Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಸ್ಟಂಟ್ ಮಾಡಿಕೊಂಡು ಹೋಗಿ ಸ್ಕೂಟರ್‌ ಡಿಕ್ಕಿ ಹೊಡೆದ ಯುವಕರು; ಮಹಿಳೆ ಸಾವು, ಮಗು  ಸ್ಥಿತಿ ಗಂಭೀರ

ಅಪ್ರಾಪ್ತ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್​​ ಮಾಡುತ್ತಾ ವೇಗವಾಗಿ ಬಂದಿದ್ದಾರೆ. ಕ್ಲಿನಿಕ್‌ನಿಂದ ಮನೆಗೆ ತೆರಳುತ್ತಿದ್ದ ಮಹಿಳೆ ಮತ್ತು ಆಕೆಯ 12 ವರ್ಷದ ಮಗಳಿರುವ ಸ್ಕೂಟರ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ.

ಕಾರಿನಲ್ಲಿ  ಸ್ಟಂಟ್ ಮಾಡಿಕೊಂಡು ಹೋಗಿ ಸ್ಕೂಟರ್‌ ಡಿಕ್ಕಿ ಹೊಡೆದ ಯುವಕರು; ಮಹಿಳೆ ಸಾವು, ಮಗು  ಸ್ಥಿತಿ ಗಂಭೀರ
Follow us
ಅಕ್ಷತಾ ವರ್ಕಾಡಿ
|

Updated on:Aug 03, 2024 | 3:09 PM

ಉತ್ತರಪ್ರದೇಶ: ವೇಗವಾಗಿ ಬಂದ ಕಾರು, ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿದ್ದ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್​​ ಮಾಡುತ್ತಾ ವೇಗವಾಗಿ ಚಲಾಯಿಸಿಕೊಂಡು ಬಂದ ಪರಿಣಾಮ, ಕಾರು ನಿಯಂತ್ರಣ ತಪ್ಪಿ ಎದುರಿಗೆ ಬಂದ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿಯಲ್ಲಿದ್ದ ತಾಯಿ ಹಾಗೂ ಮಗು 30 ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ.

ಶುಕ್ರವಾರ ಮಧ್ಯಾಹ್ನ ಕಾನ್ಪುರದ ಕಿದ್ವಾಯಿ ನಗರದಲ್ಲಿ ಈ ನಡೆದಿರುವುದಾಗಿ ವರದಿಯಾಗಿದೆ. ಕಿದ್ವಾಯಿ ನಗರದಲ್ಲಿ ಅಪ್ರಾಪ್ತ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್​​ ಮಾಡುತ್ತಾ ವೇಗವಾಗಿ ಬಂದಿದ್ದಾರೆ. ಈ ವೇಳೆ ಕ್ಲಿನಿಕ್‌ನಿಂದ ಮನೆಗೆ ತೆರಳುತ್ತಿದ್ದ ಮಹಿಳೆ ಮತ್ತು ಆಕೆಯ 12 ವರ್ಷದ ಮಗಳಿರುವ ಸ್ಕೂಟರ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದಾಗ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ನಂತರ, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಚಾಲಕ ಮತ್ತು ಇತರ ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಂಡರು. ಸ್ಥಳೀಯರು ತಕ್ಷಣ ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಹಿಳೆ ಅದಾಗಲೇ ಸಾವನ್ನಪ್ಪಿದ್ದು, ಬಾಲಕಿಗೆ ತೀವ್ರ ಗಾಯಗಳಾಗಿವೆ.

ಇದನ್ನೂ ಓದಿ: ಫೋನ್​​​ ಪಕ್ಕಕ್ಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

ಹೆಲ್ಮೆಟ್ ಧರಿಸಿದ್ದರೂ ಡಿಕ್ಕಿಯ ರಭಸಕ್ಕೆ ಮಹಿಳೆಯ ತಲೆಗೆ ಗಾಯವಾಗಿದ್ದು,ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಿದ್ವಾಯಿ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಪ್ರಾಪ್ತ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 3 August 24

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ