AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಎಣ್ಣೆಬಾಣಲೆಯಲ್ಲಿ ಮೀಯುತ್ತಿರುವ ಇಲಿ, ಪಾದಗಳಿಂದ ಹಿಟ್ಟು ನಾದುತ್ತಿರುವ ಯುವಕರು

Kneading Flour Dough with Feet : ಕಾಶ್ಮೀರದ ಬಡಗಾಮ್​ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಹಾ ಅಂಗಡಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಅಂಗಡಿಯನ್ನೂ ಸೀಲ್ ಮಾಡಿದ್ದಾರೆ.

Viral Video : ಎಣ್ಣೆಬಾಣಲೆಯಲ್ಲಿ ಮೀಯುತ್ತಿರುವ ಇಲಿ, ಪಾದಗಳಿಂದ ಹಿಟ್ಟು ನಾದುತ್ತಿರುವ ಯುವಕರು
ಕಾಲಿನಿಂದ ಹಿಟ್ಟು ನಾದುತ್ತಿರುವುದು, ಎಣ್ಣೆಬಾಣಲಿಯಲ್ಲಿ ಇಲಿ.
TV9 Web
| Edited By: |

Updated on:Sep 26, 2022 | 10:36 AM

Share

Viral Video : ಇಷ್ಟುವರ್ಷಗಳಲ್ಲಿ ಇಂಥ ಅದೆಷ್ಟು ವಿಡಿಯೋಗಳು ವೈರಲ್ ಆಗಿವೆಯೋ ಏನೋ. ಆದರೂ ನಮ್ಮ ಜನ ಪಾನಿಪುರಿ, ಗೋಲ್​ಗಪ್ಪಾ, ಸಮೋಸಾ, ದಹೀಪುರಿ ಹೀಗೆ ಸ್ಟ್ರೀಟ್​ ಚಾಟ್​ನ ವ್ಯಾಮೋಹದಿಂದ ಹೊರಬರಲು ಸಾಧ್ಯವಾಗುತ್ತಲೇ ಇಲ್ಲ. ಸಣ್ಣಪುಟ್ಟ ಅಂಗಡಿಗಳಿಗೆ ಪೂರೈಕೆಯಾಗುವ ಖಾದ್ಯಗಳನ್ನು ಎಂಥ ಸ್ಥಳದಲ್ಲಿ ತಯಾರಿಸುತ್ತಾರೆ ಎಂಬ ಚಿತ್ರಣವನ್ನು ಇಲ್ಲಿ ವಿವರಿಸುವುದು ಅನಗತ್ಯ ಎನ್ನಿಸುತ್ತದೆ. ಏಕೆಂದರೆ ಈ ಹಿಂದೆ ನೋಡಿದ ವಿಡಿಯೋಗಳ ತುಣುಕುಗಳು ನಿಮ್ಮ ನೆನಪಿನ ಕೋಶದಲ್ಲಿ ಚೆನ್ನಾಗಿಯೇ ಅಚ್ಚಾಗಿರಲು ಸಾಕು. ಈಗ ವೈರಲ್ ಆಗಿರುವ ದೃಶ್ಯಗಳನ್ನು ನೋಡಿ. ದೃಶ್ಯ 1 : ಇಬ್ಬರು ಯುವಕರು ಹಿಟ್ಟನ್ನು ಪಾದಗಳಿಂದ ತುಳಿದು ಹದ ಮಾಡುತ್ತಿದ್ದಾರೆ. ದೃಶ್ಯ 2 : ದೊಡ್ಡ ಬಾಣಲೆಯಲ್ಲಿರುವ ಎಣ್ಣೆಯಲ್ಲಿ ಬಿದ್ದ ಇಲಿ ಹೊರಬರಲು ಆಗದೆ ಬಿದ್ದು ಹೊರಳಾಡುತ್ತಿದೆ.

ಕಾಶ್ಮೀರದ ಬಡಗಾಮ್​ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಹಾ ಅಂಗಡಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ ಅಷ್ಟೇ ಅಲ್ಲ ಅಂಗಡಿಯನ್ನು ಸೀಲ್ ಮಾಡಿದ್ದಾರೆ. ಆರೋಪಿಯನ್ನು ಬಡಗಾಮ್​ನ ಓಂಪುರಾದ ಇಮ್ರಾನ್​ ಹೋಟೆಲ್​ನ ಇಮ್ರಾನ್​ ಹುಸೇನ್​ ಹಲ್ವಾಯಿ ಎಂದು ಗುರುತಿಸಲಾಗಿದೆ.

ಬಡಗಾಮ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶುಚಿರಹಿತ ವಾತಾವರಣದಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಕ್ಕಾಗಿ ಸ್ಥಳೀಯರು ಪೊಲೀಸರನ್ನು ಶ್ಲಾಘಿಸಿದ್ದಾರೆ.

ರಸ್ತೆಬದಿಯ ತಿಂಡಿಗಳ ರುಚಿಗೆ ಮಾರುಹೋಗುವವರು ಇನ್ನಾದರೂ ಯೋಚಿಸಿ. ಎಲ್ಲಿ ಹೇಗೆ ತಯಾರಿಸುತ್ತಾರೆ ಎಂಬುದನ್ನು ತಿಳಿದುಕೊಂಡು ತಿನ್ನುವಂತಿದ್ದರೆ ಸರಿ. ಇಲ್ಲವಾದಲ್ಲಿ ಅನಾರೋಗ್ಯ ತಪ್ಪಿದ್ದಲ್ಲ.

ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:29 am, Mon, 26 September 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ