AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರೂ. 4ಕ್ಕೆ 100 ಕೆ.ಜಿ ಈರುಳ್ಳಿ; ಯಶಸ್ವಿ ವ್ಯಾಪಾರ ಮುಗಿಸಿದ ಜರ್ಮನಿಯ ಜೆನ್ನಿಫರ್

Mysore : ಬಡವನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಅಕ್ಕಾ ಎಂದು ತಮಾಷೆ ಮಾಡಿದ್ದಾರೆ ಕೆಲವರು. ಮೊದಲೇ ಆಗಿದ್ದರೆ ನಾನೇ ಎಲ್ಲವನ್ನೂ ಖರೀದಿಸುತ್ತಿದ್ದೆ ಎಂದಿದ್ದಾರೆ ಇನ್ನೂ ಕೆಲವರು. ನೀವೇನಂತೀರಿ?

ಮೈಸೂರಿನಲ್ಲಿ ರೂ. 4ಕ್ಕೆ 100 ಕೆ.ಜಿ ಈರುಳ್ಳಿ; ಯಶಸ್ವಿ ವ್ಯಾಪಾರ ಮುಗಿಸಿದ ಜರ್ಮನಿಯ ಜೆನ್ನಿಫರ್
ಈರುಳ್ಳಿ ಮಾರುತ್ತಿರುವ ಜೆನ್ನಿಫರ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 09, 2022 | 11:12 AM

Viral Video : ಜರ್ಮನಿಯ ಜೆನ್ನಿಫರ್​ ವಿಡಿಯೋ ಕ್ರಿಯೇಟರ್. ಭಾಷಾ ಕಲಿಕೆ, ನಟನೆ, ನೃತ್ಯದಲ್ಲಿ ಆಸಕ್ತಿ ಇರುವ  ಈಕೆ ಮೈಸೂರಿನಲ್ಲಿರುತ್ತಾರೆ. ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಈಕೆಗೆ ಮೈಸೂರೆಂದರೆ ಬಲುಪ್ರೀತಿ. ಅದರಲ್ಲಿಯೂ ದೇವರಾಜ ಮಾರುಕಟ್ಟೆಯೇ ಈಕೆಯ ಪ್ರಮುಖ ಪ್ರತಿಭಾಪ್ರದರ್ಶನದ ತಾಣ. ಈ ಹಿಂದೆ ಇದೇ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಮಾರಿದ್ದು ಮತ್ತೆ ಆ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ಈಕೆ ಇದೇ ಮಾರುಕಟ್ಟೆಯಲ್ಲಿ ಈರುಳ್ಳಿ ವ್ಯಾಪಾರಕ್ಕೆ ಕುಳಿತಿದ್ದನ್ನು ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Jennifer (@jennijigermany)

ಅಂಗಡಿಯಾತ ಅಂಗಡಿ ನೋಡಿಕೊಳ್ಳೋದಕ್ಕೆ ಹೇಳಿ ಹೋಗುತ್ತಾನೆ. ಯಾರಾದರೂ ಬಂದರೆ ನೂರು ರೂಪಾಯಿಗೆ ನಾಲ್ಕು ಕೇಜಿ ಈರುಳ್ಳಿ ಅಂತ ಹೇಳಿ ಎಂದು ಹೇಳುತ್ತಾನೆ. ಅವನು ವಾಪಸ್ ಬರುವ ಹೊತ್ತಿಗೆ ಈಕೆ ಖಾಲಿ ಬುಟ್ಟಿ ಹಿಡಿದುಕೊಂಡು ನಿಂತಿರುತ್ತಾರೆ. ಅಂಗಡಿಕಾರನಿಗೆ ಅಚ್ಚರಿಯಾಗುತ್ತದೆ. ನಾಲ್ಕು ರೂಪಾಯಿಗೆ ನೂರು ಕೇಜಿ ಕೊಟ್ಟೆ ಎನ್ನುತ್ತಾಳೆ!

ವಿಡಿಯೋ ಕ್ರಿಯೇಟರ್ ಆಗಿರುವ ಜೆನ್ನಿಫರ್ ಹೀಗೆ ತಿಳಿಹಾಸ್ಯದ ರೀಲ್​ಗಳನ್ನು ಮಾಡುತ್ತ ಇನ್​ಸ್ಟಾಗ್ರಾಂನಲ್ಲಿ ಪ್ರಸಿದ್ಧಿ ಪಡೆಯುತ್ತಿದ್ದಾರೆ. ಇವರ ಕನ್ನಡ ಭಾಷಾಪ್ರೇಮಕ್ಕೆ ನೆಟ್ಟಿಗರು ಮನಸೋಲುತ್ತಿದ್ದಾರೆ. ಸ್ಪಷ್ಟವಾಗಿ ಕನ್ನಡ ಮಾತನಾಡುವ ಇವರನ್ನು ಅನೇಕ ಭಾರತೀಯರು ಮತ್ತು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಅಕ್ಕರೆಯಿಂದ ಕಾಣುತ್ತಾರೆ. ಮೈಸೂರಿನ ಶಾಲೆ, ಮಾರುಕಟ್ಟೆ, ಬೀದಿಗಳನ್ನೆಲ್ಲ ಕುತೂಹಲದಿಂದ ಹೊಕ್ಕಾಡುವ ಈಕೆ ಸರಳಜೀವಿ.  ಯಾವುದೇ ಹಮ್ಮುಬಿಮ್ಮಿಲ್ಲದೆ ಎಲ್ಲರೊಳಗೂ ಒಂದಾಗುತ್ತಿರುವ ಈಕೆಯ ಪರಿ ಸೋಜಿಗವನ್ನುಂಟು ಮಾಡುತ್ತದೆ.

14 ಗಂಟೆಗಳ ಹಿಂದೆಯಷ್ಟೇ ಪೋಸ್ಟ್ ಮಾಡಲಾದ ಈ ವಿಡಿಯೋ ಅನ್ನು 35,000 ಜನರು ಮೆಚ್ಚಿದ್ದಾರೆ. 700ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. ಬಡವನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಅಕ್ಕಾ ಎಂದು ತಮಾಷೆ ಮಾಡಿದ್ದಾರೆ ಕೆಲವರು. ಮೊದಲೇ ಆಗಿದ್ದರೆ ನಾನೇ ಎಲ್ಲವನ್ನೂ ಖರೀದಿಸುತ್ತಿದ್ದೆ ಎಂದಿದ್ದಾರೆ ಇನ್ನೂ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 11:07 am, Fri, 9 December 22

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ