AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನನ್ನ ಮಗಳನ್ನು ಮದುವೆಯಾಗುವ ಹುಡುಗನಿಗೆ 2 ಕೋಟಿ ಬೆಲೆಯ ಬಂಗಲೆ, 50 ಲಕ್ಷ ಎಫ್‌.ಡಿ; ಬಿಗ್ ಆಫರ್ ನೀಡಿದ ತಂದೆ

ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಮ್ಮೆ ಅಚ್ಚರಿಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದು ನಿಜ ಸುದ್ದಿಯೇ ಅಥವಾ ಸುಳ್ಳು ಸುದ್ದಿಯೇ ಎಂದು ನಂಬಲು ಸಹ ಅಸಾಧ್ಯವಾಗಿರುತ್ತದೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ವ್ಯಕ್ತಿಯೊಬ್ಬರು ತನ್ನ ಮಗಳನ್ನು ಮದುವೆಯಾಗುವ ಹುಡುಗನಿಗೆ 2 ಕೋಟಿ ಬೆಲೆಯ ಬಂಗಲೆ ನೀಡುತ್ತೇನೆ ಎಂದು ಗಂಡು ಮಕ್ಳಿಗೆ ಬಿಗ್‌ ಆಫರ್‌ ಒಂದನ್ನು ನೀಡಿದ್ದಾರೆ. 

Video: ನನ್ನ ಮಗಳನ್ನು ಮದುವೆಯಾಗುವ ಹುಡುಗನಿಗೆ 2 ಕೋಟಿ ಬೆಲೆಯ ಬಂಗಲೆ, 50 ಲಕ್ಷ ಎಫ್‌.ಡಿ; ಬಿಗ್ ಆಫರ್ ನೀಡಿದ ತಂದೆ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 03, 2024 | 2:18 PM

ಹೆತ್ತ ಮಗಳಿಗೆ 24-25 ವರ್ಷವಾದರೆ ಸಾಕು ಹೆತ್ತವರಿಗೆ ಮಗಳ ಮದುವೆಯ ಚಿಂತೆ ಸತಾಯಿಸಲಾರಂಭಿಸುತ್ತದೆ. ಪ್ರತಿಯೊಬ್ಬರೂ ತಮ್ಮ ಮಗಳನ್ನು ಒಳ್ಳೆಯ ಮನೆಗೆ ಮದುವೆ ಮಾಡಿಕೊಡಬೇಕೆಂದು ಬಯಸುತ್ತಾರೆ. ಅದರಲ್ಲೂ ಹುಡುಗನಿಗೆ ಕೈತುಂಬಾ ಸಂಬಳ ಸಿಗುವ ನೌಕರಿಯಿದ್ದರೆ ಸಿಗುವ ಖುಷಿಯೇ ಬೇರೆ. ಯಾಕಂದ್ರೆ ಲೈಫ್‌ ಸೆಟಲ್‌ ಆಗಿರುತ್ತದೆ ಎಂಬ ಕಾರಣಕ್ಕೆ ಸ್ವಲ್ಪ ಶ್ರೀಮಂತ ವರನನ್ನು ಹುಡುಗಿಯ ಮನೆಯವರು ಆಯ್ಕೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ಹುಡುಗ ಹೇಗಿದ್ರೂ ಪರವಾಗಿಲ್ಲ, ಆತ ನನ್ನ ಮಗಳನ್ನು ಮದುವೆಯಾದ್ರೆ ಸಾಕು.  ಆತನಿಗೆ 2 ಕೋಟಿಯ ಬಂಗಲೆಯ ಜೊತೆಗೆ 50 ಲಕ್ಷ ಎಫ್.ಡಿ ಕೂಡಾ ನೀಡುತ್ತೇನೆ ಎಂದು ಗಂಡ್‌ ಮಕ್ಳಿಗೆ ಬಿಗ್‌ ಆಫರ್‌ ಒಂದನ್ನು ನೀಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಅಂಕಿತಾ ಪಾಟೇಲ್‌ (@ankita.patel_143) ಎಂಬವರು ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಡಾಕ್ಟರ್‌ ವೃತ್ತಿಯಲ್ಲಿರುವ ತಂದೆ ತನ್ನ ಮಗಳನ್ನು ಯಾರು ಮದುವೆಯಾಗುತ್ತಾನೋ ಆತನಿಗೆ 2 ಕೋಟಿ ಬೆಲೆಯ ಬಂಗಲೆ, ನಮ್ಮ ಕ್ಲಿನಿಕ್‌ ಮತ್ತು 50 ಲಕ್ಷ ಎಫ್.ಡಿ ಇದೆ ಅದನ್ನು ಆತನ ಹೆಸರಿಗೆ ಬರೆಯುತ್ತೇವೆ ಎಂದು ಹೇಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನ ಪ್ರಾಣ ರಕ್ಷಿಸಿದ ರಿಯಲ್‌ ಹೀರೋಗಳು; ಇಲ್ಲಿದೆ ರೋಚಕ ವಿಡಿಯೋ 

ವೈರಲ್​​ ವಿಡಿಯೋ ಇಲ್ಲಿದೆ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 18.8 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಕೆಲವರು ನಿಮ್ಮ ಮಗಳನ್ನು ನಾನು ಮದುವೆಯಾಗಲು ರೆಡಿ ಇದ್ದೇನೆ ಎಂದು ಕಾಮೆಂಟ್‌ ಮಾಡಿದ್ರೆ, ಇನ್ನೂ ಕೆಲವರು ಇನ್‌ಸ್ಟಾಗ್ರಾಮ್‌ ಬರಬರುತ್ತಾ ಮ್ಯಾಟ್ರಿಮೋನಿ ಸೈಟ್‌ ಆಗುತ್ತಿದೆ ಎಂದು ತಮಾಷೆ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ