುದ್ದಿ ಕೇಳಿ ಖುಷಿಯಿಂದ ಕಣ್ಣೀರಿಟ್ಟ ತರಕಾರಿ ವ್ಯಾಪಾರಿ; ಭಾವುಕರಾದ ನೆಟ್ಟಿಗರು

ಮಹಾರಾಷ್ಟ್ರದ ಡೊಂಬಿವ್ಲಿ ಪೂರ್ವದಲ್ಲಿ ತರಕಾರಿ ಮಾರಾಟಗಾರ್ತಿ ನೀರಾ ಥೋಂಬರೆ ಅವರ ಮಗ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಷ್ಟಪಟ್ಟು ತರಕಾರಿ ಮಾರಿ ಮಗನನ್ನು ಬೆಳೆಸಿದ್ದ ತಾಯಿ ಇದರಿಂದ ಖುಷಿಯಿಂದ ಕಣ್ಣೀರಿಟ್ಟಿರುವ ಘಟನೆ ನಡೆದಿದೆ.

ಸಿಎ ಪರೀಕ್ಷೆಯಲ್ಲಿ ಮಗ ಪಾಸಾದ ಸುದ್ದಿ ಕೇಳಿ ಖುಷಿಯಿಂದ ಕಣ್ಣೀರಿಟ್ಟ ತರಕಾರಿ ವ್ಯಾಪಾರಿ; ಭಾವುಕರಾದ ನೆಟ್ಟಿಗರು
ಸಿಎ ಪರೀಕ್ಷೆಯಲ್ಲಿ ಮಗ ಪಾಸಾದ ಸುದ್ದಿ ಕೇಳಿ ಖುಷಿಯಿಂದ ಕಣ್ಣೀರಿಟ್ಟ ತರಕಾರಿ ವ್ಯಾಪಾರಿ
ಸುಷ್ಮಾ ಚಕ್ರೆ
|

Updated on: Jul 19, 2024 | 5:50 PM

Share

ಮುಂಬೈ: ಇತ್ತೀಚೆಗೆ ಪ್ರಕಟವಾದ ಸಿಎ ಪರೀಕ್ಷೆಯ ಫಲಿತಾಂಶದಲ್ಲಿ ತನ್ನ ಮಗ ಪಾಸಾಗಿರುವ ವಿಷಯ ತಿಳಿದು ಖುಷಿಯಿಂದ ತರಕಾರಿ ವ್ಯಾಪಾರಿಯಾಗಿರುವ ತಾಯಿ ಕಣ್ಣೀರಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಷ್ಪಟ್ಟು ತರಕಾರಿ ಮಾರಿ ಸಾಕಿದ ಮಗ ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಆತನನ್ನು ತಬ್ಬಿ ಹಿಡಿದು ಕಣ್ಣೀರು ಹಾಕಿದ್ದಾರೆ.

ಈ ವಿಡಿಯೋ ನೋಡಿದ ಉದ್ಯಮಿ ಆನಂದ್ ಮಹೀಂದ್ರಾ ಎಕ್ಸ್​ನಲ್ಲಿ ಈ ವಿಡಿಯೋವನ್ನು ಶೇರ್ ಮಾಡಿದ್ದಾರೆ. ತರಕಾರಿ ವ್ಯಾಪಾರಿ ತನ್ನ ಮಗ ಯೋಗೀಶ್‌ನನ್ನು ಅಪ್ಪಿಕೊಂಡು ಸಂತೋಷದಿಂದ ಕಣ್ಣೀರು ಹಾಕುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಯೋಗೇಶ್ ತನ್ನ ಶಿಕ್ಷಣದಲ್ಲಿ ರಾಜಿ ಮಾಡಿಕೊಳ್ಳದಂತೆ ನೋಡಿಕೊಳ್ಳಲು ಆನಂದ್ ಮಹೀಂದ್ರಾ ಸೂಚಿಸಿದ್ದಾರೆ. ಯೋಗೇಶ್ ಅವರು ಸಂಪೂರ್ಣ ದೃಢಸಂಕಲ್ಪ ಮತ್ತು ಕಠಿಣ ಪರಿಶ್ರಮದಿಂದ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದಂತೆ ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: Viral Video: ಚಿಕ್ಕ ಮಗುವನ್ನು ಕೂರಿಸಿಕೊಂಡು ಸ್ಟಂಟ್ ಮಾಡುವಾಗ ಬೈಕ್​ಗೆ ಅಡ್ಡಬಂದ ಗೂಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಯೋಗೇಶ್ ತನ್ನ ಫಲಿತಾಂಶದ ಬಗ್ಗೆ ತಿಳಿದ ನಂತರ, ನೇರವಾಗಿ ತನ್ನ ತಾಯಿಯ ತರಕಾರಿ ಅಂಗಡಿಗೆ ಹೋಗಿ ತನ್ನ ಸಾಧನೆಯನ್ನು ಹೇಳಿದನು. ಭಾವುಕರಾದ ಆ ಮಹಿಳೆ ಯೋಗೇಶ್​ನನ್ನು ಅಪ್ಪಿಕೊಂಡು ಖುಷಿಪಟ್ಟಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಯೋಗೇಶ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಈ ದೊಡ್ಡ ಸಾಧನೆಗಾಗಿ ಅವರನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಜಪಾನ್‌ನ ರೆಸ್ಟೋರೆಂಟ್‌ನಲ್ಲಿ ತಲೆಕೆಳಗಾಗಿ ಹಾರಿದ ಭಾರತದ ಧ್ವಜ; ವಿಡಿಯೋ ವೈರಲ್

ಅಂದಹಾಗೆ, ಯೋಗೇಶ್ ತನ್ನ ತಾಯಿಯೊಂದಿಗೆ ಡೊಂಬಿವಿಲಿ ಸಮೀಪದ ಖೋನಿ ಎಂಬ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ನೀರಾ ತೊಂಬರೆ ಕಳೆದ 25 ವರ್ಷಗಳಿಂದ ಡೊಂಬಿವಿಲಿಯ ಗಾಂಧಿನಗರ ಪ್ರದೇಶದಲ್ಲಿ ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ, ಯೋಗೇಶ್ ಅವರ ಸಾಧನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿರುವುದರ ಜೊತೆಗೆ ಮಗನಿಗೆ ವಿದ್ಯಾಭ್ಯಾಸ ಕೊಡಿಸಿದ ತಾಯಿಯ ತ್ಯಾಗದ ಬಗ್ಗೆ ಕೂಡ ಪ್ರಶಂಸೆ ವ್ಯಕ್ತವಾಗಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ