AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಟೆಯಾಡಲು ಬಂದ ಹುಲಿರಾಯನಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿ!

ನದಿಯಲ್ಲಿ ಸಿಂಗಲ್ ಆಗಿ ಬೇಟೆಯಾಡಲು ಹೋದ ಹುಲಿಗೆ ಬಾತುಕೋಳಿ ಚಳ್ಳೆಹಣ್ಣು ತಿನ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಮನರಂಜನೆಯನ್ನು ನೀಡುತ್ತಿದೆ. ವಿಡಿಯೋ 4.8 ಮಿಲಿಯನ್ ವೀಕ್ಷಣೆಗಳನ್ನು ಸ್ವೀಕರಿಸಿದೆ.

Viral Video: ಬೇಟೆಯಾಡಲು ಬಂದ ಹುಲಿರಾಯನಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿ!
ಹುಲಿ ಮತ್ತು ಬಾತುಕೋಳಿ
TV9 Web
| Edited By: |

Updated on: Jun 10, 2022 | 5:35 PM

Share

ಕೆಲವೊಂದು ಪ್ರಾಣಿಗಳಿಗೆ ನೀರಿನಲ್ಲಿ ಈಜಲು ಬರುತ್ತದೆ. ಈ ಪೈಕಿ ಹುಲಿ ಕೂಡ ಒಂದು. ಹುಲಿಗಳು ನೀರಿನಲ್ಲಿ ಬೇಟೆಯಾಡುವುದು ತೀರಾ ಕಡಿಮೆ. ಹುಲಿಗಳು ಒಂಟಿ ಬೇಟೆಗಾರ ಮತ್ತು ಏಕಾಂಗಿಯಾಗಿ ಬೇಟೆಯಾಡಲು ಬಯಸುತ್ತದೆ. ಅದರಂತೆ ನದಿಯಲ್ಲಿ ಸಿಂಗಲ್ ಆಗಿ ಬೇಟೆಯಾಡಲು ಹೋದ ಹುಲಿ(Tiger)ಗೆ ಬಾತುಕೋಳಿ(Duck) ಚಳ್ಳೆಹಣ್ಣು ತಿನ್ನಿಸಿದ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ಸಖತ್ ಮನರಂಜನೆಯನ್ನು ನೀಡುತ್ತಿದೆ.

ವಿಡಿಯೋದಲ್ಲಿ ಕಾಣುವಂತೆ, ನದಿ ನೀರಿನ ಬಣ್ಣ ತಿಳಿ ಕೇಸರಿಯಾಗಿದೆ. ಇದರಲ್ಲಿ ಬಾತುಕೋಳಿಯೊಂದು ಈಜಾಡುತ್ತಾ ಇರುತ್ತದೆ. ಈ ವೇಳೆ ಹುಲಿಯೊಂದು ಏಕಾಂಗಿಯಾಗಿ ಬಂದು ಬಾತುಕೋಳಿಯನ್ನು ಬೇಟೆಯಾಡಲು ಮುಂದಾಗುತ್ತದೆ. ನಿಧಾನಕ್ಕೆ ಬರುತ್ತಿದ್ದ ಹುಲಿ ಬಾತುಕೋಳಿ ಹತ್ತಿರವಾಗುತ್ತಿದ್ದಂತೆ ವೇಗವಾಗಿ ಮುನ್ನುಗ್ಗಲು ಯತ್ನಿಸಿತು. ಈ ವೇಳೆ ಬಾತುಕೋಳಿಗೆ ಇದ್ದಿದ್ದು ಒಂದೇ ದಾರಿ. ಅದು ನೀರಿನಲ್ಲಿ ಮುಳುಗುವುದು. ಬಾತುಕೋಳಿ ಹುಲಿಯ ಬಾಯಿಯಿಂದ ತಪ್ಪಿಸಿಕೊಳ್ಳಲು ನೀರಿನಲ್ಲಿ ಮುಳುಗಿದೆ. ಅದರಂತೆ ಹುಲಿಗೆ ಬಾತುಕೋಳಿ ಎಲ್ಲಿ ಹೋಯ್ತು ಎಂದು ತಿಳಿಯುವುದಿಲ್ಲ. ಆದರೆ ಬಾತುಕೋಳಿ ನೀರಿನಲ್ಲಿ ಮುಳುಗಿ ಹುಲಿಯ ಹಿಂದಿನಿಂದ ಮೇಲೆ ಬಂದು ಈಜಿಕೊಂಡು ಹೋಗಿದೆ.

ತನ್ನನ್ನು ಬೇಟೆಯಾಡಲು ಬಂದ ಹುಲಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿಯ ವಿಡಿಯೋವನ್ನು ‘Buitengebieden’ ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಬಾತುಕೋಳಿ ಶಾಂತವಾಗಿ ಈಜುವುದನ್ನು ಮತ್ತು ನಂತರ ನಿಧಾನವಾಗಿ ಸಮೀಪಿಸುತ್ತಿರುವ ಹುಲಿಯಿಂದ ಮರೆಮಾಡಲು ನೀರಿನ ಅಡಿಗೆ ಹೋಗುವುದನ್ನು ತೋರಿಸುವ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral) ಆಗುತ್ತಿದೆ. ಟ್ವಿಟ್ಟರ್ ಬಳಕೆದಾರರು ವೀಡಿಯೊವನ್ನು ಉಲ್ಲಾಸದಾಯಕವೆಂದು ಹೇಳಿಕೊಂಡಿದ್ದು, ವೈರಲ್ ವಿಡಿಯೋ 4.8 ಮಿಲಿಯನ್ ವೀಕ್ಷಣೆಗಳನ್ನು ಸ್ವೀಕರಿಸಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ