AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ತಲ್ಲುಮಾಲ’ ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ನೆರೆದ ಜನಸ್ತೋಮ

Thallumala : ತಮ್ಮ ನೆಚ್ಚಿನ ನಾಯಕ ನಟನಟಿಯರನ್ನು ನೋಡಲು ನೆರೆದ ಈ ಜನಸ್ತೋಮದಿಂದಾಗಿ ಸಿನೆಮಾದ ಪ್ರಚಾರ ಕಾರ್ಯಕ್ರಮವೇ ರದ್ದಾಯಿತು.

Viral Video: ‘ತಲ್ಲುಮಾಲ' ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ನೆರೆದ ಜನಸ್ತೋಮ
ಕೋಝಿಕೋಡ್​ನ ಹೈಲೈಟ್ ಮಾಲ್​ನಲ್ಲಿ ನೆರೆದ ಜನಜಂಗುಳಿ
TV9 Web
| Edited By: ಶ್ರೀದೇವಿ ಕಳಸದ|

Updated on: Aug 11, 2022 | 12:16 PM

Share

Thallumala : ತಲ್ಲುಮಾಲ ಸಿನೆಮಾದ ಪ್ರೊಮೋಷನಲ್ ಇವೆಂಟ್​ ಕೇರಳದ ಕೋಝಿಕ್ಕೋಡ್​ನ ಹೈಲೈಟ್ ಮಾಲ್​ನಲ್ಲಿ ಏರ್ಪಾಡಾಗಿತ್ತು. ಅಲ್ಲಿ ನೆರೆದಿದ್ದ ಜನಸ್ತೋಮದ ವಿಡಿಯೋ ನೋಡಿದ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಖಲೀದ್​ ರೆಹಮಾನ್​ ನಿರ್ದೇಶನದ ಈ ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ಚಿತ್ರನಟರನ್ನು ನೋಡಲು ಜನರು ಈ ಪರಿಯಲ್ಲಿ ಮುಗಿಬಿದ್ದಿದ್ದರು. ಇಲ್ಲಿ ಕಿಕ್ಕಿರಿದಿರುವ ಜನರ ಸುರಕ್ಷತೆಯ ಬಗ್ಗೆ ಆತಂಕ ಯಾರಿಗಾದರೂ ಉಂಟಾಗುವುದು ಸಹಜ. ಕೊನೆಗೆ ಸಂಘಟಕರು ಮಾಲ್​ನಲ್ಲಿ ಕಾರ್ಯಕ್ರಮವನ್ನೇ ರದ್ದುಗೊಳಿಸಬೇಕಾಯಿತು ಎಂದು ವರದಿ ತಿಳಿಸಿದೆ.

ಮಾಲ್​ನಲ್ಲಿ ಇಂಚು ಜಾಗವನ್ನೂ ಬಿಡದೆ ಜನರು ತುಂಬಿತುಳುಕಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎ.ಬಿ. ಜಾರ್ಜ್​ ಎಂಬ ಟ್ವಿಟ್​ರ್ ಖಾತೆದಾರರು, ‘ಮಾಲ್​ನಲ್ಲಿ ಇಂಥ ದೊಡ್ಡ ಕಾರ್ಯಕ್ರಮಗಳನ್ನು ಏರ್ಪಡಿಸುವಾಗ  ಇವೆಂಟ್​ ಮ್ಯಾನೇಜರುಗಳು ಸರಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ದೊಡ್ಡ ದುರಂತಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಈ ವಿಡಿಯೋ ಅತ್ಯಂತ ಭಯಾನಕವಾಗಿದೆ’ ಎಂದಿದ್ದಾರೆ. ​

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಜುಲೈನಲ್ಲಿ ತಿರುವನಂತಪುರದ ಲುಲು ಮಾಲ್​ನಲ್ಲಿಯೂ ಇಂಥದೇ ಸಂದರ್ಭ ಸೃಷ್ಟಿಯಾಗಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು. ಪ್ರಚಾರ ಕಾರ್ಯಗಳನ್ನು ಇಂಥ ಮಾಲ್​ನಲ್ಲಿ ಹಮ್ಮಿಕೊಂಡಾಗ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಾರೆ. ಸಹಜವಾಗಿ ಅಂಗಡಿಗಳಲ್ಲಿ ಖರೀದಿಗೆ ಮುಂದಾಗುತ್ತಾರೆ. ಜುಲೈ 6ರ ಆ ದಿನ ರಾತ್ರಿ ಕಾರ್ಯಕ್ರಮವಿದ್ದುದರಿಂದ ಹೀಗೆಯೇ ಜನರು ನೆರೆದರು. 11.59ರಿಂದ ಮಾರನೇ ದಿನದ ಮುಂಜಾನೆವರೆಗೂ ಜನರೆಲ್ಲ ಖರೀದಿಯಲ್ಲಿ ನಿರತರಾಗಿದ್ದರು.

Viḍiyō: Īveṇṭ‌gāgi nūrāru jana kēraḷa

ಹಾಗಾಗಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಆಯೋಜಿಸಬೇಕು. ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಇಂಥ ವೈರಲ್ ಸುದ್ದಿಗಾಗಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್