AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಈತನನ್ನು ಆಫ್ರಿಕಾದ ಬಾಬಾ ರಾಮ್​ದೇವ್​ ಎಂದಿದ್ದಾರೆ; ಏನಿರಬಹುದು ಈತನ ಸಾಹಸಗಾಥೆ? ವಿಡಿಯೋ ವೈರಲ್​

ಐಪಿಎಸ್​ ಅಧಿಕಾರಿ ರುಪಿನ್​ ಶರ್ಮಾ ಅವರು ಈ ವಿಡಿಯೋ ನೋಡಿ ಆಶ್ಚರ್ಯರಾಗಿದ್ದಾರೆ. ಹಾಗೂ ಈತನ ಸಾಹಸವನ್ನು ನೋಡಿ ಆಫ್ರಿಕಾದ ಬಾಬಾ ರಾಮ್​ದೇವ್​ ಎಂದು ಕರೆದಿದ್ದಾರೆ. ಏನಿರಬಹುದು ಆತನ ಸಾಹಸಗಾಥೆ? ಇಲ್ಲಿದೆ ವಿಡಿಯೋ.

ಐಪಿಎಸ್​ ಅಧಿಕಾರಿ ಈತನನ್ನು ಆಫ್ರಿಕಾದ ಬಾಬಾ ರಾಮ್​ದೇವ್​ ಎಂದಿದ್ದಾರೆ; ಏನಿರಬಹುದು ಈತನ ಸಾಹಸಗಾಥೆ? ವಿಡಿಯೋ ವೈರಲ್​
ವಿಡಿಯೋ ವೈರಲ್​
shruti hegde
|

Updated on:Apr 28, 2021 | 12:31 PM

Share

ಕೆಲವೊಂದು ನಂಬಲಾಗದ ಸಾಹಸಗಳ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​ ಆಗುತ್ತಿದೆ. ಅದೆಷ್ಟೋ ಎತ್ತರದ ಕಟ್ಟಡಗಳನ್ನು ಹತ್ತುವ ಸಾಹಸ, ಮರದಿಂದ ಮರಕ್ಕೆ ಮಂಗನಂತೆ ಜಿಗಿಯುವ ಸಾಹಸ, ರಸ್ತೆಯ ಮೇಲೆ ಮಲಗಿ ಮೈಮೇಲೆ ಕಾರು ಹತ್ತಿಸಿಕೊಳ್ಳುವ ಸಾಹಸಗಳನ್ನು ನೋಡಿರುತ್ತೇವೆ. ಅಂತಹುದೇ ಒಂದು ಸಾಹಸದ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಈತನ ಸಾಹಸವನ್ನು ನೋಡಿದರೆ ನೀವೂ ಆಶ್ಚರ್ಯಚಕಿತರಾಗುತ್ತೀರಾ. ಐಪಿಎಸ್​ ಅಧಿಕಾರಿ ರುಪಿನ್​ ಶರ್ಮಾ ಅವರು ಈ ವಿಡಿಯೋ ನೋಡಿ ಆಶ್ಚರ್ಯರಾಗಿದ್ದಾರೆ. ಹಾಗೂ ಈತನ ಸಾಹಸವನ್ನು ನೋಡಿ ಆಫ್ರಿಕಾದ ಬಾಬಾ ರಾಮ್​ದೇವ್​ ಎಂದು ಕರೆದಿದ್ದಾರೆ. ಒಂದೂವರೆ ನಿಮಿಷದ ವಿಡಿಯೋದಲ್ಲಿ ವ್ಯಕ್ತಿ ವಿಭಿನ್ನ ಸಾಹಸಗಳನ್ನು ಮಾಡುತ್ತಿರುವುದನ್ನು ನೋಡಬಹುದು. ನಿಮಗೂ ಆಶ್ಚರ್ಯವಾಗುವಂತಹ ವ್ಯಕ್ತಿಯ ಸಾಹಸದ ವಿಡಿಯೋ ಇಲ್ಲಿದೆ.

ವಿಡಿಯೋದಲ್ಲಿ ನೋಡಿದಂತೆ ವ್ಯಕ್ತಿ ಮೊದಲು ಹಿಂಬಾಗದಿಂದ ಕಾಲನ್ನು ಮಡಚುತ್ತಾನೆ ಮತ್ತು ಕಾಲನ್ನು ಒಂದು ರೌಂಡ್​ ಸುತ್ತಿಸುತ್ತಾನೆ. ಕೈಗಳನ್ನು ಹಗ್ಗದಂತೆ ಬಳಸಿಕೊಂಡು ಸ್ಕಿಪ್ಪಿಂಗ್​ ಆಡುತ್ತಾನೆ. ಕಾಲುಗಳಲ್ಲಿಯೇ ತಲೆ ಮೇಲಿರುವ ಟೋಪಿಯನ್ನು ತೆಗೆಯುತ್ತಾನೆ. ಕೈಗಳನ್ನು ಮಡಚಿ ವಿಭಿನ್ನ ರೀತಿಯಲ್ಲಿ ನಿಂತುಕೊಳ್ಳುತ್ತಾನೆ. ನೆಲದ ಮೇಲೆ ಕುಳಿತು ತನ್ನ ಕತ್ತಿನ ಮೇಲೆ ಎರಡೂ ಕಾಲುಗಳನ್ನು ಇರಿಸಿಕೊಳ್ಳುವುದನ್ನು ನೋಡಿದರೆ ರೋಮಾಂಚನವಾಗುತ್ತದೆ. ಕಬ್ಬಿಣದ ಸರಳಪಳಿಯಂತೆ ಆತನ ಕೈಕಾಲುಗಳು ತಿರುಗುವುದು ಎಲ್ಲರನ್ನೂ ಆಶ್ಚರ್ಯವನ್ನುಂಟು ಮಾಡಿದೆ. ವಿಡಿಯೋ ನೋಡಿದ ನೆಟ್ಟಿಗರು ಈತನ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾವಿರಕ್ಕೂ ಹೆಚ್ಚು ಜನ ವಿಡಿಯೋವನ್ನು ನೋಡಿದ್ದಾರೆ. ಕಾಮೆಂಟ್​ ಮಾಡುವ ಮೂಲಕ ಈತನ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಮೇಕೆ, ಕುರಿ, ಜಾನುವಾರುಗಳೂ ಪ್ರಯಾಣಿಸುತ್ತಿವೆ; ವೈರಲ್​ ಆಯ್ತು ದೃಶ್ಯ

Published On - 12:30 pm, Wed, 28 April 21

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್