Viral Video: ಬೇಟೆಯಾಡಲು ಬಂದ ಹುಲಿರಾಯನಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿ!

ನದಿಯಲ್ಲಿ ಸಿಂಗಲ್ ಆಗಿ ಬೇಟೆಯಾಡಲು ಹೋದ ಹುಲಿಗೆ ಬಾತುಕೋಳಿ ಚಳ್ಳೆಹಣ್ಣು ತಿನ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಮನರಂಜನೆಯನ್ನು ನೀಡುತ್ತಿದೆ. ವಿಡಿಯೋ 4.8 ಮಿಲಿಯನ್ ವೀಕ್ಷಣೆಗಳನ್ನು ಸ್ವೀಕರಿಸಿದೆ.

Viral Video: ಬೇಟೆಯಾಡಲು ಬಂದ ಹುಲಿರಾಯನಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿ!
ಹುಲಿ ಮತ್ತು ಬಾತುಕೋಳಿ
Follow us
| Updated By: Rakesh Nayak Manchi

Updated on: Jun 10, 2022 | 5:35 PM

ಕೆಲವೊಂದು ಪ್ರಾಣಿಗಳಿಗೆ ನೀರಿನಲ್ಲಿ ಈಜಲು ಬರುತ್ತದೆ. ಈ ಪೈಕಿ ಹುಲಿ ಕೂಡ ಒಂದು. ಹುಲಿಗಳು ನೀರಿನಲ್ಲಿ ಬೇಟೆಯಾಡುವುದು ತೀರಾ ಕಡಿಮೆ. ಹುಲಿಗಳು ಒಂಟಿ ಬೇಟೆಗಾರ ಮತ್ತು ಏಕಾಂಗಿಯಾಗಿ ಬೇಟೆಯಾಡಲು ಬಯಸುತ್ತದೆ. ಅದರಂತೆ ನದಿಯಲ್ಲಿ ಸಿಂಗಲ್ ಆಗಿ ಬೇಟೆಯಾಡಲು ಹೋದ ಹುಲಿ(Tiger)ಗೆ ಬಾತುಕೋಳಿ(Duck) ಚಳ್ಳೆಹಣ್ಣು ತಿನ್ನಿಸಿದ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ಸಖತ್ ಮನರಂಜನೆಯನ್ನು ನೀಡುತ್ತಿದೆ.

ವಿಡಿಯೋದಲ್ಲಿ ಕಾಣುವಂತೆ, ನದಿ ನೀರಿನ ಬಣ್ಣ ತಿಳಿ ಕೇಸರಿಯಾಗಿದೆ. ಇದರಲ್ಲಿ ಬಾತುಕೋಳಿಯೊಂದು ಈಜಾಡುತ್ತಾ ಇರುತ್ತದೆ. ಈ ವೇಳೆ ಹುಲಿಯೊಂದು ಏಕಾಂಗಿಯಾಗಿ ಬಂದು ಬಾತುಕೋಳಿಯನ್ನು ಬೇಟೆಯಾಡಲು ಮುಂದಾಗುತ್ತದೆ. ನಿಧಾನಕ್ಕೆ ಬರುತ್ತಿದ್ದ ಹುಲಿ ಬಾತುಕೋಳಿ ಹತ್ತಿರವಾಗುತ್ತಿದ್ದಂತೆ ವೇಗವಾಗಿ ಮುನ್ನುಗ್ಗಲು ಯತ್ನಿಸಿತು. ಈ ವೇಳೆ ಬಾತುಕೋಳಿಗೆ ಇದ್ದಿದ್ದು ಒಂದೇ ದಾರಿ. ಅದು ನೀರಿನಲ್ಲಿ ಮುಳುಗುವುದು. ಬಾತುಕೋಳಿ ಹುಲಿಯ ಬಾಯಿಯಿಂದ ತಪ್ಪಿಸಿಕೊಳ್ಳಲು ನೀರಿನಲ್ಲಿ ಮುಳುಗಿದೆ. ಅದರಂತೆ ಹುಲಿಗೆ ಬಾತುಕೋಳಿ ಎಲ್ಲಿ ಹೋಯ್ತು ಎಂದು ತಿಳಿಯುವುದಿಲ್ಲ. ಆದರೆ ಬಾತುಕೋಳಿ ನೀರಿನಲ್ಲಿ ಮುಳುಗಿ ಹುಲಿಯ ಹಿಂದಿನಿಂದ ಮೇಲೆ ಬಂದು ಈಜಿಕೊಂಡು ಹೋಗಿದೆ.

ತನ್ನನ್ನು ಬೇಟೆಯಾಡಲು ಬಂದ ಹುಲಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿಯ ವಿಡಿಯೋವನ್ನು ‘Buitengebieden’ ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಬಾತುಕೋಳಿ ಶಾಂತವಾಗಿ ಈಜುವುದನ್ನು ಮತ್ತು ನಂತರ ನಿಧಾನವಾಗಿ ಸಮೀಪಿಸುತ್ತಿರುವ ಹುಲಿಯಿಂದ ಮರೆಮಾಡಲು ನೀರಿನ ಅಡಿಗೆ ಹೋಗುವುದನ್ನು ತೋರಿಸುವ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral) ಆಗುತ್ತಿದೆ. ಟ್ವಿಟ್ಟರ್ ಬಳಕೆದಾರರು ವೀಡಿಯೊವನ್ನು ಉಲ್ಲಾಸದಾಯಕವೆಂದು ಹೇಳಿಕೊಂಡಿದ್ದು, ವೈರಲ್ ವಿಡಿಯೋ 4.8 ಮಿಲಿಯನ್ ವೀಕ್ಷಣೆಗಳನ್ನು ಸ್ವೀಕರಿಸಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ