AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ತಲ್ಲುಮಾಲ’ ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ನೆರೆದ ಜನಸ್ತೋಮ

Thallumala : ತಮ್ಮ ನೆಚ್ಚಿನ ನಾಯಕ ನಟನಟಿಯರನ್ನು ನೋಡಲು ನೆರೆದ ಈ ಜನಸ್ತೋಮದಿಂದಾಗಿ ಸಿನೆಮಾದ ಪ್ರಚಾರ ಕಾರ್ಯಕ್ರಮವೇ ರದ್ದಾಯಿತು.

Viral Video: ‘ತಲ್ಲುಮಾಲ' ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ನೆರೆದ ಜನಸ್ತೋಮ
ಕೋಝಿಕೋಡ್​ನ ಹೈಲೈಟ್ ಮಾಲ್​ನಲ್ಲಿ ನೆರೆದ ಜನಜಂಗುಳಿ
TV9 Web
| Updated By: ಶ್ರೀದೇವಿ ಕಳಸದ|

Updated on: Aug 11, 2022 | 12:16 PM

Share

Thallumala : ತಲ್ಲುಮಾಲ ಸಿನೆಮಾದ ಪ್ರೊಮೋಷನಲ್ ಇವೆಂಟ್​ ಕೇರಳದ ಕೋಝಿಕ್ಕೋಡ್​ನ ಹೈಲೈಟ್ ಮಾಲ್​ನಲ್ಲಿ ಏರ್ಪಾಡಾಗಿತ್ತು. ಅಲ್ಲಿ ನೆರೆದಿದ್ದ ಜನಸ್ತೋಮದ ವಿಡಿಯೋ ನೋಡಿದ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಖಲೀದ್​ ರೆಹಮಾನ್​ ನಿರ್ದೇಶನದ ಈ ಸಿನೆಮಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ಚಿತ್ರನಟರನ್ನು ನೋಡಲು ಜನರು ಈ ಪರಿಯಲ್ಲಿ ಮುಗಿಬಿದ್ದಿದ್ದರು. ಇಲ್ಲಿ ಕಿಕ್ಕಿರಿದಿರುವ ಜನರ ಸುರಕ್ಷತೆಯ ಬಗ್ಗೆ ಆತಂಕ ಯಾರಿಗಾದರೂ ಉಂಟಾಗುವುದು ಸಹಜ. ಕೊನೆಗೆ ಸಂಘಟಕರು ಮಾಲ್​ನಲ್ಲಿ ಕಾರ್ಯಕ್ರಮವನ್ನೇ ರದ್ದುಗೊಳಿಸಬೇಕಾಯಿತು ಎಂದು ವರದಿ ತಿಳಿಸಿದೆ.

ಮಾಲ್​ನಲ್ಲಿ ಇಂಚು ಜಾಗವನ್ನೂ ಬಿಡದೆ ಜನರು ತುಂಬಿತುಳುಕಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎ.ಬಿ. ಜಾರ್ಜ್​ ಎಂಬ ಟ್ವಿಟ್​ರ್ ಖಾತೆದಾರರು, ‘ಮಾಲ್​ನಲ್ಲಿ ಇಂಥ ದೊಡ್ಡ ಕಾರ್ಯಕ್ರಮಗಳನ್ನು ಏರ್ಪಡಿಸುವಾಗ  ಇವೆಂಟ್​ ಮ್ಯಾನೇಜರುಗಳು ಸರಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ದೊಡ್ಡ ದುರಂತಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಈ ವಿಡಿಯೋ ಅತ್ಯಂತ ಭಯಾನಕವಾಗಿದೆ’ ಎಂದಿದ್ದಾರೆ. ​

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಜುಲೈನಲ್ಲಿ ತಿರುವನಂತಪುರದ ಲುಲು ಮಾಲ್​ನಲ್ಲಿಯೂ ಇಂಥದೇ ಸಂದರ್ಭ ಸೃಷ್ಟಿಯಾಗಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು. ಪ್ರಚಾರ ಕಾರ್ಯಗಳನ್ನು ಇಂಥ ಮಾಲ್​ನಲ್ಲಿ ಹಮ್ಮಿಕೊಂಡಾಗ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಾರೆ. ಸಹಜವಾಗಿ ಅಂಗಡಿಗಳಲ್ಲಿ ಖರೀದಿಗೆ ಮುಂದಾಗುತ್ತಾರೆ. ಜುಲೈ 6ರ ಆ ದಿನ ರಾತ್ರಿ ಕಾರ್ಯಕ್ರಮವಿದ್ದುದರಿಂದ ಹೀಗೆಯೇ ಜನರು ನೆರೆದರು. 11.59ರಿಂದ ಮಾರನೇ ದಿನದ ಮುಂಜಾನೆವರೆಗೂ ಜನರೆಲ್ಲ ಖರೀದಿಯಲ್ಲಿ ನಿರತರಾಗಿದ್ದರು.

Viḍiyō: Īveṇṭ‌gāgi nūrāru jana kēraḷa

ಹಾಗಾಗಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಆಯೋಜಿಸಬೇಕು. ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಇಂಥ ವೈರಲ್ ಸುದ್ದಿಗಾಗಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ