AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​​​ ನೈಟ್​​ಗೆ ವಯಾಗ್ರ ತೆಗೆದುಕೊಂಡ ವರ! ವಧು ಸಾವು -ಸಂತ್ರಸ್ತೆ ಸ್ಥಿತಿ ಗ್ಯಾಂಗ್ ರೇಪ್‌ನಷ್ಟು ಕೆಟ್ಟದಾಗಿತ್ತು ಎಂದ ವೈದ್ಯರು

Viagra for First Night: ಸಂತ್ರಸ್ತೆಯ ಸ್ಥಿತಿ ಗ್ಯಾಂಗ್ ರೇಪ್‌ನಷ್ಟು ಕೆಟ್ಟದಾಗಿತ್ತು ಎಂದು ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮೃತರ ಸಂಬಂಧಿಕರು ಈಗಾಗಲೇ ಉತ್ತರ ಪ್ರದೇಶದ ಹಮೀರ್‌ಪುರ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಇದನ್ನು ತಿಳಿದ ವರ ತನ್ನ ಹೆತ್ತವರೊಂದಿಗೆ ಪರಾರಿಯಾಗಿದ್ದನು.

ಫಸ್ಟ್​​​ ನೈಟ್​​ಗೆ ವಯಾಗ್ರ ತೆಗೆದುಕೊಂಡ ವರ! ವಧು ಸಾವು -ಸಂತ್ರಸ್ತೆ ಸ್ಥಿತಿ ಗ್ಯಾಂಗ್ ರೇಪ್‌ನಷ್ಟು ಕೆಟ್ಟದಾಗಿತ್ತು ಎಂದ ವೈದ್ಯರು
ಫಸ್ಟ್​​​ನೈಟ್​​ಗೆ ವಯಾಗ್ರ ತೆಗೆದುಕೊಂಡ ವರ, ವಧು ಸಾವು
ಸಾಧು ಶ್ರೀನಾಥ್​
|

Updated on:Feb 15, 2024 | 12:58 PM

Share

ಹಲವು ಕನಸುಗಳಿಂದ ತುಂಬಿದ್ದ ಅವಳ ಮೊದಲ ರಾತ್ರಿ ಕರಾಳ ರಾತ್ರಿಯಾಯಿತು. ಪತಿಯ ಆರ್ಭಟದ ಚಟುವಟಿಕೆಗೆ ಬಲಿಯಾದಳು. ಮೊದಲ ರಾತ್ರಿ, ಪತಿ ಮಹಾಶಯ ವಯಾಗ್ರ ಮಾತ್ರೆ ಬಳಸಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾಳೆ. ವಿವೇಚನೆಯಿಲ್ಲದೆ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ ಯುವಕ ಆಕೆಯ ಪ್ರಾಣವನ್ನೇ ತೆಗೆದಿದ್ದಾನೆ. 3 ದಿನಗಳ ಕಾಲ ತೀವ್ರ ರಕ್ತಸ್ರಾವ ಹಾಗೂ ಸೋಂಕಿನಿಂದ ಬಳಲುತ್ತಿದ್ದ ಸಂತ್ರಸ್ತೆ ಕೊನೆಗೂ ಸಾವನ್ನಪ್ಪಿದ್ದಾಳೆ. ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಈ ಘಟನೆ ನಡೆದಿದೆ.

ಹಮೀರ್‌ಪುರದ ಎಂಜಿನಿಯರ್ ಫೆಬ್ರವರಿ 3 ರಂದು ವಿವಾಹವಾದರು. ಫಸ್ಟ್ ನೈಟ್ ಗಾಗಿ ವರ ವಯಾಗ್ರ ಮಾತ್ರೆ ತೆಗೆದುಕೊಂಡಿದ್ದ. ಇದರಿಂದಾಗಿ ಆಕೆಯ ಖಾಸಗಿ ಭಾಗಗಳಿಗೆ ಗಂಭೀರ ಗಾಯ, ರಕ್ತಸ್ರಾವ ಹಾಗೂ ತೀವ್ರ ಸೋಂಕು ತಗುಲಿ ಅಸ್ವಸ್ಥಳಾದಳು. ನಂತರ ಅವಳ ಆರೋಗ್ಯ ತೀವ್ರವಾಗಿ ಹದಗೆಟ್ಟಿತು.

ಇದನ್ನೂ ಓದಿ: ಭಿಕ್ಷಾಟನೆಯಿಂದಲೇ 45 ದಿನದಲ್ಲಿ 2.5ಲಕ್ಷ ಗಳಿಕೆ; ಹುಟ್ಟೂರಿನಲ್ಲಿ ಮನೆ,ಜಮೀನು ಖರೀದಿ

ತಕ್ಷಣ ಕಾನ್ಪುರ ಜಿಲ್ಲೆಯ ಖಾಸಗಿ ನರ್ಸಿಂಗ್ ಹೋಂಗೆ ಸೇರಿಸಲಾಗಿತ್ತು. ವೈದ್ಯರು ಎಷ್ಟೇ ಚಿಕಿತ್ಸೆ ನೀಡಿದರೂ ಆಕೆಯನ್ನು ಉಳಿಸಿಕೊಳ್ಳಲಾಗಲಿಲ್ಲ. ನವ ವಧುವನ್ನು ಫೆಬ್ರವರಿ 7 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ವಿಫಲವಾದ ಕಾರಣ ಅವರು ಫೆಬ್ರವರಿ 10 ರ ಶನಿವಾರದಂದು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂತ್ರಸ್ತೆಯ ಸ್ಥಿತಿ ಗ್ಯಾಂಗ್ ರೇಪ್‌ನಷ್ಟು ಕೆಟ್ಟದಾಗಿತ್ತು ಎಂದು ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮೃತರ ಸಂಬಂಧಿಕರು ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಪತಿ ಹಾಗೂ ಕುಟುಂಬದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನು ತಿಳಿದ ವರ ತನ್ನ ಹೆತ್ತವರೊಂದಿಗೆ ಪರಾರಿಯಾಗಿದ್ದನು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Thu, 15 February 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?