ಮೈಸೂರಿನಲ್ಲಿ ರೂ. 4ಕ್ಕೆ 100 ಕೆ.ಜಿ ಈರುಳ್ಳಿ; ಯಶಸ್ವಿ ವ್ಯಾಪಾರ ಮುಗಿಸಿದ ಜರ್ಮನಿಯ ಜೆನ್ನಿಫರ್

Mysore : ಬಡವನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಅಕ್ಕಾ ಎಂದು ತಮಾಷೆ ಮಾಡಿದ್ದಾರೆ ಕೆಲವರು. ಮೊದಲೇ ಆಗಿದ್ದರೆ ನಾನೇ ಎಲ್ಲವನ್ನೂ ಖರೀದಿಸುತ್ತಿದ್ದೆ ಎಂದಿದ್ದಾರೆ ಇನ್ನೂ ಕೆಲವರು. ನೀವೇನಂತೀರಿ?

ಮೈಸೂರಿನಲ್ಲಿ ರೂ. 4ಕ್ಕೆ 100 ಕೆ.ಜಿ ಈರುಳ್ಳಿ; ಯಶಸ್ವಿ ವ್ಯಾಪಾರ ಮುಗಿಸಿದ ಜರ್ಮನಿಯ ಜೆನ್ನಿಫರ್
ಈರುಳ್ಳಿ ಮಾರುತ್ತಿರುವ ಜೆನ್ನಿಫರ್
Follow us
| Updated By: ಶ್ರೀದೇವಿ ಕಳಸದ

Updated on:Dec 09, 2022 | 11:12 AM

Viral Video : ಜರ್ಮನಿಯ ಜೆನ್ನಿಫರ್​ ವಿಡಿಯೋ ಕ್ರಿಯೇಟರ್. ಭಾಷಾ ಕಲಿಕೆ, ನಟನೆ, ನೃತ್ಯದಲ್ಲಿ ಆಸಕ್ತಿ ಇರುವ  ಈಕೆ ಮೈಸೂರಿನಲ್ಲಿರುತ್ತಾರೆ. ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಈಕೆಗೆ ಮೈಸೂರೆಂದರೆ ಬಲುಪ್ರೀತಿ. ಅದರಲ್ಲಿಯೂ ದೇವರಾಜ ಮಾರುಕಟ್ಟೆಯೇ ಈಕೆಯ ಪ್ರಮುಖ ಪ್ರತಿಭಾಪ್ರದರ್ಶನದ ತಾಣ. ಈ ಹಿಂದೆ ಇದೇ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಮಾರಿದ್ದು ಮತ್ತೆ ಆ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ಈಕೆ ಇದೇ ಮಾರುಕಟ್ಟೆಯಲ್ಲಿ ಈರುಳ್ಳಿ ವ್ಯಾಪಾರಕ್ಕೆ ಕುಳಿತಿದ್ದನ್ನು ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Jennifer (@jennijigermany)

ಅಂಗಡಿಯಾತ ಅಂಗಡಿ ನೋಡಿಕೊಳ್ಳೋದಕ್ಕೆ ಹೇಳಿ ಹೋಗುತ್ತಾನೆ. ಯಾರಾದರೂ ಬಂದರೆ ನೂರು ರೂಪಾಯಿಗೆ ನಾಲ್ಕು ಕೇಜಿ ಈರುಳ್ಳಿ ಅಂತ ಹೇಳಿ ಎಂದು ಹೇಳುತ್ತಾನೆ. ಅವನು ವಾಪಸ್ ಬರುವ ಹೊತ್ತಿಗೆ ಈಕೆ ಖಾಲಿ ಬುಟ್ಟಿ ಹಿಡಿದುಕೊಂಡು ನಿಂತಿರುತ್ತಾರೆ. ಅಂಗಡಿಕಾರನಿಗೆ ಅಚ್ಚರಿಯಾಗುತ್ತದೆ. ನಾಲ್ಕು ರೂಪಾಯಿಗೆ ನೂರು ಕೇಜಿ ಕೊಟ್ಟೆ ಎನ್ನುತ್ತಾಳೆ!

ವಿಡಿಯೋ ಕ್ರಿಯೇಟರ್ ಆಗಿರುವ ಜೆನ್ನಿಫರ್ ಹೀಗೆ ತಿಳಿಹಾಸ್ಯದ ರೀಲ್​ಗಳನ್ನು ಮಾಡುತ್ತ ಇನ್​ಸ್ಟಾಗ್ರಾಂನಲ್ಲಿ ಪ್ರಸಿದ್ಧಿ ಪಡೆಯುತ್ತಿದ್ದಾರೆ. ಇವರ ಕನ್ನಡ ಭಾಷಾಪ್ರೇಮಕ್ಕೆ ನೆಟ್ಟಿಗರು ಮನಸೋಲುತ್ತಿದ್ದಾರೆ. ಸ್ಪಷ್ಟವಾಗಿ ಕನ್ನಡ ಮಾತನಾಡುವ ಇವರನ್ನು ಅನೇಕ ಭಾರತೀಯರು ಮತ್ತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಅಕ್ಕರೆಯಿಂದ ಕಾಣುತ್ತಾರೆ. ಮೈಸೂರಿನ ಶಾಲೆ, ಮಾರುಕಟ್ಟೆ, ಬೀದಿಗಳನ್ನೆಲ್ಲ ಕುತೂಹಲದಿಂದ ಹೊಕ್ಕಾಡುವ ಈಕೆ ಸರಳಜೀವಿ.  ಯಾವುದೇ ಹಮ್ಮುಬಿಮ್ಮಿಲ್ಲದೆ ಎಲ್ಲರೊಳಗೂ ಒಂದಾಗುತ್ತಿರುವ ಈಕೆಯ ಪರಿ ಸೋಜಿಗವನ್ನುಂಟು ಮಾಡುತ್ತದೆ.

14 ಗಂಟೆಗಳ ಹಿಂದೆಯಷ್ಟೇ ಪೋಸ್ಟ್ ಮಾಡಲಾದ ಈ ವಿಡಿಯೋ ಅನ್ನು 35,000 ಜನರು ಮೆಚ್ಚಿದ್ದಾರೆ. 700ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. ಬಡವನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಅಕ್ಕಾ ಎಂದು ತಮಾಷೆ ಮಾಡಿದ್ದಾರೆ ಕೆಲವರು. ಮೊದಲೇ ಆಗಿದ್ದರೆ ನಾನೇ ಎಲ್ಲವನ್ನೂ ಖರೀದಿಸುತ್ತಿದ್ದೆ ಎಂದಿದ್ದಾರೆ ಇನ್ನೂ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 11:07 am, Fri, 9 December 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ